ಇಂಡಿ | ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ: ಶಾಸಕ ಯಶವಂತರಾಯಗೌಡ ಪಾಟೀಲ

Date:

ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತದಿಂದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಇಂಡಿ ತಾಲೂಕಿನ ನಿಂಬೆಗೆ ದೊರಕಿರುವ ಜಿಐ ಟ್ಯಾಗ್‌ನಿಂದ ಇಂಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಕು ಚೆಲ್ಲಿದೆ. ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ಇಂಡಿ, ಭವಿಷ್ಯದಲ್ಲಿ ಮುಂದುವರೆದ ತಾಲೂಕು ಆಗಲಿದೆ. ಸಿಎಂ ಸಿದ್ದರಾಮಯ್ಯನವರೇ ಇದನ್ನು ಹೇಳಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಗೆ ಮಂಜೂರು ಆಗಬೇಕಾಗಿದ್ದ ಕಾರ್ಮಿಕ ಮಕ್ಕಳ ವಸತಿ ಶಾಲೆಯನ್ನು ಇಂಡಿ ತಾಲೂಕಿಗೆ ತಂದಿದ್ದೇನೆ. ಮಾತಿಗಿಂತ ಕಾರ್ಯಗಳು ಮಾತನಾಡಬೇಕು ಎಂಬ ಸಿದ್ದಾಂತ ಹೊಂದಿದವನು ನಾನು. ಕೇಂದ್ರ, ರಾಜ್ಯಗಳು ಸಮನ್ವಯತೆಯಿಂದ ಆಡಳಿತ ನಡೆಸಬೇಕಾಗಿದೆ. ದೇಶಾಭಿಮಾನದಿಂದ ಹುತಾತ್ಮರ ಕನಸು ನನಸು ಮಾಡಲು ಶ್ರಮಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸರ್ವರಿಗೂ ಸಮಬಾಳು, ಸಮಪಾಲು ಸಿದ್ಧಾಂತದ ಆಧಾರದ ಮೇಲೆ ರಾಜ್ಯ ಸರ್ಕಾರ ನಡೆಯುತ್ತಿದೆ. ಜನರ ಕಲ್ಯಾಣಕ್ಕೆ ಸಂವಿಧಾನವೇ ಸ್ಫೂರ್ತಿಯಾಗಿದೆ. ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡು ನಮ್ಮದ್ದು, ತ್ಯಾಗ, ಬಲಿದಾನದಲ್ಲಿಯೂ ನಮ್ಮ ಜಿಲ್ಲೆ ಮುಂದಿದೆ. ಜಿಲ್ಲೆಯಲ್ಲಿ ಮಳೆಯಾಗಿದೆ. ಕಾಲುವೆ ಮೂಲಕವೂ ಕೆರೆಗಳನ್ನು ತುಂಬಿಸಲಾಗಿದೆ” ಎಂದು ಹೇಳಿದರು.

“ನಮ್ಮ ಪೂರ್ವಜರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನವನ್ನು ಸ್ಮರಿಸುವ ದಿನ ಆಗಸ್ಟ್‌ 15. ತ್ಯಾಗ, ಬಲಿದಾನದ ಮೂಲಕ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಇಂದು ನಾವೆಲ್ಲರೂ ಸಂಭ್ರಮಿಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ತಳಕಲ್‌ನಲ್ಲಿ 20 ಮಂದಿ ಮೇಲೆ ಬೀದಿ ನಾಯಿಗಳ ದಾಳಿ: ಇಬ್ಬರು ಬಾಲಕರು ಜಿಲ್ಲಾಸ್ಪತ್ರೆಗೆ ದಾಖಲು

ಡಿವೈಎಸ್‌ಪಿ ಜಗದೀಶ ಎಚ್ ಎಸ್ ತಹಶೀಲ್ದಾರ್ ಬಿ ಎಸ್ ಕಡಭಾವಿ, ತಾಪಂ ಇಒ ಡಾ. ಬಿ ಎಚ್ ಕನ್ನೂರ, ಪುರಸಭೆ ಮುಖ್ಯಾಧಿಕಾರಿ ಸಿದ್ರಾಯ ಕಟ್ಟಿಮನಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ ಬೊರಾಮಣಿ, ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಬಿಇಒ ಮುಜಾವರ, ಭೀಮನಗೌಡ ಪಾಟೀಲ, ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಸಾಗರ ಬಿರಾದಾರ, ಶ್ರೀಶೈಲಗೌಡ ಪಾಟೀಲ, ಜಹಾಂಗೀರಸೌದಾಗರ, ಮುಸ್ತಾಕ ಇಂಡಿಕರ, ಭೀಮಾಶಂಖರ ಮೂರಮನ, ಉಮೇಶ ದೇಗಿನಾಳ, ಸತೀಶ ಕುಂಬಾರ, ಶಬ್ಬಿರ ಖಾಜಿ, ಅಯುಬ ಬಾಗವಾನ, ಜಾವೇದ ಮೋಮಿನ, ಬಾಬು ಗುಡಮಿ, ಮಹಾದೇವಪ್ಪ ಏವೂರ, ಎಚ್.ಎಸ್.ಪಾಟೀಲ, ದಯಾನಂದ ಮಠ, ಭೀಮಣ್ಣ ಕವಲಗಿ, ಸಿಪಿಐ ಪ್ರದೀಪ ಭೀಸೆ, ಪಿಎಸೈ ಸುರೇಶ ಗೆಜ್ಜಿ, ಚಂದ್ರಶೇಖರ ವಾಲಿಕಾರ, ಎಸ್.ರ್ಆ.ಮೇಂಡೆಗಾರ, ಮಂಜುನಾಥ ಧೂಳೆ, ಉಮೇಶ ಲಮಾಣಿ, ಎಸ್ ಬಿ ಗದ್ಯಾಳ, ಹಣಮಂತ ಅರವತ್ತು, ಬಸವರಾಜ ರಾವೂರ, ಸಂತೋಷ ಬೊರಗಿ ಸಂಜೀವ ಹೊಟಗಾರ ಕಾರ್ಯಕ್ರಮದಲ್ಲಿ ಇದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರ ಮಗಳು ನಡೆದವು. ಇದೇ ಸಂದರ್ಭದಲ್ಲಿ ಪುರಸಭೆ ಸದಸ್ಯರು ಸನ್ಮಾನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...