ಸಾಮಾಜಿಕ ಜಾಲತಾಣ ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ: ಪ್ರಾ. ರಮೇಶ ಅರೋಲಿ

Date:

ಸಾಮಾಜಿಕ ಮಾಧ್ಯಮಗಳ ಹೆಚ್ಚು ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ ಎಂದು ದೆಹಲಿಯ ಕಮಲಾ‌ ನೆಹರು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ ಅರೋಲಿ ಅಭಿಪ್ರಾಯಪಟ್ಟರು.

ಧಾರವಾಡದ ಕರ್ನಾಟಕ ಕಲಾ‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಪತ್ರಿಕೋದ್ಯಮದಲ್ಲಿ ಮನೋವಿಜ್ಞಾನ ಪಾತ್ರ’ ಉಪನ್ಯಾಸ ಕಾರ್ಯಕ್ರದಲ್ಲಿ ಅವರು ಮಾತನಾಡಿದರು. “ವಾಸ್ತವದಲ್ಲಿ ತಾರುಣ್ಯದಲ್ಲಿ ಭಾವನೆಗಳು ಹೆಚ್ಚಾಗಿ ಯುವ ಸಮುದಾಯವನ್ನು ವಿಚಲಿತಗೊಳಿಸುತ್ತದೆ ಎಂದ ಅವರು ಮಾಧ್ಯಮಗಳ ನಿರ್ಮಿತ ಸರಕು ಬೇಗನೇ ಜನಪ್ರಿಯತೆ ಆಗುತ್ತಿದೆ. ಜಾಹಿರಾತುಗಳ ಜನರನ್ನು ಮಾನಸಿಕವಾಗಿ ನಿಯಂತ್ರಿಸುತ್ತಿವೆ. ಮಾಧ್ಯಮಗಳು ಜನರ ಮಾನಸಿಕತೆಗೆ ಅನುಗುಣವಾಗಿ ಸುದ್ದಿಯನ್ನು ಪ್ರಕಟಿಸುತ್ತಿವೆ ಮತ್ತು ಪ್ರಸಾರ ಮಾಡುತ್ತಿವೆ. ಪ್ರಸ್ತುತ ವಾಸ್ತವಕ್ಕೆ ದೂರ ಇರುವ ಮಾಹಿತಿ ಹೆಚ್ಚು ಆಕರ್ಷಿಕವಾಗಿವೆ. ಸಾಮಾಜಿಕ ಮಾಧ್ಯಮಗಳು ಜನರನ್ನು ಮಾನಸಿಕವಾಗಿ ಹತ್ತಿರವಾಗಿ ಜನರನ್ನು ಆಕರ್ಷಿಸುತ್ತಿವೆ” ಎಂದರು.

ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತೀಶ್ ಜಾಧವ್ ಮಾತನಾಡಿ, “ಮಾದ್ಯಮ ಕ್ಷೇತ್ರ ಅಗಾಧವಾಗಿ ಬೆಳೆಯುತ್ತಿದೆ. ಇಂದು ಮಾಧ್ಯಮಗಳು ಜನರನ್ನು ಮಾನಸಿಕವಾಗಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಅವರು ಸಾಮಾಜಿಕ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮಗಳತ್ತ ಜನರು ಹೆಚ್ಚು ಆಕರ್ಷಿತರಾದರೂ ಪತ್ರಿಕೆಗಳು ಜನರ ಭಾವನಾತ್ಮಕ ಸಂಬಂಧವನ್ನು ಹೊಂದಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಿರಿಯ ‌ಪ್ರಾಧ್ಯಾಪಕ ಪ್ರೊ. ಅಶೋಕ ಐನಾಪೂರ ಮಾತನಾಡಿ, “ಆಧುನಿಕ ತಂತ್ರಜ್ಞಾನ ಮತ್ತು ಅದರ ಪರಿಕರಗಳು ಯುವ ಸಮುದಾಯವನ್ನು ಮಾನಸಿಕವಾಗಿ ತೀವ್ರವಾಗಿ ಆಕ್ರಮಿಸಿವೆ. ತಂತ್ರಜ್ಞಾನ ಆಧಾರಿತ ವೇದಿಕೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದ ಅವರು ಮಾಧ್ಯಮಕ್ಕೆ ಬಹಳಷ್ಟು ಸವಾಲುಗಳು ಮುಂದಿವೆ. ಪ್ರಸ್ತುತ ಸುದ್ದಿ, ಮಾಹಿತಿಯನ್ನು ಸತ್ಯಾ ಸತ್ಯತ್ತೆಯನ್ನು ಅರಿತುಕೊಳ್ಳುವದು ಅವಶ್ಯಕತೆ ಇದೆ ಎಂದರು. ಮಾಧ್ಯಮಕ್ಕಿಂತ ಸಾಮಾಜಿಕ ಮಾಧ್ಯಮ ತೀವ್ರವಾಗಿ ಜನರ ಮೇಲೆ ಭಾದಿಸಿದೆ” ಎಂದರು.

ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಕಾಂಬಳೆ, ಡಾ.ಗೀತಾ ಪಾಸ್ತೆ, ಪ್ರೊ.ಗುರು ಹೆಗಡೆ, ಡಾ. ಸಿ.ಬಿ.ಐನಳ್ಳಿ, ಸೇರಿದಂತೆ ಮನೋವಿಜ್ಞಾನ ಮತ್ತು ‌ಪತ್ರಿಕೊದ್ಯಮ ವಿಷಯದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...