ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ಮೂಲಸೌಲಭ್ಯಗಳ ಹೆಚ್ಚಳ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್‌ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರು ನಗರದಲ್ಲಿ ವಿಶೇಷ ಸಭೆ ನಾಡೆಸಿ ಮಾತನಾಡಿ, “ಗುಣಮಟ್ಟದ ಕುಡಿಯುವ ನೀರು ಸರಬರಾಜು, ಸುಸ್ಥಿರ ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ನೀರು ಮರುಬಳಕೆ, ಘನತ್ಯಾಜ್ಯ ಬೇರ್ಪಡಿಸುವಿಕೆ ಹಾಗೂ ವಿಲೇವಾರಿ, ಉತ್ತಮ ಸಂಚಾರಿ ವ್ಯವಸ್ಥೆ, ಹಸಿರೀಕರಣ ಮುಂತಾದ ಮೂಲ ಸೌಲಭ್ಯಗಳನ್ನು ಕಲಬುರಗಿ ನಗರಕ್ಕೆ ಒದಗಿಸಲು ಯೋಜಿಸಲಾಗಿದೆ” ಎಂದು ತಿಳಿಸಿದರು.

“ಕಲಬುರಗಿ ನಗರವನ್ನು ಅತ್ಯುತ್ತಮ ಮೂಲಭೂತ ಸೌಲಭ್ಯಗಳ ನಗರವಾಗಿಸುವ ಮೂಲಕ ಹೆಚ್ಚು ಉದ್ದಿಮೆಗಳನ್ನು ಆಕರ್ಷಿಸುವದರೊಂದಿಗೆ ಹೆಚ್ಚೆಚ್ಚು ಮಂದಿ ಯುವಕ ಯವತಿಯರಿಗೆ ಉದ್ಯೋಗ ಸೃಷ್ಟಿಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪ್ರಿಯಾಂಕ್‌ ಖರ್ಗೆ ಸಭೆ 1

“ನಗರದ ನೈರ್ಮಲ್ಯ ವ್ಯವಸ್ಥೆಯನ್ನು ಸುಧಾರಿಸುವ ಅವಶ್ಯಕತೆ ಇದೆಯೆಂದು ಹೇಳಿದ ಸಚಿವರು ಈಗಿನ ಶೇ.50ರಷ್ಟಿರುವ ನೈರ್ಮಲ್ಯ ವ್ಯವಸ್ಥೆಯನ್ನು ನೂರಕ್ಕೆ ನೂರರಷ್ಟು ಬಲಪಡಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ. ಈ ಸಲುವಾಗಿ ನೈರ್ಮಲ್ಯ ನೌಕರರ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂಬ ಅಂಶವನ್ನು ವಿವರಿಸಿದರಲ್ಲದೆ, ನಗರದ ನೂರು ಲಕ್ಷ ಚದರ ಅಡಿ ಪ್ರದೇಶದಲ್ಲಿ ಉದ್ಯಾನ ಹಾಗೂ ಮರಗಳನ್ನು ಪೋಷಿಸುವುದರೊಂದಿಗೆ ಕಲಬುರಗಿ ನಗರವನ್ನು ಹಸಿರೀಕರಣಗೊಳಿಸುವ ಯೋಜನೆಯನ್ನು ರೂಪಿಸಲಾಗುವುದು” ಎಂದು ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

ಸಚಿವರ ಯೋಜನೆಗಳಿಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹ್ಯೂಮನ್‌ ಸೆಟಲ್‌ಮೆಂಟ್‌ ಸಂಸ್ಥೆಯು ಸಿದ್ಧಪಡಿಸಿದ್ದ ತಜ್ಞರನ್ನು ಒಳಗೊಂಡ ವರದಿಯನ್ನು ಸಚಿವರು ಮತ್ತು ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿತು.

ಸಭೆಯಲ್ಲಿ ಕಲಬುರಗಿ ಶಾಸಕ ಅಲ್ಲಮಪ್ರಭು ಪಾಟೀಲ್‌, ಶ್ರೀಮತಿ ಕನೀಜ್‌ ಫಾತೀಮಾ, ಕಲಬುರಗಿ ಮಹಾನಗರಪಾಲಿಕೆ ಮೇಯರ್‌ ಎಲ್ಲಪ್ಪ ನಾಯ್ಕೋಡಿ, ಕುಡಾ ಅಧ್ಯಕ್ಷ ಮಜರ್‌ ಆಲಂ ಖಾನ್‌, ಕಲಬುರಗಿ ಮಹಾನಗರಪಾಲಿಕೆ ಆಯುಕ್ತ ಅವಿನಾಶ್‌ ಸಿಂಧೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...