ತಾಳಿಕೋಟೆ ತಾಲೂಕು ಆಸ್ಪತ್ರೆ ಮೂಲ ಸೌಕರ್ಯ ಕುಂಠಿತ; ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ

Date:

ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಚಬನೂರ ಗ್ರಾಮಕ್ಕೆ ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲ ಅವರು ಆಗಮಿಸಿದ್ದ ವೇಳೆ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಭುಗೌಡ ಬಿ ಎಎಲ್ ಅವರ ನೇತೃತ್ವದಲ್ಲಿ ಸ್ಥಳೀಯರು ಮನವಿ ಸಲ್ಲಿಸಿ ಮಾತನಾಡಿದ್ದಾರೆ.

“ಸಮುದಾಯ ಆರೋಗ್ಯ ಕೇಂದ್ರವನ್ನು ವಿಸ್ತರಿಸಲಾಗಿದೆ. ದೊಡ್ಡ ಕಟ್ಟಡ ನಿರ್ಮಾಣವಾಗಿದೆ. ಆದರೆ ಅಗತ್ಯವಿರುವ ಮಕ್ಕಳ ತಜ್ಞರು, ಜನರಲ್ ಸರ್ಜನ್, ಕಣ್ಣಿನ ವೈದ್ಯರು ఇల్ల. ತಾಳಿಕೋಟೆ ತಾಲೂಕಿನವರು ಅಲ್ಲದೆ ಪಕ್ಕದ ಸುರಪುರ, ಹುಣಸಗಿ ತಾಲೂಕಿನ ಬಡರೋಗಿಗಳೂ ಕೂಡ ಚಿಕಿತ್ಸೆಗಾಗಿ ಬರುತ್ತಾರೆ. ವೈದ್ಯರಿಲ್ಲದಿರುವ ಕಾರಣ ಖಾಸಗಿ ಆಸ್ಪತ್ರೆಗೋ ಇಲ್ಲವೇ ಜಿಲ್ಲಾಸ್ಪತ್ರೆಗೋ ತಪಾಸಣೆಗೆ ಹೋಗುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಳಿಕೋಟೆ ತಾಲೂಕು ಕೇಂದ್ರವಾದರೂ ಮುದ್ದೇಬಿಹಾಳ ತಾಲೂಕು ಕೇಂದ್ರಕ್ಕೆ ಹೋಗಿ ರೆಫರೆನ್ಸ್‌ ಲೆಟರ್ ತರಬೇಕಾಗಿದೆ. ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಎಕ್ಸ್‌-ರೇ, ದಂತ ಚಿಕಿತ್ಸೆ ಯಂತ್ರಗಳು, ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ಘಟಕ(ಐಸಿಯು)ಗಳಿದ್ದರೂ ಅವುಗಳನ್ನು ಸಮರ್ಪಕವಾಗಿ ಬಳಸಬೇಕಾದ ಪರಿಣಿತ ಸಿಬ್ಬಂದಿ ಇಲ್ಲ. ರಕ್ತಭಂಡಾರದ ಸೌಭ್ಯ, ಜೆಎಸ್‌ವಿ, 108 ನಗು-ಮಗು ಆ್ಯಂಬುಲೆನ್ಸ್‌ಗಳ ಸೌಲಭ್ಯಗಳು ಸರಿಯಾಗಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ : ಸಚಿವ ಕೆ ಎನ್ ರಾಜಣ್ಣ

“ವಿವಿಧ ಸಂಘಟನೆಗಳಿಂದ ತಹಶೀಲ್ದಾರ್, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಬದಲಾವಣೆ ಕಂಡುಬಂದಿಲ್ಲ. ತಾಲೂಕು ಕೇಂದ್ರವನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನೆರವಾಗಬೇಕು” ಎಂದು ಮನವಿ ಮಾಡಿಕೊಂಡರು.

ತಾಳಿಕೋಟೆಯ ಎಪಿಜೆ ಕಲಾಂ ಫೌಂಡೇಷನ್ ಅಧ್ಯಕ್ಷ ಶಫೀಕ್ ಇನಾಮದಾರ, ಫೌಂಡೇಷನ್ ಸಂಗಡಿಗರಾದ ಮಹಾಂತೇಶ ಮುರಾಳ, ಹನೀಫ್ ಜಮಾದಾರ, ಕಾಸು ಮಾದರ, ಹುಸೇನ್ ಪಟೇಲ, ಪೀರ್ ಅಹಮದ್ ಖಾಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...