ತೆರಿಗೆ ಹಂಚಿಕೆ: ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯಕ್ಕೆ ಖಂಡನೆ; ಕೇಂದ್ರದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

Date:

ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎನ್ ಪ್ರತಾಪ್ ಸಿಂಹ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರಗಳನ್ನು ಬೆಂಬಲಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ರಾಜ್ಯಗಳು  ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಕೇಂದ್ರ ಸರ್ಕಾರ ಅಡ್ಡಿಪಡಿಸಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ತನ್ನ ಪನಸ್ಸಿಗೆ ತೋಚಿದಂತೆ ಅನುದಾನ ಹಂಚಿಕೆ ಮಾಡಿ, ರಾಜ್ಯಗಳು ಸಾಲ ಮಾಡುವಂತೆ ಮಾಡುತ್ತಿದೆ. ಇಂತಹ ಧೋರಣೆಯನ್ನು ನಿಲ್ಲಿಸಿ, ನ್ಯಾಯಯುತವಾಗಿ ತೆರಿಗೆ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ಇಟಿ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯ ಸರ್ಕಾರಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು. ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಬಿ.ಎನ್ ಮಂಜುನಾಥ್, ಚಂದ್ರತೇಜಸ್ವಿ, ಎನ್ ವೆಂಕಟಾಚಲಯ್ಯ, ಟಿ ಯಶವಂತ್, ವಿಮಲಾ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...