ಬೀದರ್‌ | ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ಸೂಚನೆ

Date:

ಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ.11 ರಿಂದ ಏ.28ರ ವರೆಗೆ ಭಾನುವಾರ ಹೊರತುಪಡಿಸಿ 41 ದಿನ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್‌ ಬದೋಲೆ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಧ್ಯಾಹ್ನ ಬಿಸಿಯೂಟವನ್ನು ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸೇರಿದಂತೆ ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಬೇಕು ಎಂದು ಸೋಮವಾರ ನಿರ್ದೇಶನ ನೀಡಿದ್ದಾರೆ.

ಏ.11 ರಿಂದ ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಲಿದ್ದು, ಅಂದಿನಿಂದಲೇ ರಜೆ ಬಿಸಿಯೂಟ ಆರಂಭವಾಗಬೇಕು. ಶಾಲೆಯ ಆಯ್ಕೆ ಮತ್ತು ಗ್ರಾಮವು ಕೇಂದ್ರ ಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಹೆಚ್ಚು ಮಕ್ಕಳಿರುವ ಶಾಲೆಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಿರುವ ಶಾಲೆಯಲ್ಲಿ ಹೆಚ್ಚುವರಿ ಶಾಲೆ ಇರುವ ಮಕ್ಕಳು ಸಹ ಬಂದು ಊಟ ಮಾಡಬಹುದು. 250ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ನಿರ್ವಹಣೆಗೆ ಹೆಚ್ಚುವರಿ ಶಿಕ್ಷಕರನ್ನು ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಿಸಬೇಕೆಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಯೂಟ ನಿರ್ವಹಣೆ ಹಾಗೂ ವಿತರಣೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆ ಮುಖ್ಯ ಶಿಕ್ಷಕರ ಮೇಲಿದೆ, ಅಗತ್ಯವಿದ್ದಲ್ಲಿ ನೋಡಲ್ ಶಿಕ್ಷಕರನ್ನು ನೇಮಿಸಿಕೊಳ್ಳವಬೇಕು. ಮಕ್ಕಳ ಸಂಖ್ಯೆ ಹೆಚ್ಚಿದ್ದಲ್ಲಿ ಪಕ್ಕದ ಶಾಲೆಯನ ಅಡುಗೆ ಸಿಬ್ಬಂದಿಗಳ ಸೇವೆ ಬಳಸಿಕೊಳ್ಳಬಹುದಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಬಿಸಿಯೂಟ ಮಾಡಲು ಕಳುಹಿಸುತ್ತಾರೆ ಅವರಿಂದ ಒಪ್ಪಿಗೆ ಪತ್ರ ಸಂಗ್ರಹಿಸಬೇಕು. ರಜೆಯಲ್ಲಿ ಬಂದು ಊಟ ಮಾಡುವ ವಿದ್ಯಾರ್ಥಿಗಳ ವಿವರವನ್ನು ಸಂಗ್ರಹಿಸಬೇಕು. ಆದರಂತೆ ಮಕ್ಕಳಿಗೆ ಮಾತ್ರ ಈ ಹಿಂದಿನ ಮೆನುವಿನಂತೆ ಊಟ ತಯಾರು ಮಾಡಿ ರಜಾ ದಿನ ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ ಬಿಸಿಯೂಟ ವಿತರಿಸಲು ಸೂಚಿಸಿದ್ದಾರೆ.

ಬೀದರ ಜಿಲ್ಲೆಯ ರಜಾ ದಿನಗಳಲ್ಲಿ ಬಿಸಿಯೂಟದ ವಿವರ :

ಬೇಸಿಗೆ ರಜಾ ಅವಧಿಯಲ್ಲಿ ಮಧ್ಯಾಹ್ನ ಬಿಸಿಯೂಟಕ್ಕೆ ಗುರುತಿಸಲ್ಪಟ್ಟ ಕೇಂದ್ರ ಶಾಲೆಗಳ ಸಂಖ್ಯೆ 1,143 ಇದೆ. ಟ್ಯಾಗ್ ಮಾಡಲಾದ ಶಾಲೆಗಳ ಸಂಖ್ಯೆ 561 ಇದೆ. ಗುರುತಿಸಲ್ಪಟ್ಟ ಕೇಂದ್ರ ಶಾಲೆಗಳ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು 1,06,432 ಮಕ್ಕಳಿದ್ದಾರೆ. ಒಪ್ಪಿಗೆ ಸೂಚಿಸಿದ ಮುಖ್ಯ ಗುರುಗಳು ಮತ್ತು ನೋಡಲ್ ಶಿಕ್ಷಕರ ಸಂಖ್ಯೆ 1,317 ಹಾಗೂ 2,338 ಅಡುಗೆ ಸಿಬ್ಬಂದಿಗಳಿದ್ದಾರೆ. ಕೇಂದ್ರ ಶಾಲೆಯ ಮುಖ್ಯ ಗುರುಗಳು ಎಸ್.ಎ.ಟಿ.ಎಸ್ ಮತ್ತು ಎ.ಎಂ.ಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸಬೇಕೆಂದು ಜಿ.ಪಂ.ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...