ಬೀದರ್‌ | ಅಂಬೇಡ್ಕರ್‌ಗೆ ಅಪಮಾನ : ಕಲ್ಯಾಣದಲ್ಲಿ ಅಮಿತ್‌ ಶಾ ವಿರುದ್ಧ ಸಿಡಿದ ಆಕ್ರೋಶ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಸೋಮವಾರ ಹಮ್ಮಿಕೊಂಡಿದ್ದ ಬಸವಕಲ್ಯಾಣ ಬಂದ್‌ ಚಳವಳಿಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಸಾಥ್‌ ನೀಡಿದವು.

ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ಬೆಳಿಗ್ಗೆಯಿಂದ ಕೆಲ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ , ಮುಂಗಟ್ಟು ಮುಚ್ಚುವುದರ ಮೂಲಕ ಪ್ರತಿಭಟನೆಗೆ ಬೆಂಬಲಿಸಿದರು.

WhatsApp Image 2024 12 23 at 7.34.05 PM

ನಗರದ ಕೋಟೆಯಿಂದ ಆರಂಭವಾದ ಮೆರವಣಿಗೆ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು. ಕೇಂದ್ರ ಸರ್ಕಾರ, ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್‌ ಜೈನ್‌ ಅವರಿಗೆ ಸಲ್ಲಿಸಿದರು.

ʼರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಕೆಲವರಿಗೆ ಫ್ಯಾಷನ್ ಆಗಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತುʼ ಎಂಬ ಆಕ್ಷೇಪಾರ್ಹವಾಗಿ ಮಾತನಾಡಿ ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾರೆ. ಇದರಿಂದ ದೇಶದ ಜನರ ಭಾವನೆಗೆ ದಕ್ಕೆ ತಂದಿದ್ದಾರೆ. ತಕ್ಷಣವೇ ಸಂಪುಟದಿಂದ ಅವರನ್ನು ವಜಾಗೊಳಿಸಬೇಕುʼ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ ಸಿಂಗ್‌ ಮಾತನಾಡಿ, ʼಸಂಸತ್ತಿನಲ್ಲಿ ಬಾಬಾ ಸಾಹೇಬ್‌ ಅವರ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಆಡಿದ ಮಾತುಗಳು ಖಂಡನೀಯವಾಗಿವೆ. ಸಂವಿಧಾನದಿಂದಲೇ ಗೃಹ ಮಂತ್ರಿಯಾದ ಅಮಿತ್ ಶಾ‌ ಅವರು ಡಾ.ಬಾಬಾ ಸಾಹೇಬ್‌ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

WhatsApp Image 2024 12 23 at 7.38.17 PM 1

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಾಲಾ ಬಿ.ನಾರಾಯಣ ಮಾತನಾಡಿ, ಶತಮಾನಗಳಿಂದ ಇದ್ದ ಜಾತಿ ವರ್ಣ ವ್ಯವಸ್ಥೆ ದಾಸ್ಯದ ಸಂಕೋಲೆಯಿಂದ ಬಿಡುಗಡೆಗೊಳಿಸಿದ ಬಾಬಾ ಸಾಹೇಬ್ ಅಂಬೇಡ್ಕರ್, ಇಂದು ದೇಶ ಸ್ವಾಭಿಮಾನದಿಂದ ತಲೆಯೆತ್ತಿ ನಡೆಯುತ್ತಿದ್ದರೆ ಅದಕ್ಕೆ ಬಾಬಾ ಸಾಹೇಬರ ಹೋರಾಟವೇ ಕಾರಣ. ಶೋಷಿತ, ತಳಸಮುದಾಯದಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಅಂಬೇಡ್ಕರ್‌ ಅವರಿಗೆ ಅಮಿತ್‌ ಶಾ ಅವಮಾನಿಸಿದ್ದು ತೀವ್ರವಾಗಿ ಖಂಡಿಸುತ್ತೇನೆʼ ಎಂದರು.

ಈ ಸುದ್ದಿ ಓದಿದ್ದೀರಾ? ಸಿ.ಟಿ. ರವಿ ಮಹಿಳಾ ನಿಂದಕ ಪ್ರಕರಣ ಮುಂದೇನಾಗಲಿದೆ?

ಪ್ರತಿಭಟನೆಯಲ್ಲಿ ಮುಖಂಡ ಧನರಾಜ್‌ ತಾಳಂಪಳ್ಳಿ, ಸುರೇಶ ಮೋರೆ, ಪಿಂಟು ಕಾಂಬಳೆ, ಸಂದೀಪ ಮುಕಿಂದೆ, ಚೇತನ್‌ ಕಾಡೆ, ಶಂಕರ್‌ ಫುಲೆ, ಶಂಕರ್ ಫುಲೆ, ಮಹಾದೇವ ಗಾಯಕವಾಡ, ವಾಮನ ಮೈಸಲ್ಗೆ, ವಿಜಯಕುಮಾರ್ ಡಾಂಗೆ, ಜೈಭೀಮ್ ಕೊಳೆ, ಸಾಗರ್, ಪ್ರಫುಲ್ ಗಾಯಕವಾಡ, ಅಭಿಜಿತ್ ಸೂರ್ಯವಂಶಿ, ಶ್ರೀಕಾಂತ್ ಕಾಂಬಳೆ, ಗೌತಮ್ ಜಾಂತೆ, ಸವಿತಾ ಕಾಂಬಳೆ, ಇಕ್ರಾಮ್‌ ಖಾದಿವಾಲೆ, ಮಿಲಿಂದ್‌ ಸಾಗರ್‌, ನಿತಿನ್‌ ಡಾಂಗೆ, ಚಂದ್ರಕಾಂತ ವಾಘಮಾರೆ, ತಹೇರ್‌ ಭಾಯ್‌, ನವಾಜ್‌ ಖುರೇಸಿ, ಮನೋಹರ ಮೈಸೆ, ವಿಲಾಸ ನಾಟೇಕರ್‌ ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಜನರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...