ಸೇವೆ ಒದಗಿಸಲು ವಿಮಾ ಕಂಪನಿ ವಿಫಲ; ಪರಿಹಾರ ನೀಡುವಂತೆ ಆದೇಶ

Date:

ಎಸ್‌ಬಿಐ ವಿಮಾ ಕಂಪನಿಯು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿದ್ದು, ಸಂತ್ರಸ್ತ ಗ್ರಾಹಕರಿಗೆ 25,000 ರೂಪಾಯಿ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆ ಆದೇಶಿಸಿದೆ.

ಹುಬ್ಬಳ್ಳಿಯ ನಿವಾಸಿ ರಾಜೇಂದ್ರ ಪತ್ತಾರ್ ಎಂಬುವರು ಎಸ್‌ಬಿಐ ಮೆಡಿಕ್ಲೈಮ್ ಹೆಲ್ತ್ ಪ್ಲಸ್ ವಿಮಾ ಪಾಲಿಸಿಯನ್ನು ಖರೀದಿಸಿದ್ದರು ಮತ್ತು ವಾರ್ಷಿಕ 10,502 ರೂ. ಪಾವತಿಸುತ್ತಿದ್ದರು. 2021ರಲ್ಲಿ ಮೂತ್ರನಾಳದ ಸಮಸ್ಯೆ ತುತ್ತಾಗಿದ್ದ ಅವರು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಬಿಲ್ 51,350 ರೂ. ಪಾವತಿಸಲು ವಿಮೆ ಕ್ಲೇಮ್‌ಗೆ ಅರ್ಜಿ ಸಲ್ಲಿಸಿದ್ದರು.

ಪಾಲಿಸಿ ಮಾಡಿಸುವಾಗ ತಮ್ಮ ಅನಾರೋಗ್ಯದ ಬಗ್ಗೆ ರೇಜೇಂದ್ರ ಅವರು ಅರ್ಜಿಯಲ್ಲಿ ಉಲ್ಲೇಖಿಸಿಲ್ಲ ಎಂದು ಎಸ್‌ಬಿಐ ವಿಮಾ ಕಂಪನಿ ಹಣ ಮಂಜೂರು ಮಾಡಲು ನಿರಾಕರಿಸಿತ್ತು. ಬಳಿಕ, ರಾಜೇಂದ್ರ ಅವರು ಕಂಪನಿಯ ವಿರುದ್ಧ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆಗೆ ದೂರು ಸಲ್ಲಿಸಿದರು. ಪಾಲಿಸಿಯು ಸಕ್ರಿಯವಾಗಿದ್ದಾಗ ಸರಿಯಾದ ಕಾರಣವಿಲ್ಲದೆ ತಮ್ಮ ಹಕ್ಕನ್ನು ಕಂಪನಿ ತಿರಸ್ಕರಿಸಿದೆ ಎಂದು ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರು ಮತ್ತು ಕಂಪನಿಯ ವಾದ-ಪ್ರತಿವಾದವನ್ನು ಆಲಿಸಿದ ವೇದಿಕೆಯ ಅಧ್ಯಕ್ಷ ಈಶಪ್ಪ ಭೂತೆ ಮತ್ತು ಸದಸ್ಯರಾದ ವಿಶಾಲಾಕ್ಷಿ ಬಿಳಿಶೆಟ್ಟಿ ಮತ್ತು ಪ್ರಭು ಹಿರೇಮಠ. “ರಾಜೇಂದ್ರ ಅವರ ವಿಮೆ ಕ್ಲೈಮ್‌ ಅರ್ಜಿಯನ್ನು ತಿರಸ್ಕರಿಸಲು ಕಂಪನಿಯು ನೀಡಿದ ಕಾರಣವನ್ನು ಸಮರ್ಥಿಸಲು ಎಸ್‌ಬಿಐ ವಿಮಾ ಕಂಪನಿ ವಿಫಲವಾಗಿದೆ. ಆಸ್ಪತ್ರೆಯ ಬಿಲ್ 51,350 ರೂ. ಜೊತೆಗೆ 25,000 ರೂ. ಪರಿಹಾರ ಮತ್ತು 10,000 ರೂ. ನ್ಯಾಯಾಲಯದ ವೆಚ್ಚವನ್ನು ದೂರುದಾರರಿಗೆ ಕಂಪನಿ ಪಾವತಿಸಬೇಕು” ಎಂದು ಆದೇಶಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...