ಮಂಡ್ಯ | ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ : ನೂರ್ ಶ್ರೀಧರ್

Date:

ಮಂಡ್ಯ ನಗರದ ಕಲಾ ಮಂದಿರದಲ್ಲಿ ಶನಿವಾರ ಶ್ರಮಿಕ ಶಕ್ತಿ ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಬಿಲ್ ಜಾರಿ ವಿರೋಧ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಜನಶಕ್ತಿ ಸಂಘಟನೆಯ
ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಉದ್ಘಾಟಿಸಿ ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ ಅಭಿವೃದ್ಧಿ ಹೆಸರು ಹೇಳಿಕೊಂಡು ಬಂಡವಾಳ ಶಾಹಿಗಳ ಅನುಕೂಲಕ್ಕೆ ತಕ್ಕಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜಮೀನು ಕಬಳಿಸ ಹೊರಟಿವೆ. ಎಲ್ಲರೂ ಸೇರಿ ಒಕ್ಕೋರಲಿನಿಂದ ಹೋರಾಟದ ಮೂಲಕ ನಮ್ಮ ಹಕ್ಕನ್ನು ಪ್ರತಿಪಾದಿಸಬೇಕಿದೆ ‘ ಎಂದರು.

ಬೆಂಗಳೂರಿನ ದೇವನಹಳ್ಳಿ ಬಳಿಯ ಚನ್ನರಾಯಪಟ್ಟಣ ಭಾಗದಲ್ಲಿ ರೈತರ ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ಕಬಳಿಸಲು ಹೊರಟಿದೆ. ಈಗಾಗಲೇ ಹೋರಾಟ ನಡೆಯುತ್ತಿದ್ದು ಈ ಹೋರಾಟಕ್ಕೆ ಎಲ್ಲಾ ಸಂಫಟನೆಗಳ ಮುಖಂಡರು ಸೇರಿ ದೊಡ್ಡಮಟ್ಟದ ಹೋರಾಟ ರೂಪಿಸಬೇಕಿದೆ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ರೈತ ಚಳುವಳಿಯ ರೈತರು ಅತಿಹೆಚ್ಚಾಗಿ ಪಾಲ್ಗೊಳ್ಳಬೇಕು, ರೈತ ಚಳುವಳಿ ಮುನ್ನಡೆಸಬೇಕು ನಮ್ಮ ಭೂಮಿಯನ್ನು ಉಳಿಸುವ ಹೋರಾಟಕ್ಕೆ ಜೀವ ತುಂಬಬೇಕು. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಗಟ್ಟಿಯಾಗಿ ವಿರೋಧಿಸಲು ಸಾಧ್ಯ. ಈ ಮೂಲಕ ರೈತರ ಆಕ್ರೋಶದ ಬಿಸಿ ಮುಟ್ಟಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದುಡಿಯುವ ಕಾರ್ಮಿಕ ವರ್ಗಕ್ಕೆ 8 ರಿಂದ 12 ಗಂಟೆಗೆ ಕಾಲಮಿತಿ ಏರಿಕೆ ಸರಿಯಲ್ಲ. ಇದನ್ನ ವಾಪಸ್ ಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಹಿತ ಮರೆತಿವೆ. ದುಡಿಯುವ ವರ್ಗಗಳ ಬದುಕನ್ನು ಕಸಿಯುವ ಕೆಲಸ ಮಾಡುತ್ತಿವೆ. ಇಂತಹ ನಿಲುವುಗಳು ಕಾರ್ಮಿಕರನ್ನು ಇನ್ನಷ್ಟು ಘಾಸಿಗೊಳಿಸಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಮಾತನಾಡಿ ” ದುಡಿಯುವ ಕಾರ್ಮಿಕ ವಲಯಕ್ಕೆ ತಿಂಗಳಿಗೆ ಕನಿಷ್ಠ 35 ಸಾವಿರ ವೇತನ ನೀಡಬೇಕು. ಕಾರ್ಮಿಕರಿಗೆ ಭದ್ರತೆ ಒದಗಿಸುವುದರ ಜೊತೆಗೆ. ಉಚಿತ ಶಿಕ್ಷಣ, ಉದ್ಯೋಗ, ಮೂಲಭೂತ ಸೌಕರ್ಯ ಕಲ್ಪಿಸಿ, ವಸತಿ ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕು ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ : ಭಾಸ್ಕರ್ ಪ್ರಸಾದ್ ಕಿಡಿ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಕರ್ನಾಟಕ ಶ್ರಮಿಕ ಶಕ್ತಿ ರಾಜ್ಯಾಧ್ಯಕ್ಷ ವರದರಾಜು, ಜನಶಕ್ತಿ ಸಂಘಟನೆಯ ಪೂರ್ಣಿಮಾ, ಸತೀಶ್ ಅರವಿಂದ್, ಚನ್ನಮ್ಮ, ರವಿ ಮೋಹನ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...