ಒಳಮೀಸಲಾತಿ | ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಬೃಹತ್‌ ಪ್ರತಿಭಟನೆ

Date:

ಒಳಮೀಸಲಾತಿ ಕುರಿತು ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ‌ ಘಟಕ ಬೃಹತ್‌ ಪ್ರತಿಭಟನೆ ನಡೆಸಿತು.

ಒಳಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳು ಮತ್ತು ಇದರಿಂದ ಯಾವುದೇ ಹೊಸ ನೇಮಕಾತಿಗಳಿಲ್ಲದೆ ಎಲ್ಲಾ ವರ್ಗದ ಲಕ್ಷಾಂತರ ವಿದ್ಯಾರ್ಥಿ, ನಿರುದ್ಯೋಗಿ ಯುವಜನರು ಆತಂಕದಲ್ಲಿದ್ದಾರೆ‌ ಎಂದು ದವಿಪ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಆರೋಪಿಸಿದರು.

“ಮೂರು ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಡುತ್ತಿರುವ ಹೋರಾಟಗಾರ ತಾಳ್ಮೆ ಕಟ್ಟೆ ಒಡೆದಿದೆ. ಜೊತೆಗೆ ಉದ್ಯೋಗ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿ, ನಿರುದ್ಯೋಗಿ ಯುವಜನರ ವಯಸ್ಸು ಮೀರುತ್ತಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿವೆ. ಪೊಲೀಸ್ ಅಧಿಕಾರಿಗಳ ಕೊರತೆಯೂ ಅಧಿಕವಾಗಿರುವುದಕ್ಕೆ ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯೇ ಸಾಕ್ಷಿ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಇಂಧನ ಇಲಾಖೆ, ಆರ್ಥಿಕ ಇಲಾಖೆ, ಲೋಕೋಪಯೋಗಿ ಇಲಾಖೆ, ಸಾರಿಗೆ ಇಲಾಖೆ, ತೋಟಗಾರಿಕಾ ಇಲಾಖೆ, ಶಿಕ್ಷಣ ಇಲಾಖೆ ಜೊತೆಗೆ ಇನ್ನೂ ಹಲವಾರು ಇಲಾಖೆಗಳಲ್ಲಿನ ಅಧಿಸೂಚನೆಗಳು ನೆನೆಗುದಿಗೆ ಬಿದ್ದಿದ್ದು, ಒಳಮೀಸಲಾತಿ ವರದಿ ವಿಳಂಬದಿಂದಾಗಿ ಯಾವುದೇ ನೇಮಕಾತಿಗಳಿಲ್ಲದೇ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಆದ್ದರಿಂದ ಮಾನ್ಯ ರಾಜ್ಯ ಸರ್ಕಾರ ಮೂರು ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಡುತ್ತಿರುವ ಹೋರಾಟಗಾರ ತ್ಯಾಗ ಮತ್ತು ಬಲಿದಾನ ಜೊತೆಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗೌರವಿಸುವ ಮೂಲಕ ಶೀಘ್ರವೇ ಒಳಮೀಸಲಾತಿ ಜಾರಿಮಾಡಿ, ಹೊಸ ನೇಮಕಾತಿ ಅಧಿಸೂಚನೆ ಹೊರಡಿಸುವ ಮೂಲಕ ನಾಡಿನ ಎಲ್ಲಾ ವರ್ಗದ ವಿದ್ಯಾರ್ಥಿ ಯುವಜನರಿಗೆ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದರು.

ದವಿಪ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಮಾತನಾಡಿ, “ಮೂರು ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಡುತ್ತಿರುವ ಸಮುದಾಯದ ಬೇಡಿಕೆಯನ್ನು ಶೀಘ್ರವೇ ಈಡೇರಿಸಬೇಕು. ದಲಿತ ವಿದ್ಯಾರ್ಥಿ ಪರಿಷತ್ ಈಗಾಗಲೇ ಹಲವು ಬಾರಿ ಒಳಮೀಸಲಾತಿಗಾಗಿ ಹೋರಾಡಿ ಸರ್ಕಾರಕ್ಕೆ ಆಗ್ರಹಿಸುತ್ತ ಬಂದಿದೆ. ಈಗ ಹೋರಾಟಗಾರ ತಾಳ್ಮೆ ಕಟ್ಟೆ ಒಡೆದಿದೆ. ಸರ್ಕಾರ ಮತ್ತೆ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬಾರದು. ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷಾ ಅವಧಿಯನ್ನು ಪದೇಪದೆ ವಿಸ್ತರಣೆ ಮಾಡಬಾರದು. ಆದಷ್ಟು ಬೇಗ ಸರ್ಕಾರ ವರದಿ ಸ್ವೀಕರಿಸಬೇಕು. ವಿಶೇಷ ಅಧಿವೇಶನ ಕರೆದು ಜುಲೈ 10ರೊಳಗೆ ಒಳ ಮೀಸಲಾತಿ ಅನುಷ್ಠಾನ ಮಾಡಬೇಕು. ಬಳಿಕ ಕೂಡಲೇ ಉದ್ಯೋಗದ ನಿರೀಕ್ಷೆಯಲ್ಲಿರುವ ನಾಡಿನ ಎಲ್ಲ ವರ್ಗದ ವಿದ್ಯಾರ್ಥಿ, ನಿರುದ್ಯೋಗಿ ಯುವಜನರ ಹಿತಾಸಕ್ತಿಗಾಗಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು” ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆ; ಉಪವಾಸ ಸೊರಗಿದ ವಿದ್ಯಾರ್ಥಿಗಳು

ನಗರದ ಗಾಂಧಿ ಚೌಕದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ಸರ್ಕಲ್ ತಲುಪಿ, ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿದ್ದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳ ಕಚೇರಿ ಪ್ರತಿನಿಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೆಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮುಖಂಡರಾದ ಅಕ್ಷಯ ಕುಮಾರ ಅಜಮನಿ, ಮಹಾದೇವ ಚಲವಾದಿ, ಸಂದೇಶ್, ದಾವೂದ್ ನಾಯ್ಕೋಡಿ, ಯಾಸೀನ ಇನಾಮದಾರ, ಪ್ರಶಾಂತ ದಾಂಡೇಕರ್, ಪ್ರತಾಪ್, ಭೀಮರಾಯ, ಪ್ರಜ್ವಲ್, ಪ್ರವೀಣ್, ಯಮನಪ್ಪ ಮಾದರ, ಮಹಾಂತೇಶ ಅಲ್ಲದೇ ನೂರಾರು ವಿದ್ಯಾರ್ಥಿ ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...