ಧಾರವಾಡ | ವಿಶ್ವ ಶಾಂತಿಗಾಗಿ ಅಂತಾರಾಷ್ಟ್ರೀಯ ಸಂಘರ್ಷ ದಿನ ಆಚರಣೆ: ಎಐಯುಟಿಯುಸಿ

Date:

ಜಗತ್ತಿನೆಲ್ಲೆಡೆ ಬಂಡವಾಳಶಾಹಿ ಪರ ಸರ್ಕಾರಗಳು ಜನಸಾಮಾನ್ಯರ, ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಮಿಲಿಟರಿ ವೆಚ್ಚಗಳನ್ನು ಹೆಚ್ಚಿಸುತ್ತಿರುವುದು ಆಘಾತಕಾರಿಯಾಗಿದೆ. ವಿಶ್ವಶಾಂತಿಯು ಗಂಭೀರ ಅಪಾಯದಲ್ಲಿದೆ. ಮತ್ತೊಂದೆಡೆ ಜಾಗತಿಕವಾಗಿ ಎಲ್ಲಾ ದೇಶಗಳಲ್ಲೂ ಬೆಲೆ ಏರಿಕೆ, ಹಣದುಬ್ಬರ ತೀವ್ರವಾಗಿ ಹೆಚ್ಚಿತ್ತಿದೆ ಎಂದು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಕಳವಳ ವ್ಯಕ್ತಪಡಿಸಿದರು.

ವರ್ಲ್ಡ್ ಫೆಡರೇಶನ್ ಆಫ್ ಟ್ರೇಡ್ ಯೂನಿಯನ್ ಕರೆಯ ಮೇರೆಗೆ ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಯ ಧಾರವಾಡ ಜಿಲ್ಲಾ ಸಮಿತಿಯಿಂದ ನಗರದ ಸಿಬಿಟಿಯಲ್ಲಿ ವಿಶ್ವ ಶಾಂತಿಗಾಗಿ ಆಗ್ರಹಿಸಿ ಅಂತರಾಷ್ಟ್ರೀಯ ಸಂಘರ್ಷ ದಿನ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಸೆಪ್ಟೆಂಬರ್ 1, 1939 ವಿಶ್ವಯುದ್ಧ-2 ಪ್ರಾರಂಭವಾದ ಕರಾಳ ದಿನ. ಇದೇ ದಿನ ನಾಜಿ ಜರ್ಮನಿಯು ಪೋಲೆಂಡ್ ದೇಶದ ಮೇಲೆ ದಾಳಿ ನಡೆಸಿದ ಬಳಿಕ ಮಹಾಯುದ್ಧ ಪ್ರಾರಂಭವಾಗಿದ್ದು.ಈ ಮಹಾಯುದ್ಧದಲ್ಲಿ ಸಾಮ್ರಾಜ್ಯಶಾಹಿ,ಫ್ಯಾಸಿಸ್ಟ್-ನಾಜಿಗಳ ಯುದ್ಧದಾಹಕ್ಕೆ, ಲಕ್ಷಾಂತರ ಮುಗ್ಧ ಜನ,ದುಡಿಯುವ ಜನತೆ ಬಲಿಯಾಗಬೇಕಾಯಿತು.ಈ ಕರಾಳ ಘಟನೆಯ ನೆನಪಿನಲ್ಲಿ ಇಂದು ಡಬ್ಲುಎಫ್‌ಟಿಯು ಅಂತರರಾಷ್ಟ್ರಿಯ ಸಂಘರ್ಷ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲು ಕರೆ ನೀಡಿದೆ. ಇಂದು ಅಮೇರಿಕದಂತಹ ವಿವಿಧ ಲಾಭ ಪಿಪಾಸು ಸಾಮ್ರಾಜ್ಯಶಾಹಿ-ಬಂಡವಾಳಶಾಹಿ ದೇಶಗಳ ಮಧ್ಯೆ ರಾಜಕೀಯ, ಆರ್ಥಿಕ ಮತ್ತು ಮಿಲಿಟರಿ ಘರ್ಷಣೆಗಳು ತೀವ್ರವಾಗಿ ಹೆಚ್ಚುತ್ತಿವೆ. ವಿವಿಧ ದೇಶಗಳ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸಿ, ಲಾಭಕ್ಕಾಗಿ ಅಲ್ಲಿಯ ಜನಗಳನ್ನು ಕೊಳ್ಳೆಹೊಡೆಯಲು,ಶೋಷಣೆಗೀಡು ಮಾಡಲು ಹುನ್ನಾರ ಮಾಡುತ್ತಿವೆ. ಇವೆಲ್ಲದರ ಪರಿಣಾಮವಾಗಿ ಯುದ್ದೋನ್ಮಾದಗಳು ಹೆಚ್ಚುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಆದರೆ ಜನಸಂಖ್ಯೆಯ ಶೇ.99ರಷ್ಟಿರುವ ಜನಸಾಮಾನ್ಯರಿಗೆ- ದುಡಿಯುವ ವರ್ಗಕ್ಕೆ ಬೇಕಾಗಿರುವುದು ಆರೋಗ್ಯ, ಶಿಕ್ಷಣ, ಉದ್ಯೋಗ, ಶೋಷಣೆರಹಿತ, ಶಾಂತಿಯುತ, ನೆಮ್ಮದಿಯ ಬದುಕು. ಇದಕ್ಕಾಗಿ ಎಲ್ಲ ದುಡಿಯುವ ಜನತೆ ಒಂದಾಗಿ ಹೋರಾಟಕ್ಕಿಳಿಯುವುದೊಂದೇ ದಾರಿ. ಆದ್ದರಿಂದ ವಿವಿಧ ದೇಶಗಳ ಮಧ್ಯೆ ಸಾಮ್ರಾಜ್ಯಶಾಹಿ ಯುದ್ಧಗಳು ಮತ್ತು ಅವುಗಳ ಹುನ್ನಾರವನ್ನು ಬಯಲಿಗೆಳೆದು ವಿಶ್ವದಾದ್ಯಂತ ಶೋಷಿತ ಜನಸಾಮಾನ್ಯರ ಪರ ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆಗಳಿಗೆ ಹೆಚ್ಚಿನ ಅನುದಾನ ನೀಡಿ, ಶಸ್ತ್ರಾಸ್ತ್ರಗಳ-ನಾಟೋ ಹಾಗೂ ಸಾಮ್ರಾಜ್ಯಶಾಹಿ ಹಸ್ತಕ್ಷೇಪಗಳನ್ನು ಕೈಬಿಡಬೇಕೆಂದು” ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಸಮಿತಿ ಸದಸ್ಯ ರಿಯಾಜ್ ತಡಕೋಡ, ಮುಕ್ತುಮ್ ಶಾಪುರ, ಹನುಮಂತ ಹಾವೇರಿಪೇಟ್,ಅಬ್ದುಲ್ ಅಜೀಜ್ ದರೋಗಾ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...