ತನಿಖೆಯಿಂದ ಬಿಜೆಪಿಯವರ ಕಮಿಷನ್ ಕರ್ಮಕಾಂಡ‌ ಬಯಲಾಗಲಿದೆ: ದಿನೇಶ್‌ ಗುಂಡೂರಾವ್

Date:

  • ‘ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ’
  • ಬಿಜೆಪಿಯವರಿಗೆ ಗುತ್ತಿಗೆದಾರರ ಪರ ನಿಲ್ಲುವ ಯಾವ ನೈತಿಕತೆಯಿದೆ: ಪ್ರಶ್ನೆ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಯುತ್ತಿದೆ. ಇದರ ತನಿಖಾ ವರದಿ ಬಂದ ಬಳಿಕ ಬಿಲ್ ಪಾವತಿಸುತ್ತೇವೆ. ಆದರೆ, ಈ ತನಿಖೆಯಿಂದ ಬಿಜೆಪಿಯವರ ಕರ್ಮಕಾಂಡವೂ ಬಯಲಾಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನಾವು ಬಿಜೆಪಿಯವರಂತೆ ಗುತ್ತಿಗೆದಾರರ ಬಳಿ ಒಂದೇ ಒಂದು ಪರ್ಸೆಂಟ್ ಕಮಿಷನ್ ಕೇಳಿಲ್ಲ. ಕಾಂಟ್ರ್ಯಾಕ್ಟರ್ ಅಸೋಸಿಯೇಶನ್ ಕೂಡ ನಮ್ಮ ಮೇಲೆ ಕಮಿಷನ್ ಆರೋಪ ಹೊರಿಸಿಲ್ಲ” ಎಂದಿದ್ದಾರೆ.

“ಗುತ್ತಿಗೆ ಹಗರಣದ ತನಿಖೆಯಾಗಿ ಅದರ ವರದಿ ಬರುವವರೆಗೂ ಬಿಲ್ ಹಣ ತಡೆ ಹಿಡಿಯುವುದು ಅನಿವಾರ್ಯ. ನಿಯಮಾನುಸಾರ ಕಾಮಗಾರಿ ಮಾಡಿದ ಯಾವ ಗುತ್ತಿಗೆದಾರರು ಭಯ ಬೀಳುವ ಅವಶ್ಯಕತೆಯಿಲ್ಲ. ಅವರ ಹಣ ಬಿಡುಗಡೆಯಾಗಲಿದೆ. ಆದರೆ ಯಾರು ಅಕ್ರಮವೆಸಗಿದ್ದಾರೋ ಅಂತಹವರ ವಿರುದ್ಧವಷ್ಟೇ ನಮ್ಮ ಕ್ರಮ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

“ಹಿಂದಿನ ಬಿಜೆಪಿ ಸರ್ಕಾರ ಖಜಾನೆ ಲೂಟಿ ಮಾಡಿದ ಕಾರಣಕ್ಕಾಗಿಯೇ ಅಲ್ಲವೇ ಗುತ್ತಿಗೆದಾರರ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿದ್ದು? ಈಗ ಶುದ್ಧ ಸಚ್ಛಾರಿತ್ರ್ಯರಂತೆ ಪೋಸ್ ಕೊಡುವ ಬಿಜೆಪಿಯವರಿಗೆ ಗುತ್ತಿಗೆದಾರರ ಪರ ನಿಲ್ಲುವ ಯಾವ ನೈತಿಕತೆಯಿದೆ” ಎಂದು ಪ್ರಶ್ನಿಸಿದ್ದಾರೆ.

“ಗುತ್ತಿಗೆದಾರರ ಬಿಲ್ ಬಾಕಿ ಸಂಬಂಧ ಬಿಜೆಪಿಯವರು ಬೀದಿ ನಾಟಕ ಮಾಡುತ್ತಿದ್ದಾರೆ. ಆದರೆ ಬಿಜಿಪಿಯವರು ತಮ್ಮ ಅವಧಿಯಲ್ಲೇ ನಡೆದಿದ್ದ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿದ್ಯಾಕೆ ಎಂದು ಉತ್ತರಿಸುತ್ತಿಲ್ಲ. ಅಂದು 40% ಕಮಿಷನ್‌ಗಾಗಿ ಬಿಲ್ ತಡೆ ಹಿಡಿದಿದ್ದರೆ? ಹಿಂದಿನ ಬಿಜೆಪಿ ಸರ್ಕಾರ ಯಾವ ಕಾರಣಕ್ಕಾಗಿ ಗುತ್ತಿಗೆದಾರರ ಬಿಲ್ ತಡೆ ಹಿಡಿದಿತ್ತು?” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...