ಮುದ್ದೇಬಿಹಾಳ ತಾಲೂಕು ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ; ಕಸಾಪ ನೆಡೆಗೆ ಸಾಹಿತಿಗಳ ವಿರೋಧ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ ಸಲ್ಲದ ಇಂತಹ ಹೇಳಿಕೆಯನ್ನು ಪ್ರಜ್ಞಾವಂತ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ‌ ವಿಶ್ರಾಂತ ಪ್ರಾಧ್ಯಾಪಕ ಚಂದ್ರಗೌಡ ಕುಲಕರ್ಣಿ ಕರೆ ನೀಡಿದರು.

ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಒಂದು ತಾಲೂಕಿನಲ್ಲಿ ಸಾಹಿತ್ಯಿಕ ಸಾಧನೆ ಮಾಡಿದ ಎಂಟರಿಂದ ಹತ್ತು ಮಂದಿ ಸಾಹಿತಿಗಳನ್ನು ಗುರುತಿಸಿ ಸೂಕ್ತವಾದವರನ್ನು ಆಯ್ಕೆ ಮಾಡುವುದು ಕರ್ನಾಟಕ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜವಾಬ್ದಾರಿ. ಜಿಲ್ಲಾ ಅಧ್ಯಕ್ಷರೂ ಕೂಡಾ ಈ ಆಯ್ಕೆಯ ಜವಾಬ್ದಾರಿಯುತ ವ್ಯಕ್ತಿಗಳಾಗಿರುತ್ತಾರೆ” ಎಂದರು.

“ಸಾಹಿತ್ಯ ಸೇವೆಯ ಘನ ಉದ್ದೇಶದಿಂದ ಹುಟ್ಟಿದ ಈ ಸಂಸ್ಥೆ ಈವರೆಗೆ ನಡೆದುಬಂದ ಅರ್ಥವತ್ತಾತ್ ಪರಂಪರೆಯನ್ನು ಮುಂದುವರೆಸಬೇಕು. ತಾಲೂಕಿನ ಅಧ್ಯಕ್ಷರಾದಿಯಾಗಿ ಎಲ್ಲ ಪದಾಧಿಕಾರಿಗಳು ಜವಾಬ್ದಾರಿ ಹೊತ್ತು ಮುನ್ನಡೆಸಬೇಕು. ಆ ಪರಂಪರೆಯನ್ನು ಮುರಿದು ಅಧ್ಯಕ್ಷರಾಗಲು ಅರ್ಜಿ ಸಲ್ಲಿಸಲು ಸೂಚಿಸಿದರೆ, ಕೋರಿದರೆ ಗೌರವಯುತ ಸಾಹಿತಿಗಳಾರೂ ಸ್ಪಂದಿಸಲಾರರು” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕು, ಜಿಲ್ಲೆ ಮತ್ತು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಆ ಸಾಹಿತಿಗೆ ಗೊತ್ತಾಗದ ರೀತಿಯಲ್ಲಿ ನಡೆಯಬೇಕೇ ಹೊರತು ಅವರಿಂದ ಅರ್ಜಿ ಪಡೆದು ನಡೆಯುವಂಥದ್ದಲ್ಲ. ಈ ಹಿಂದೆ ಮುದ್ದೇಬಿಹಾಳ ತಾಲೂಕು ಸಮ್ಮೇಳನಗಳು ನಾಲ್ಕು ನಡೆದಿವೆ. ಆಗ ಯಾರಿಂದಲೂ ಅರ್ಜಿ ಕರೆದಿರಲಿಲ್ಲ. ಪರಿಷತ್ತಿನ ಪದಾಧಿಕಾರಿಗಳು, ತಾಲೂಕಿನ ಹಿರಿಯರು, ಸ್ಥಳೀಯ ಪಕ್ಷಾತೀತವಾದ ರಾಜಕಾರಣಿಗಳು ಒಮ್ಮತದಿಂದ ಆರಿಸಿ, ಆಯ್ಕೆಯಾದ ಸಾಹಿತಿಯವರನ್ನು ಮನೆವರೆಗೆ ಹೋಗಿ ಅಹ್ವಾನ ನೀಡಿದ ಉದಾಹರಣೆಗಳು ಇದೇ ತಾಲೂಕಿನಲ್ಲಿವೆ. ಈಗ ತಾಲೂಕಿನ ಐದನೆಯ ಸಮ್ಮೇಳನಕ್ಕೆ ಅರ್ಜಿ ಹಾಕುವ ಪ್ರಸಂಗ ಬಂದಿದೆಯೆಂದರೆ ಇದರಂತಹ ಅವಮಾನದ ಕೆಲಸ ಮತ್ತೊಂದಿಲ್ಲ. ದಯವಿಟ್ಟು ತಾಲೂಕು ಮತ್ತು ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಶಾಸಕರು, ಸಂಸ್ಕೃತಿ ಪ್ರೇಮಿಗಳು ಕೆಟ್ಟ ಪರಂಪರೆಗೆ ಅವಕಾಶ ಕೊಡದೆ ಮೊದಲಿನ ಪರಂಪರೆಯನ್ನು ಮುಂದುವರೆಸಬೇಕು” ಎಂದು ಪ್ರಗತಿಪರ ಚಿಂತಕ ಅಬ್ದುಲ್ ರೆಹಮಾನ್ ಬಿದರಕುಂದಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಘಟಪ್ರಭಾ ನದಿಯಲ್ಲಿ ಅಕ್ರಮ ಮರಳುಗಾರಿಕೆ; ಸೂಕ್ತ ಕ್ರಮಕ್ಕೆ ರೈತ ಸಂಘ ಮನವಿ

“ಮುದ್ದೇಬಿಹಾಳ ಕಸಾಪ ಎರಡು ಜಿಲ್ಲಾ ಸಾಹಿತ್ಯ ಸಮ್ಮೇಳನ, ನಾಲ್ಕು ತಾಲೂಕು ಸಮ್ಮೇಳನ ನಡೆಸಿದ ಒಳ್ಳೆಯ ಹೆಸರನ್ನು ಪಡೆದಿದೆ. ಇದನ್ನು ಅರ್ಥಮಾಡಿಕೊಂಡು ಈಗ ತಾಲೂಕು ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವುದು ಸೂಕ್ತ. ಸಾಹಿತ್ಯಾಭಿಮಾನಿಗಳು ಸೂಕ್ತ ಈತಿಯಲ್ಲಿ ಆಯ್ಕೆಯಾಗುವಂತೆ ಪದಾಧಿಕಾರಿಗಳ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...