ಐಪಿಎಲ್ ಬೆಟ್ಟಿಂಗ್ ಭೂತಕ್ಕೆ ಯುವಕ ಬಲಿ

Date:

ಐಪಿಎಲ್‌ ಟೂರ್ನಿಗೆ ಭಾನುವಾರ ತೆರೆ ಬೀಳಲಿದೆ. ಕಳೆದ ಎರಡು ತಿಂಗಳಿನಿಂದ ಹಲವು ಪಂದ್ಯಗಳು ನಡೆದಿವೆ. ಈ ವೇಳೆ, ಹಲವಡೆಗೆ ತಂಡಗಳ ಪರವಾಗಿ ಬೆಟ್ಟಿಂಗ್‌ ಹಲವರು ಬೆಟ್ಟಿಂಗ್‌ ದಂಧೆಯಲ್ಲಿ ಪಾಲ್ಗೊಂಡಿರುವ ವರದಿಗಳೂ ಆಗಿವೆ. ಇದೇ ಬೆಟ್ಟಿಂಗ್‌ ಭೂತಕ್ಕೆ ಮಂಡ್ಯ ಜಿಲ್ಲೆಯ ಯುವಕನೊಬ್ಬ ಶನಿವಾರ ಬಲಿಯಾಗಿದ್ದಾನೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಯುವಕ ಪುನೀತ್‌ ಬೆಟ್ಟಿಂಗ್‌ನಿಂದ ಹತ್ಯೆಗೀಡಾದ ದುರ್ದೈವಿ. ಬೆಟ್ಟಿಂಗ್‌ನಲ್ಲಿ ತನ್ನ ಸ್ನೇಹಿತ ಗೆದಿದ್ದ ಹಣ ಕೇಳಿದ್ದಕ್ಕಾಗಿ ದುರುಳರು ಈತನನ್ನು ಹೊಡೆದು ಕೊಂದಿದ್ದಾರೆ.

ಮಂಗಳವಾರ ಗುಜರಾತ್ ಮತ್ತು ಚೆನ್ನೈ ತಂಡಗಳ ನಡುವೆ ಕ್ವಾಲಿಫಯರ್ ಪಂದ್ಯವಿತ್ತು. ಪುನೀತ್‌ ಸ್ನೇಹಿತ ದರ್ಶನ್‌ ಎಂಬಾತ, ಮತ್ತೊಬ್ಬ ಸ್ನೇಹಿತ ಶರತ್‌ ಬಳಿ ಬೆಟ್ಟಿಂಗ್‌ ಕಟ್ಟಿದ್ದ. ದರ್ಶನ್ ಚೆನ್ನೈ ಪರವಾಗಿಯೂ, ಶರತ್ ಗುಜರಾತ್‌ ಪರವಾಗಿಯೂ 11,000 ರೂ. ಬೆಟ್ ಕಟ್ಟಿದ್ದರು. ಆ ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈ ಗೆದ್ದಿದ್ದರಿಂದ ಬೆಟ್ಟಿಂಗ್‌ ಗೆದ್ದ ದರ್ಶನ್, ತಾನು ಗೆದ್ದ ಹಣ ನೀಡುವಂತೆ ಶರತ್‌ ಬಳಿ ಕೇಳಿದ್ದಾನೆ. ಹಣ ಕೊಡಲು ಆತ ನಿರಾಕರಿಸಿದ್ದು, ಇಬ್ಬರ ನಡುವೆ ಗಲಾಟೆ ನಡೆಸಿದೆ. ಬಳಿಕ, ಪುನೀತ್‌ ಬಳಿ ಬಂದ ದರ್ಶನ್‌ ತಾನು ಗೆದ್ದ ಹಣವನ್ನು ಶರತ್ ಕೊಟ್ಟಿಲ್ಲವೆಂದು ದೂರು ಹೇಳಿದ್ದಾನೆ.

ಈ ಸುದ್ದಿ ಓದಿದ್ದೀರಾ?: ಆರ್‌ಎಸ್‌ಎಸ್‌ ಎಂಬ ವಿಚ್ಛಿದ್ರಕಾರಿ ಸಂಘಟನೆ ಮೂರು ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್‌ ತಿರುಗೇಟು

ಸಿಟ್ಟಾದ ಪುನೀತ್‌, ತನ್ನ ಸ್ನೇಹಿತನೊಂದಿಗೆ ಶರತ್ ಬಳಿ ಹೋಗಿ ಪಂಚಾಯತಿ ನಡೆಸಿದ್ದಾರೆ. ಈ ವೇಳೆ, ಮತ್ತೆ ಗಲಾಟೆ ನಡೆದು ಶರತ್ ಮತ್ತಾತನ ಸಹಚರರು ದೊಣ್ಣೆಯಿಂದ ಪುನೀತ್ ತಲೆ ಹೊಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಪುನೀತ್ ಕುಸಿದು ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಶರತ್ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...