ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ | ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮದ ತನಿಖೆಗೆ ಸಿಎಂ ಆದೇಶ

Date:

  • ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಟಿಪ್ಪಣಿ
  • ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಲು ಸೂಚನೆ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಸಲು ತಂಡ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಈ ಕುರಿತು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಹೊರಡಿಸಿದ್ದು, “ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಇಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುತ್ತಿಲ್ಲ, ಟೆಂಡರ್‌ಗಳು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದ ಅಕ್ರಮಗಳು ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿರುತ್ತವೆ. ಎಲ್ಲ ಹಿನ್ನಲೆಯಲ್ಲಿ ಒಬ್ಬ ಐಎಎಸ್‌ ಅಧಿಕಾರಿಯ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯ ಹೊಂದಿರುವ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ಈ ಕೂಡಲೇ ರಚಿಸಿ, ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಿ” ಎಂದು ಸಿಎಂ ಸೂಚಿಸಿದ್ದಾರೆ.

ಸಂಸ್ಥೆಯಲ್ಲಿನ ಕೆಲ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿಸಹಿತ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಶೀಘ್ರವೇ ತನಿಖಾ ತಂಡ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ದೂರಿನಲ್ಲಿ ಏನಿದೆ?

ಪೆಟ್‌ಸ್ಕ್ಯಾನ್ ಟೆಂಡರ್ ನಿಯಮ ಉಲ್ಲಂಘನೆಯಾಗಿದ್ದು, ನಿರ್ದೇಶಕರು ಅವಧಿಗೂ ಮುನ್ನವೇ ಟೆಂಡ‌ರ್ ಕಾರ್ಯಾದೇಶ, ಬಿಲ್ಡಿಂಗ್, ಹೆಚ್ಚುವರಿ ಹಣ ವಸೂಲಿ, ಟೆಂಡರ್ ನಿಯಮ ಉಲ್ಲಂ‍ಘಿಸಿ ಮಾನವ ಸಂಪನ್ಮೂಲ ಒದಗಣೆ, ಕಳಪೆ ಪೆಟ್‌ಸ್ಕ್ಯಾನ್ ಯಂತ್ರ ಖರೀದಿ, ಜಿಎಸ್‌ಟಿ ವಂಚನೆ, ಸರಕಾರದ ಅನುಮೋದನೆ ಇಲ್ಲದೆ ಟೆಂಡರ್‌ದಾರರಿಗೆ ಪೆಟ್‌ಸ್ಕ್ಯಾನ್ ಪರೀಕ್ಷೆಗಳ ಹಣ ಸಂದಾಯ, ಪಿಪಿಪಿ ಮಾದರಿಯ ನಿಯಮ ಉಲ್ಲಂಘನೆ, ಕಳಪೆ ಗುಣಮಟ್ಟದ ಔಷಧಿ, ಔಷಧಿಗಳ ಖರೀದಿಯಲ್ಲಿ ಅಕ್ರಮ, ರೋಗಿಗಳ ಸಾವಿನ ಸಂಖ್ಯೆ ಹೆಚ್ಚಳ ಹಾಗೂ ಆಡಳಿತ ವ್ಯವಸ್ಥೆಯ ಸಂಪೂರ್ಣ ವಿಫಲತೆ ಕುರಿತಂತೆ ಸುಮಾರು 15ಕ್ಕೂ ಹೆಚ್ಚು ಆರೋಪಗಳ ದೂರು ಸಲ್ಲಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...