ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

Date:

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್‌ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಇದರಿಂದ ಬೇಸರಗೊಂಡಿರುವ ಅವರು ಶನಿವಾರ ಸಂಪುಟ ವಿಸ್ತರಣೆಯಾದ ಕೂಡಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಹೈಕಮಾಂಡ್‌ ಜೊತೆ ನೇರ ಸಂಪರ್ಕದಲ್ಲಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಪಕ್ಷ ನಿಷ್ಠೆ, ಹಿರಿತನ ಹಾಗೂ ಈಡಿಗ ಸಮುದಾಯದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕಾಂಗ್ರೆಸ್‌ ಪಡಸಾಲೆಯಲ್ಲಿ ಹೆಚ್ಚು ಕೇಳಿಬಂದಿದ್ದವು. ಆದರೆ, ಹರಿಪ್ರಸಾದ್‌ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿ, ಮಾಜಿ ಸಿಎಂ ಎಸ್‌ ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಅವರಿಗೆ ಹಠ ಹಿಡಿದು ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೀನಾಮೆ ವಿಚಾರವಾಗಿ ಬಿ ಕೆ ಹರಿಪ್ರಸಾದ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ “ಈ ಬಗ್ಗೆ ಆ ಮೇಲೆ ಮಾತನಾಡುವೆ” ಎಂದಷ್ಟೇ ಹೇಳಿದರು.

ಬಿ ಕೆ ಹರಿಪ್ರಸಾದ್‌ ಅವರ ರಾಜೀನಾಮೆ ನೀಡಲಿದ್ದಾರೆ ಎಂಬ ವಿಷಯ ಹೈಕಮಾಂಡ್‌ ತಲುಪಿದ್ದು, ಅವರನ್ನು ಮನವೊಲಿಸುವ ಸಾಧ್ಯತೆ ಹೆಚ್ಚಿದೆ. ಹೈಕಮಾಂಡ್‌ ಮಾತಿಗೆ ಕಟ್ಟುಬಿದ್ದು, ಹರಿಪ್ರಸಾದ್‌ ಅವರು ಪಕ್ಷದಲ್ಲೇ ಉಳಿಯುತ್ತಾರಾ ಎಂಬುದು ಕಾದುನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...