ಚುನಾವಣೆಯಲ್ಲಿ ಸಿದ್ದರಾಮಯ್ಯ ಕುಕ್ಕರ್‌ ಕೊಟ್ಟಿದ್ದಾರೆ ಎಂಬುದು ಸುಳ್ಳು ಸುದ್ದಿ: ಯತೀಂದ್ರ

Date:

  • ನಾನು ಹೇಳಿರುವುದೇ ಒಂದು, ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವುದೇ ಒಂದು
  • ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರು ತಮ್ಮ ಜನ್ಮದಿನಕ್ಕೆ ಹಂಚಿದ್ದಾರೆ

ನಾನು ಹೇಳಿರುವುದೇ ಒಂದು, ಸಾಮಾಜಿಕ ಮಾಧ್ಯಮ–ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವುದೇ ಒಂದು. ಕುಕ್ಕರ್‌ ಕುರಿತ ನನ್ನ ಹೇಳಿಕೆ ಆ ರೀತಿಯ ಅರ್ಥ ಕೊಟ್ಟಿರಲೂಬಹುದು. ಆದರೆ, ಚುನಾವಣೆಗೋಸ್ಕರ ಸಿದ್ದರಾಮಯ್ಯ ಕುಕ್ಕರ್‌ ಕೊಟ್ಟಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕುಕ್ಕರ್‌ ಮತ್ತು ಇಸ್ತ್ರಿಪೆಟ್ಟಿಗೆ ಹಂಚಿಕೆ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮೈಸೂರಿನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿದ ಅವರು, “ಕುಕ್ಕರ್‌ ವಿತರಣೆಯನ್ನು ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಗೂ ಮುನ್ನವೇ ಮಾಡಲಾಗಿದೆ. ಜ.26ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಿಸಲಾಗಿದೆ” ಎಂದರು.

“ಆ ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳಿವೆ. ಕುಕ್ಕರ್‌ ಮೇಲೆ ಎಲ್ಲಿಯೂ ಸಿದ್ದರಾಮಯ್ಯ ಅವರ ಹೆಸರಾಗಲಿ ಅಥವಾ ಫೋಟೋ ಆಗಲಿ ಇಲ್ಲ. ಅಲ್ಲದೇ ನಮ್ಮ ತಂದೆಯವರು ಸ್ವತಃ ಕೈಯಿಂದಲೂ ಅವುಗಳನ್ನು ಕೊಟ್ಟಿಲ್ಲ. ಆದರೆ, ಚುನಾವಣೆಗಾಗಿ ಕುಕ್ಕರ್‌ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ಹಂಚಲಾಗಿದೆ ಎಂದು ಮಾಧ್ಯಮದಲ್ಲಿ ತಿರುಚಲಾಗಿದೆ. ತಂದೆ ಅವರ ಕೈಯಿಂದ ದುಡ್ಡು ಕೊಟ್ಟು ಎಲ್ಲಿಯೂ ಹಂಚಿಲ್ಲ” ಎಂದು ವಿವರಣೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಮುಂದೆ ಬಿಜೆಪಿ ಸಂಸದರು ಬಾಯಿ ತೆಗೆಯಲು ಹೆದರುತ್ತಾರೆ: ಪ್ರಿಯಾಂಕ್‌ ಕಿಡಿ

“ಸಿದ್ದರಾಮಯ್ಯ ಅವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಗೆಲ್ಲುವುದಕ್ಕಾಗಿ ಮಡಿವಾಳ ಸಮುದಾಯದವರಿಗೆ ಕುಕ್ಕರ್‌ ಹಾಗೂ ಇಸ್ತ್ರಿಪೆಟ್ಟಿಗೆಗಳನ್ನು ಕೊಟ್ಟಿದ್ದಾರೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಮಾತನಾಡುವಾಗ ಸರಿಯಾಗಿ ಮಾತನಾಡಿಲ್ಲದಿರಬಹುದಷ್ಟೆ” ಎಂದು ಸಮಜಾಯಿಷಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...