ಬೀದರ್‌ | ಬಸವ ಭೂಮಿಯಲ್ಲಿ ಬಸವರಥ ಯಾತ್ರೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ : ಗುರುಬಸವ ಪಟ್ಟದ್ದೇವರು

Date:


ಬಸವ ಭೂಮಿಯಲ್ಲಿ ಬಸವರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ದೇಶ ಮೊದಲು ಎನ್ನುವ ನಿಟ್ಟಿನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಅಭಿಪ್ರಾಯಪಟ್ಟರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದ ಆವರಣದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಭಾರತ ವಿಕಾಸ
ಸಂಗಮದ ಸ್ವರ್ಣ ಜಯಂತಿ ಮತ್ತು ಭಾರತೀಯ ಸಂಸ್ಕೃತಿ ಉತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಬಸವ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ದೇಶಾಭಿಮಾನ ಮೂಡಿಸುವ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಜ.28 ರಿಂದ ಫೆ.6 ರವರೆಗೆ ನಡೆಯಲಿರುವ ಭಾರತೀಯ ಸಂಸ್ಕೃತಿ ಉತ್ಸವ-7ರ ನಿಮಿತ್ಯ ಬಸವ ತತ್ವ ಪ್ರಸಾರ ಅಂಗವಾಗಿ ಬಸವರಥ ಯಾತ್ರೆ ನಡೆಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ರಾಷ್ಟ್ರದ ಅಭಿವೃದ್ಧಿಗೆ ಬಸವತತ್ವ ಅತ್ಯವಶ್ಯಕ ಎನ್ನುವುದು ಎಲ್ಲರೂ ಒಪ್ಪಬೇಕಾದ ಸಂಗತಿಯಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕಾಸ ಅಕಾಡೆಮಿಯ ಸಹ ಸಂಚಾಲಕ ರೇವಣಸಿದ್ದ ಜಾಡರ ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕತೆಯ ಜೊತೆಗೆ ಪ್ರಾಚೀನ
ಪರಂಪರೆಯ ಸಂಸ್ಕೃತಿಯನ್ನೂ ನಾವು ಗೌರವಿಸಬೇಕುʼ ಎಂದು ಹೇಳಿದರು.

ಶರಣಸಾಹಿತ್ಯ ಪರಿಷತ್ ಜಿಲ್ಲಾದ್ಯಕ್ಷ ಶಂಭುಲಿಂಗ ಕಾಮಣ್ಣ ಮಾತನಾಡಿ, ʼಉತ್ತಮ ಗುರುಪರಂಪರೆ ಇದ್ದಾಗ ಮಾತ್ರ ಗುಣಮಟ್ಟದ ವಿದ್ಯಾರ್ಥಿಗಳು ತಯ್ಯಾರಾಗುತ್ತಾರೆʼ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗಭೂಷಣ ಮಾಮಡಿ ಮಾತನಾಡಿ, ಬಸವರಾಜ ಪಾಟೀಲ ಸೇಡಂ ಅವರ ದೇಶಭಕ್ತಿ ಕಾರ್ಯ ಮೆಚ್ಚುವಂತಹದ್ದುʼ ಎಂದರು.

ಈ ಸುದ್ದಿ ಓದಿದ್ದೀರಾ? ಔರಾದ್ | ಪ್ರತಿಭಾ ಕಾರಂಜಿ : ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಫ್‌ನಾನ್ ರಾಜ್ಯ ಮಟ್ಟಕ್ಕೆ ಆಯ್ಕೆ

ವಿಕಾಸ ಅಕಾಡೆಮಿಯ ತಾಲೂಕು ಸಂಚಾಲಕ ಅಕ್ಷಯಕುಮಾರ ಎಸ್ ಮುದ್ದಾ, ನ್ಯಾಯವಾದಿ ರಾಜಶೇಖರ ಅಷ್ಟೂರೆ, ವಚನ ಸಾಹಿತ್ಯ ಪರಿಷತ್‍ನ ಗುಂಡಪ್ಪ ಸಂಗಮಕರ, ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಸೋಮನಾಥಪ್ಪ ಅಷ್ಟೂರೆ, ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ಧಾಬಶಟ್ಟಿ, ಸಂತೋಷ ಹಡಪದ, ಸಂತೋಷ ಬಿಜಿ ಪಾಟೀಲ, ಬಾಬು ಬೆಲ್ದಾಳ, ಬಾಬು ಲಾಧಾ, ಶಾಂತಯ್ಯಾ ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...