ರಾಮನಗರ | ಅನೈತಿಕವಾಗಿ ಅಧಿಕಾರಕ್ಕೇರುವುದು ಬಿಜೆಪಿಯ ಕಾಯಕ: ಸಚಿವ‌ ಶಿವರಾಜ ತಂಗಡಗಿ

Date:

  • ಹೆಚ್ಚಿನ ಆಧುನಿಕತೆಯೊಂದಿಗೆ ಕೊಪ್ಪಳದಲ್ಲಿ ಜಾನಪದ ಲೋಕ ನಿರ್ಮಾಣ ಮಾಡಲಾಗುವುದು.
  • ರಾಜ್ಯ ಸರ್ಕಾರದ ಗ್ಯಾರಂಟಿಗಳಿಗೆ ಬೆದರಿ ಬಿಜೆಪಿ ಪಕ್ಷದ ಶಾಸಕರು ನಮ್ಮ‌ ಪಕ್ಷಕ್ಕೆ ಬರುತ್ತಿದ್ದಾರೆ.

“ಕರ್ನಾಟಕವೆಂದು ನಮ್ಮ ರಾಜ್ಯಕ್ಕೆ ನಾಮಕರಣ ಮಾಡಿ ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಆದುದರಿಂದ ರಾಜ್ಯಾದ್ಯಂತ ʼಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡʼ ವೆಂಬ ಕಾರ್ಯಕ್ರಮವನ್ನು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದು, ಅದರಂತೆ ಒಂದು ವರ್ಷ ರಾಜ್ಯಾದ್ಯಾಂತ ಈ ಕಾರ್ಯಕ್ರಮವನ್ನು ಏರ್ಪಡಿಲಾಗುವುದು” ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಸಚಿವ ಶಿವರಾಜ್ ತಂಗಡಗಿ ಅವರು ಮೊದಲ ಬಾರಿಗೆ ಭಾನುವಾರ ರಾಮನಗರ ಜಾನಪದ‌ ಲೋಕಕ್ಕೆ ಭೇಟಿ ಜಾನಪದ ಲೋಕದ ಜಾನಪದ ಕಲಾಕೃತಿಗಳು, ಪೌರಾಣಿಕ ಹಾಗೂ ಮಹಾ ಕಾವ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಅವರು, ” ಜಾನಪದ ಲೋಕಕ್ಕೆ ಹೆಚು ವೀಕ್ಷಕರನ್ನು ಸೆಳೆಯಲು ಹೆಚ್ಚು ಪ್ರಚಾರ ಕಾರ್ಯಕ್ಕೆ ಕ್ರಮವಹಿಸಲಾಗುವುದು. ಜಾನಪದ ಲೋಕ ವೀಕ್ಷಿಸಿ ಇಲ್ಲಿನ ಮಾದರಿಯಲ್ಲಿ ಹೆಚ್ಚಿನ ಆಧುನಿಕತೆಯೊಂದಿಗೆ ಕೊಪ್ಪಳದಲ್ಲಿ ಜಾನಪದ ಲೋಕ ನಿರ್ಮಾಣ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಈ ಕಾರ್ಯಕ್ರಮವನ್ನು ಏರ್ಪಡಿಸುವ ಮೊದಲು ರಾಜ್ಯದ ಸಾಹಿತಿಗಳು, ಹೋರಾಟಗಾರರ, ಕಲಾವಿದರ ಅಭಿಪ್ರಾಯವನ್ನು ಸಂಗ್ರಹಿಸುವ ಕಾರ್ಯ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗ ಮಟ್ಟದ ಸಭೆ ಪೂರ್ಣಗೊಂಡಿದ್ದು, ಮೈಸೂರು ವಿಭಾಗದ ಸಭೆ ಪೂರ್ಣಗೊಂಡ ನಂತರ ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು” ಎಂದರು.”ಈ ಕಾರ್ಯಕ್ರಮವನ್ನು ಏರ್ಪಡಿಸುವ ಮೊದಲು ರಾಜ್ಯದ ಸಾಹಿತಿಗಳು, ಹೋರಾಟಗಾರರ, ಕಲಾವಿದರ ಅಭಿಪ್ರಾಯವನ್ನು ಸಂಗ್ರಹಿಸುವ ಕಾರ್ಯ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗ ಮಟ್ಟದ ಸಭೆ ಪೂರ್ಣಗೊಂಡಿದ್ದು, ಮೈಸೂರು ವಿಭಾಗದ ಸಭೆ ಪೂರ್ಣಗೊಂಡ ನಂತರ ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನೈತಿಕವಾಗಿ ಅಧಿಕಾರಕ್ಕೇರುವುದು ಬಿಜೆಪಿಯ ಕಾಯಕ:

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ‌ ಬಿಜೆಪಿ ಸ್ವಂತ ಶಕ್ತಿ ಮೇಲೆ‌ ಸರ್ಕಾರ ರಚನೆ‌ ಒಮ್ಮೆಯೂ ಮಾಡಲಿಲ್ಲ,‌ ಅಡ್ಡದಾರಿಯಲ್ಲಿ ಅಧಿಕಾರಕ್ಕೇರುವುದು ಆ ಪಕ್ಷದ ನಾಯಕರಿಗೆ ಕರಗತವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ‌ ಟೀಕಿಸಿದರು.

ರಾಮನಗರದ ಜಾನಪದ‌ ಲೋಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ನ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ‌‌ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಅನೈತಿಕವಾಗಿ ಸರ್ಕಾರ ರಚಿಸುವುದು ಅವರ ಕಾಯಕ. ಬಿಜೆಪಿ ಸ್ವಂತ ಶಕ್ತಿ ಮೇಲೆ‌ ಸರ್ಕಾರ ರಚನೆ‌ ಮಾಡಿದ‌‌ ಉದಾಹರಣೆ ಇಲ್ಲ. ಆ ಪಕ್ಷದ ನಾಯಕರಿಗೆ ಬದ್ಧತೆ ಇಲ್ಲ. ಅಪರೇಷನ್ ಕಮಲ‌ ಮಾಡುವ ಕನಸು ಕಾಣುತ್ತಿದ್ದಾರೆ. ಇದೆಲ್ಲ‌ ನಡೆಯುವುದಿಲ್ಲ. ಜನತೆ ನಮಗೆ ದೊಡ್ಡ ಮಟ್ಟದ ಬೆಂಬಲ ನೀಡಿದ್ದಾರೆ. ಯಾವುದೇ ಅಪರೇಷನ್‌‌ ನಡೆಯಲ್ಲ. ನಮ್ಮ ಗ್ಯಾರಂಟಿಗಳಿಗೆ ಬೆದರಿ ಆ ಪಕ್ಷದ ಶಾಸಕರು ನಮ್ಮ‌ ಪಕ್ಷದತ್ತ‌ ಬರುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಗರಿಗೆ ತಕ್ಕ‌ಪಾಠ ಕಲಿಸಿದರೂ ಆ ಪಕ್ಷದ ಮುಖಂಡರಿಗೆ ಬುದ್ದಿಬಂದಂತೆ ಕಾಣುತ್ತಿಲ್ಲ” ಎಂದು ಛೇಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕಾಡುಪ್ರಾಣಿಗಳ ದಾಳಿಯಿಂದ ಜೋಳದ ಬೆಳೆ ನಾಶ; ರೈತ ಕಂಗಾಲು

“ಕೇಂದ್ರದಲ್ಲಿ‌ ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ‌ ನರೇಂದ್ರ ಮೋದಿ‌‌‌‌ ಅವರು, ಅಧಿಕಾರಕ್ಕೆ ‌ಬಂದ‌ ಕೂಡಲೇ ವಿದೇಶದಲ್ಲಿರುವ ಕಪ್ಪು ಹಣ ತರುತ್ತೇವೆ.‌ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದೆಲ್ಲ‌ ಜನತೆಗೆ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ‌ಬಂದರು.‌ ಅದೆಲ್ಲ ಆಶ್ವಾಸನೆಯಾಗಿಯೇ ಉಳಿದಿದೆ. ನಾವು ಚುನಾವಣಾ ಪೂರ್ವದಲ್ಲಿ‌ ಕೊಟ್ಟ ಆಶ್ವಾಸನೆಯಂತೆ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ” ಎಂದರು.

ಈ ಸಂದರ್ಭದಲ್ಲಿ, ಜಾನಪದ ಲೋಕದ ಟ್ರಸ್ಟಿ ಆದಿತ್ಯ ನಂಜರಾಜು, ಸಚಿವರ ಆಪ್ತ ಕಾರ್ಯದರ್ಶಿ ಮಧುಸೂಧನ ರೆಡ್ಡಿ ಹಾಗೂ ಜಾನಪದ ಲೋಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...