ITC ನಕಲಿ ಕಂಪನಿಯ ಸಿಗರೇಟ್ ಮಾರಾಟ ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ.

Date:

ಚಿಂತಾಮಣಿ ನಗರದ ಟಿಎಪಿಎಂಸಿ ಮಾರುಕಟ್ಟೆಯ ಆವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತಂದಿದ ಐ ಟಿ ಸಿ ಕಂಪನಿಯ ಹೆಸರಿನ ನಕಲಿ ಸಿಗರೇಟ್ ಪ್ಯಾಕೆಟ್ ಮತ್ತು ಮೂವರು ಆರೋಪಿಗಳ ಸಮೇತ ಒಂದು ಬಲೆನೋ ಕಾರು ವಶಪಡಿಸಿಕೊಳ್ಳುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಮಂಡ್ಯ ತಾಲ್ಲೂಕಿನ ನಂಬಿನಾಯಕನಹಳ್ಳಿ ಗ್ರಾಮ,ದರ್ಶನ್ ಬಿನ್ ರಾಜು. ಕೆ ಆ‌ರ್ ಪೇಟೆ ತಾಲ್ಲೂಕಿನ ನಾಟನಹಳ್ಳಿ ಗ್ರಾಮ ಕಾರ್ತಿಕ್ ಬಿನ್ ಪುಟ್ಟರಾಜು. ನಾಮಕಲ್ ಜಿಲ್ಲೆ,ತಮಿಳುನಾಡಿನ ಮುಪ್ಪಟಮ್ ಪಾಳ್ಯ, ದೇವನಕುರ್ಚಿ ಗ್ರಾಮದ ಗೋಪಾಲ್ ಬಿನ್ ಮುರುಗೇಶ ಸೇರಿದಂತೆ 6,71,484 ರೂ ಬೆಲೆ ಬಾಳುವ ನಕಲಿ ಸಿಗರೇಟ್ ಪ್ಯಾಕೆಟ್‌ಗಳನ್ನು ಮತ್ತು ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ,ಕೆಎ41 MF 8865 ಬಲೆನೋ ಕಾರ್‌ನ್ನು ಅಮಾನತ್ತುಪಡಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ..?ವಶಪಡಿಸಿಕೊಂಡ ರೈತರ ಜಮೀನಿನಲ್ಲಿ ಮತ್ತೆ ಗಿಡ ನೆಡಲು ಮುಂದಾಗಿದ್ದಾರೆ

ಇನ್ನೂ ಅಕ್ರಮವಾಗಿ ಐಟಿಸಿ ಕಂಪನಿಯ ಹೆಸರಿನಲ್ಲಿ ನಕಲಿ ಸಿಗರೇಟ್ ಪ್ಯಾಕೆಟ್ ತಂದು ಚಿಂತಾಮಣಿಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್ ಪಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗ್ನಾಥ ರೈ ಇವರ ಮಾರ್ಗದರ್ಶನದ ಮೇರೆಗೆ ಡಿವೈಎಸ್‌ಪಿ ಪಿ ಮುರಳೀಧರ್ ರವರ ಮುಂದಾಳತ್ವದಲ್ಲಿ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀಜಿಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿಯವರುಗಳಾದ ಮಂಜುನಾಥ,ಮುನಿರಾಜು ಸಿ,ಶ್ರೀನಿವಾಸ,ಲೋಕೇಶ್,ಗಿರೀಶ್,ಅನೀಲ್ ಕುಮಾರ್, ಸುರೇಶ್ ರವರ ತಂಡವು ದಾಳಿಯಲ್ಲಿ ಭಾಗಿ ಆಗಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...