ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ಜಗಜ್ಯೋತಿ ಬಸವಣ್ಣನ ಭಾವಚಿತ್ರ ಅನಾವರಣ

Date:

ಬಸವಣ್ಣನವರ ಪುತ್ಥಳಿ ನಿರ್ಮಿಸಿ ಪೂಜೆಗೆ ಸೀಮಿತಗೊಳಿಸದೆ, ಜಗಜ್ಯೋತಿ ಬಸವಣ್ಣನವರ ತತ್ವ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಕೆ ರವೀಂದ್ರನಾಥ್ ಹೇಳಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿದ ವೇಳೆ ಮಾತನಾಡಿದರು.

“12ನೇ ಶತಮಾನದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಮಾಜದಲ್ಲಿದ್ದಂಥ ಜಾತಿ ವ್ಯವಸ್ಥೆ, ಲಿಂಗ ಅಸಮಾನತೆ, ಅಸ್ಪೃಶ್ಯತೆ, ಮೇಲು ಕೀಳು ಎನ್ನುವ ಅಂಧಕಾರಗಳನ್ನು ನಿರ್ಮೂಲನೆ ಮಾಡಿ, ಧಾರ್ಮಿಕ ಮೂಢನಂಬಿಕೆಗಳನ್ನು, ಕಿತ್ತೊಗೆದು, ಕಾಯಕ ದಾಸೋಹ ಸಿದ್ಧಾಂತಗಳನ್ನು ಪ್ರತಿಪಾದಿಸಿದ್ದಾರೆ. ಇಂದಿನ ಸಂವಿಧಾನದ ಆಶಯವಾದ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ತತ್ವವನ್ನು 12ನೇ ಶತಮಾನದಲ್ಲಿಯೇ ಬಸವಣ್ಣನವರು ರೂಪಿಸಿ ನಿರೂಪಿಸಿದ್ದರು. ಈ ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ, ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ದಾಸೋಹಿ ಶರಣ ಪ್ರಭುದೇವ ಅರಳಿ ಅವರನ್ನು ಸತ್ಕರಿಸಲಾಯಿತು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮರೆಡ್ಡಿ ಹೀರ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೆ ರವೀಂದ್ರನಾಥ ಅವರ ನೇತೃತ್ವದಲ್ಲಿ, ಪ್ರಭುರಾಜ ಅರಳಿ ಅವರು ತಮ್ಮ ತಂದೆ ಕೊಟ್ರೇಶಪ್ಪ ಅರಳಿ ಅವರ ಸ್ಮರಣಾರ್ಥ ನೀಡಿದ ಜಗಜ್ಯೋತಿ ಬಸವೇಶ್ವರ ಫೋಟೋವನ್ನು ಅನಾವರಣಗೊಳಿಸಿದರು.

ಈ ಸುದ್ದಿ ಒದಿದ್ದೀರಾ? ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪಂಚಮಸಾಲಿ ಶ್ರೀಗೆ ಬಿಜೆಪಿ ಸುಪಾರಿ: ಕೆ ಎಸ್ ಶಿವರಾಮು ಆರೋಪ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷೆ ಸೌಭಾಗ್ಯ ಲಕ್ಷ್ಮಿ, ಲಿಂಗಾಯತ ಸಮಾಜದ ಮುಖಂಡರಾದ ಬಸವರಾಜ ಮಾವಿನಹಳ್ಳಿ, ಬಸವ ಬಳಗದ ಬಸವಕಿರಣ ಸ್ವಾಮಿ, ಲೋಕೇಶ್ ಅವರಾದಿ, ಕೋರಿ ಶೆಟ್ಟಿ ಲಿಂಗಪ್ಪ, ಡಾ. ಮಹಾಬಲೇಶ್ವರ ರೆಡ್ಡಿ, ಶರಣಗೌಡ ಪೊಲೀಸ್ ಪಾಟೀಲ,‌ ಇಷ್ಠಲಿಂಗ ಅಧ್ಯಯನದ ಬಸವರಾಜ ಮಾವಿನಳ್ಳಿ, ಬಸವ ಬಳಗದ ಬಸವಕಿರಣ ಸ್ವಾಮಿ, ಲೋಕೇಶ ಅವರಾಧಿ, ಲಿಂಗಾಯತ ಸಮಾಜದ ಗಣ್ಯರಾದ ಕೊರಿಶೆಟ್ಟಿ ಲಿಂಗಪ್ಪ, ಶರಣುಸ್ವಾಮಿ, ಡಾ.ಮಹಾಬಲೇಶ್ವರ ರೆಡ್ಡಿ, ಅರಳಿ ಪ್ರಭು, ಜಾಫರಸಾಬ, ಬಸವಣ್ಣ ಲಿಂಗಾಯತ, ಸೋ ದಾ ವಿರೂಪಾಕ್ಷಗೌಡ, ಮುದನೂರು ಉಮಾಮಹೇಶ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...