ಬೀದರ್ | ಜಗನ್ನಾಥ ಹೆಬ್ಬಾಳೆ ಸಾಂಸ್ಕೃತಿಕ ಶಕ್ತಿ : ಪರಮೇಶ್ವರ ನಾಯ್ಕ್

Date:

ಬೀದರ ವಿಶ್ವವಿದ್ಯಾಲಯದ ಡೀನರಾಗಿ ಮಾಡಿದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಪ್ರೊ.ಜಗನ್ನಾಥ ಹೆಬ್ಬಾಳೆ ಅವರು ಈ ನೆಲದಲ್ಲಿ ಒಂದು ಸಾಂಸ್ಕೃತಿಕ ಶಕ್ತಿಯಾಗಿ ಸದಾ ಕ್ರಿಯಾಶೀಲರಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯ್ಕ್ ಹೇಳಿದರು.

ಬೀದರ ವಿಶ್ವವಿದ್ಯಾಲಯದ ಕನ್ನಡ ವಿಭಾಗ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಕರ್ನಾಟಕ ಕಾಲೇಜು ಕನ್ನಡ ವಿಭಾಗದ ಸಹಯೋಗದಲ್ಲಿ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರೊ ಜಗನ್ನಾಥ ಹೆಬ್ಬಾಳೆ ಅವರ ಬದುಕು ಬರಹ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಶೈಕ್ಷಣಿಕ, ಸಾಹಿತ್ಯಕ, ಸಾಮಾಜಿಕ ತುಡಿತವಿರುವ ವ್ಯಕ್ತಿತ್ವ ಹೆಬ್ಬಾಳೆ ಅವರದು’ ಎಂದರು.

ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ. ದೇವಿದಾಸ ತುಮಕುಂಟೆ ಮಾತನಾಡಿ, ‘ಹೆಬ್ಬಾಳೆ ಅವರ ಸಮಾಜ ಪರವಾದ ಕಾಳಜಿ ಶ್ಲಾಘನೀಯ. ಅವರು ಕರ್ನಾಟಕ ಕಾಲೇಜಿನ ಕನ್ನಡ ವಿಭಾಗದ ಜೊತೆಗೆ ಹಲವು ವಿಭಾಗಗಳು ಕಟ್ಟಲು ಶ್ರಮಿಸಿದರು. ಅವರ ಸ್ನೇಹದ ವ್ಯಕ್ತಿತ್ವಕ್ಕೆ ಹಲವರು ಸೋತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಸಾಹಿತ್ಯ ಸಮ್ಮೇಳನ, ಜಾನಪದ ಸಮ್ಮೇಳನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕಿ ಡಾ.ಮಹಾದೇವಿ ಹೆಬ್ಬಾಳೆ ಮಾತನಾಡಿ, ‘ಜಗನ್ನಾಥ ಹೆಬ್ಬಾಳೆ ಅವರದು ಮಾತೃ ಹೃದಯಿ ವ್ಯಕ್ತಿತ್ವ. ಸದಾ ಜೀವಪರ, ಜನಪರ ಕಾಳಜಿ ಧ್ಯಾನಿಸುವ ಅಧ್ಯಾಪಕ, ಕೌಟುಂಬಿಕ, ಸಾಮಾಜಿಕವಾಗಿಯೂ ಅಂತಃಕರಣ ಹೊಂದಿದ ಜೀವ’ ಎಂದು ಬಣ್ಣಿಸಿದರು.

ಬಸವಕಲ್ಯಾಣ ಬಸವೇಶ್ವರ ಸ್ನಾತಕೋತ್ತರ ಕಾಲೇಜು ಪ್ರಾಚಾರ್ಯ ಡಾ. ಶಾಂತಲಾ ಪಾಟೀಲ, ಪ್ರೊ. ಜಗನ್ನಾಥ ಹೆಬ್ಬಾಳೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ಕಾರ್ಯಕ್ರಮದಲ್ಲಿ ಡಾ .ರಾಮಚಂದ್ರ ಗಣಾಪೂರ, ಡಾ. ಸಾವಿತ್ರಿ ಹೆಬ್ಬಾಳೆ, ಡಾ ವಿಜಯಕುಮಾರ ಬಿಳಗಿ, ಡಾ. ಸುರೇಖಾ ಬಿರಾದಾರ ಸೇರಿ ಹಲವರಿದ್ದರು. ಸುನಿತಾ ಕೂಡ್ಲಿಕರ ಸ್ವಾಗತಿಸಿದರು. ಬಸವರಾಜ ಖಂಡಾಳೆ ನಿರೂಪಿಸಿದರು.ಡಾ. ಸಂಗಪ್ಪ ತೌಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...