ಜೈನಮುನಿ ಹತ್ಯೆ ಪ್ರಕರಣ | ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ: ಬೊಮ್ಮಾಯಿ

Date:

  • ರಾಜ್ಯ ಸರ್ಕಾರ ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ
  • ಜೈನಮುನಿ ಹತ್ಯೆ ಪೂರ್ವ ನಿಯೋಜಿತ ಕೊಲೆ: ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂಬುದನ್ನು ತೋರಿಸಲು ಸರ್ಕಾರ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ ಸಮಾಜಘಾತಕ ಶಕ್ತಿಗಳು ತಾವು ಏನು ಮಾಡಿದರೂ ರಕ್ಷಣೆಗೆ ಇದ್ದಾರೆ ಎಂದು ಭಯವಿಲ್ಲದೆ ಓಡಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪವಾದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾಮಾನ್ಯವಾಗಿ ಕೊಲೆಗಡುಕ ಕೊಲೆ ಮಾಡಿ ಓಡಿ ಹೋಗುತ್ತಾರೆ. ಈ ಕೊಲೆ ಮಾಡಿದ ವ್ಯಕ್ತಿ ಅವರನ್ನು ಪೈಶಾಚಿಕವಾಗಿ ಹತ್ಯೆ ಮಾಡಿದ್ದಾರೆ.
ಜೈನ ಮುನಿಗಳು ಸಾಮಾನ್ಯವಾಗಿ ಯಾರ ಮನಸಿಗೂ ನೋವಾಗದಂತೆ ಮಾತನಾಡುತ್ತಾರೆ‌. ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡುವುದಿಲ್ಲ. ಇಂತಹ ಮುನಿಗಳ ಹತ್ಯೆಯಾಗಿದ್ದು ನೋಡಿದರೆ ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ ಅನಿಸುತ್ತದೆ” ಎಂದು.

“ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದು ಕೋಲ್ಡ್ ಬ್ಲಡೆಡ್ ಮರ್ಡರ್ ಆಗಿದೆ. ಅವರು ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಲು ಎಷ್ಟು ಸಮಯ ಆಲೋಚನೆ ಮಾಡಿರಬಹುದು. ಇದು ಮುನಿಗಳಿಗೆ ಹತ್ತಿರ ಇದ್ದವರೇ ಮಾಡಿದ್ದಾರೆ. ಹಣಕಾಸಿನ ವ್ಯವಹಾರಕ್ಕೂ ಮುನಿಗೂ ಯಾವುದೇ ಸಂಬಂಧ ಇಲ್ಲ. ಮುನಿಗಳ ಹತ್ಯೆ ಯಾಕೆ ಆಯಿತು ಅಂತ ಪೊಲಿಸರು ಹೇಳುತ್ತಿಲ್ಲ. ಪ್ರಕರಣ ಬೇಗ ಭೇದಿಸಿದ್ದು ಸರಿ ಆದರೆ, ಪೊಲಿಸರು ಅಷ್ಟು ಬೇಗ ಪ್ರಕರಣ ಮುಕ್ತಾಯ ಮಾಡುವ ರೀತಿ ಮಾತನಾಡಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಅಲ್ಲಿ ಎಲ್ಲೆಲ್ಲೂ ಸೌಜನ್ಯಳೇ ಕಾಣಸಿಗುತ್ತಾಳೆ…

“ಜೈನಮುನಿ ಅವರು ಕೊಲೆ ಮಾಡಿ ಅಲ್ಲಿಂದ ಸಾಗಿಸಲು ಕೇವಲ ಇಬ್ಬರು ಮಾತ್ರ ಇರಲು ಸಾಧ್ಯವಿಲ್ಲ. ಅಲ್ಲಿಂದ ಸಾಗಿಸಲು ಯಾವ ವಾಹನ ಬಳಸಿದರು. ಅವರು ಹೆಣ ತುಂಡು ಹೇಗೆ ಮಾಡಿದರು. ಜೈನ ಧರ್ಮ ಯಾವುದೇ ಪ್ರಚೋದನೆ ಮಾಡುವುದಿಲ್ಲ. ಅಂತಹ ಮುನಿಗಳ ಹತ್ಯೆಯಾಗಿದೆ ಅಂದರೆ ಇದರ ಹಿಂದೆ ದೊಡ್ಡ ಶಕ್ತಿ ಇದೆ” ಎಂದು ಅನುಮಾನ ವ್ಯಕ್ತಪಡಿಸಿದರು.

ಕಲಬುರ್ಗಿಯಲ್ಲಿ ಮರಳು ಮಾಫಿಯಾದವರು ಹೆಡ್ ಕಾನ್ ಸ್ಟೇಬಲ್ ಹತ್ಯೆ ಮಾಡುತ್ತಾರೆ. ನಂಜನಗೂಡಿನಲ್ಲಿ ನಡೆದ ಹತ್ಯೆ, ಬೀದರ್ ನಲ್ಲಿ ಹಣ ವಸೂಲಿಗೆ ಏಜೆಂಟ್ ಗೆ ಒತ್ತಡ ಇದೆ ಅಂತ ಆರೋಪ ಮಾಡಿದ್ದಾನೆ. ಈ ಬಗ್ಗೆ ಎಫ್ ಐ ಆರ್ ಕೂಡ ಆಗಿದೆ. ಕಲಬುರ್ಗಿಯಲ್ಲಿ ಒಬ್ಬ ಪೊಲಿಸ್ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಷ್ಟು ಬೇಗ ಹದಗೆಟ್ಟಿದೆ. ಜೈನ ಮುನಿಗಳ ಸಾವಿಗೆ ನ್ಯಾಯ ಕೊಡಬೇಕಾದರೆ, ಈ ವಿಚಾರದಲ್ಲಿ ಆಕಡೆ ಈ‌ಕಡೆ ಅನ್ನದೆ ಸರ್ಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದೆ ಅಂತ ತೋರಿಸಬೇಕಾದರೆ ಸಿಬಿಐ ತನಿಖೆಗೆ ಒಪ್ಪಿಸಬೇಕು.‌ ಇಲ್ಲದಿದ್ದರೆ ರಾಜ್ಯದ ಜನತೆ ಪ್ರತಿಭಟನೆ ನಡೆಸುತ್ತಾರೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...