ಜಮಖಂಡಿ | ದೀನದಲಿತರ ಉದ್ಧಾರಕ್ಕಾಗಿಯೇ ಗೌತಮ ಬುದ್ಧ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿದೆ: ಧಮ್ಮಪಾಲ ಬಂತೇಜಿ

Date:

ಹಲವು ಸರ್ಕಾರೇತರ ಸಂಸ್ಥೆಗಳು ನಮ್ಮ ಸಮಾಜದಲ್ಲಿವೆ. ಆದರೆ ಬೋಧಿ ಸತ್ವ ಗೌತಮ ಬುದ್ಧ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ದೀನದಲಿತರ ಉದ್ಧಾರಕ್ಕಾಗಿಯೇ ನಿರ್ಮಾಣಗೊಂಡಿರುವ ಸಂಸ್ಥೆಯಾಗಿದೆ ಎಂದು ಜಮಖಂಡಿ ನವ ನಗರದ ಬುದ್ಧವಿಹಾರದ ಗುರು ಧಮ್ಮಪಾಲ ಬಂತೇಜಿ ಹೇಳಿದರು.

ಜಮಖಂಡಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೋಧಿ ಸತ್ವ ಗೌತಮ ಬುದ್ಧ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, “ಈ ಸಂಸ್ಥೆಯು ಗ್ರಾಮೀಣ ಭಾಗದ ಬಡ ಜನರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುವಂತಾಗಲಿ. ಸಂಸ್ಥೆಯು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ಸಮಾನವಾಗಿ ನೋಡುವಂತಾಗಲಿ. ಇಂತಹ ಸಂಸ್ಥೆಯೊಂದರ ಉದ್ಘಾಟನೆ ಮಾಡುವುದು ಅತ್ಯಂತ ಹೆಮ್ಮೆಯ ವಿಷಯ” ಎಂದು ಶುಭ ಹಾರೈಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಗೂ ಸಂಸ್ಥೆಯ ಅಧ್ಯಕ್ಷ ಪರಶುರಾಮ ಕಾಂಬಳೆ ಮಾತನಾಡಿ, “ಸರ್ಕಾರೇತರ ಸಂಸ್ಥೆಯಾದ ಈ ಸಂಸ್ಥೆಯನ್ನು ನಾವೆಲ್ಲರೂ ಕೂಡಿ ಬೆಳೆಸಿ ಈ ನಾಡಿನ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡೋಣ ಹಾಗೂ ಸರ್ಕಾರದ ಸಹಾಯಧನ ಮತ್ತು ಯೋಜನೆಗಳನ್ನು ಪಡೆದುಕೊಂಡು ಜನರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡೋಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯವಾದಿ ಎಸ್ ಪಿ ದೊಡ್ಡಮನಿ ಮಾತನಾಡಿ, “ಈ ಸಂಸ್ಥೆಯು ಮುಂದಿನ ಯುವ ಪೀಳಿಗೆಗೆ ಶಿಕ್ಷಣ ಮತ್ತು ಆರೋಗ್ಯ ದೃಷ್ಟಿಯಿಂದ ಅನುಕೂಲವಾಗಲಿ” ಶುಭ ಹಾರೈಸಿದರು.

ಇದನ್ನೂ ಓದಿ: ಬಾಗಲಕೋಟೆ | ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್‌ ಬಿ ತಿಮ್ಮಾಪೂರ

ದಲಿತ ಸಂಘರ್ಷ ಸಮಿತಿ ಜಿಲ್ಲಾ ಮುಖಂಡರಾದ ಎಚ್ ಎನ್ ನೀಲನಾಯಕ ಮಾತನಾಡಿ, “ಈ ಸಂಸ್ಥೆಯನ್ನು ಪ್ರಾರಂಭಿಸಲು ವಿಚಾರ ಮಾಡಿ ಸಂಸ್ಥೆ ಹುಟ್ಟು ಹಾಕಿದ್ದು ಸಂತೋಷಕರ ಸಂಗತಿ. ಶೋಷಿತ ಸಮುದಾಯಗಳ ಕೇಂದ್ರವಾಗಿ ಅವರ ಉದ್ಧಾರಕ್ಕಾಗಿ ಕೆಲಸ ಮಾಡಲಿ” ಎಂದರು.

ಕನ್ನೊಳ್ಳಿ ಗ್ರಾಮದ ನಿವೃತ್ತ ಶಿಕ್ಷಕಿ ಕೆಪಿ ಮೋಹಿತೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಬಕವಿ ಬನಹಟ್ಟಿ ತಾಲೂಕು ಸಂಚಾಲಕ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೊಡ್ಡಮನಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಯುವಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...