ಚಿಕ್ಕಬಳ್ಳಾಪುರ | ಜೂನ್ 15ರಂದು ರಾಜ್ಯಮಟ್ಟದ ಕಲಾ ಮಹೋತ್ಸವ; ಕಲಾ ತಂಡಗಳ ನೋಂದಣಿಗೆ ಕರೆ

Date:

ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಾಡೋಜ ಡಾ.ಜಿ. ನಾರಾಯಣ ಅವರ ಸ್ಮರಣಾರ್ಥ ಜೂನ್ 15 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜನಪದ ಕಲಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಾಡೋಜ ಡಾ.ಜಿ.ನಾರಯಣ ಪ್ರತಿಷ್ಠಾನದ ಅಧ್ಯಕ್ಷ ಜಿ.ನಾ.ಗೋಪಾಲಕೃಷ್ಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡೋಜ ಡಾ.ಜಿ.ನಾರಯಣ ಅವರು ಮಹಾಪೌರರಾಗಿ, ಕಸಾಪ ಅಧ್ಯಕ್ಷರಾಗಿ ಜನಪದ ಕಲೆಗಳ ಉಳಿವಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ಇದರ ಪರಿಣಾಮ ಪ್ರಸ್ತುತ ಜಾನಪದ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತಾಗಿದೆ ಎಂದು ಹೇಳಿದರು.

ಜಾನಪದ ಕಲೆಗಳಿಗೆ ಮತ್ತಷ್ಟು ಪ್ರೋತ್ಸಾಹ ದೊರಕಿಸಿಕೊಡುವ ನಿಟ್ಟಿನಲ್ಲಿ ನಾಡೋಜ ಡಾ.ಜಿ.ನಾರಾಯಣ ಪ್ರತಿಷ್ಠಾನ, ಭಾರತೀಯ ಕನ್ನಡ ಪ್ರತಿಷ್ಠಾನ ಮತ್ತು ಸುವರ್ಣ ಜ್ಯೋತಿ ಟ್ರಸ್ಟ್ ಸಹಯೋಗದಲ್ಲಿ ವಿಶ್ವ ದಾಖಲೆಯ ರಾಜ್ಯಮಟ್ಟದ ಜನಪದ ಕಲಾ ಮಹೋತ್ಸವವನ್ನು ಆಯೋಜಿಸಲಾಗಿದ್ದು, ವಿಶ್ವ ದಾಖಲೆ ಮಾಡಲು ಯೋಜಿಸಲಾಗಿದೆ. ಈ ಕಲಾ ಸ್ಪರ್ಧೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಲಾ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾ ತಂಡಗಳ ನೋಂದಣಿ ಕಡ್ಡಾಯವಾಗಿದ್ದು, ವಾಟ್ಸಾಪ್ ಸಂಖ್ಯೆಗೆ ಕಲಾ ಪ್ರದರ್ಶನದ 5 ನಿಮಿಷದ ವಿಡಿಯೋ ತುಣುಕನ್ನು ಕೂಡಲೇ ಕಳಿಸಿಕೊಡಬೇಕು. ವರ್ಲ್ಡ್ ಬುಕ್ ಅಫ್ ರೆಕಾರ್ಡ್ಸ್, ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ಡ್ಯಾನ್ಸ್ ರೆಕಾರ್ಡ್ಸ್ ಒಪ್ಪಿಗೆಯಂತೆ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.

ಮೊದಲ ಬಹುಮಾನವಾಗಿ 1 ಲಕ್ಷ, ಎರಡನೇ ಬಹುಮಾನವಾಗಿ 75 ಸಾವಿರ, ಮೂರನೇ ಬಹುಮಾನವಾಗಿ 50 ಸಾವಿರ, ಪ್ರೋತ್ಸಾಹಕ ಬಹುಮಾನವಾಗಿ ಹತ್ತು ತಂಡಗಳಿಗೆ ಹತ್ತು ಸಾವಿರ ನೀಡಲಾಗುವುದು ಎಂದು ತಿಳಿಸಿದರು.

ನಾಡೋಜ ಡಾ.ಜಿ.ನಾರಾಯಣ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಮುನಿ ವೆಂಕಟಸ್ವಾಮಿ ಮಾತನಾಡಿ, ಡೊಳ್ಳು ಕುಣಿತ, ವೀರಗಾಸೆ, ಪುರವಂತಿಕೆ, ಲಿಂಗದಬೀರರು, ಪಟದ ಕುಣಿತ, ಪೂಜಾ ಕುಣಿತ, ಬೀಸು ಕಂಸಾಳೆ, ಹೆಜ್ಜೆ ಮೇಳ, ಗೊರವರ ಕುಣಿತ, ಕಂಗೀಲು ಕುಣಿತ, ಕೋಲಾಟ, ಜೋಗತಿ ಮೇಳ ಮಾಡುವ ರಾಜ್ಯದ ಯಾವುದೇ ಕಲಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.

ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಆಸಕ್ತ ತಂಡಗಳು ಮೊ.ಸಂಖ್ಯೆ: 9481783344, 9341224368, 9922436974 ಈ ಸಂಖ್ಯೆಗಳಿಗೆ ಕರೆ ಮಾಡಿ ಏ.25 ರಿಂದ ಮೇ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಶ್ರೇಯಸ್ ಹಾಗೂ ರಮೇಶ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...