ಉಡುಪಿ | ಜನವಾದಿ ಮಹಿಳಾ ಸಂಘಟನೆ 2 ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

Date:

ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯಡಿಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಸಮಿತಿ ದ್ವಿತೀಯ ಜಿಲ್ಲಾ ಸಮ್ಮೇಳನವು ಇಂದು ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆಯಿತು.

ಪ್ರಜಾಪ್ರಭುತ್ವ, ಸಮಾನತೆ, ಮಹಿಳಾ ವಿಮೋಚನೆಯ ಗುರಿಗಳನ್ನು ಹೊಂದಿರುವ ಜನವಾದಿ ಮಹಿಳಾ ಸಂಘಟನೆಯ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷೆ ಸರೋಜಾ ನೆರವೇರಿಸಿದರು.

ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಕೆ.ಎಸ್‌. ಲಕ್ಷ್ಮಿಯವರು ಈ ಕಾಲಾವಧಿಯಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಮಹಿಳೆಯರ ಘನತೆಯ ಮೇಲೆ ಹೇಗೆಲ್ಲಾ ದಾಳಿಗಳನ್ನು ತೀವ್ರಗೊಳಿಸಿದೆ ಎಂದು ಮಾತನಾಡುತ್ತಾ, ಅಸಮಾನತೆ ಬಲಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಸಮಾನತೆಗಾಗಿಗಿನ ಹೋರಾಟವನ್ನು ಬಲಗೊಳಿಸುವ ಜವಾಬ್ದಾರಿಯನ್ನು ಎಲ್ಲರು ನಿರ್ವಹಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೋರ್ವ ಅತಿಥಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿಯವರು ಮಹಿಳೆಯರ ಸುರಕ್ಷತೆ ಆಳುವ ಸರ್ಕಾರಗಳಿಗೆ ಆದ್ಯತೆಯಾಗುತ್ತಿಲ್ಲ. ಮಹಿಳೆಯರ ಕುರಿತಾದ ಜನಪ್ರತಿನಿಧಿಗಳ ಮನೋಭಾವ ಬದಲಾಗಬೇಕು. ಅಸಹಜ ಸಾವುಗಳ ಪ್ರಕರಣಗಳ ಕುರಿತಾದ ಎಸ್ ಐ ಟಿ ತನಿಖೆಯ ವ್ಯಾಪ್ತಿಗೆ ಸೌಜನ್ಯ ಪ್ರಕರಣವನ್ನು ತರಬೇಕೆಂದು ಒತ್ತಾಯಿಸಿದರು.

ಸಮ್ಮೇಳನಕ್ಕೆ ಶುಭ ಕೋರಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಇಂದಿನ ಪ್ರಸಕ್ತ ಸವಾಲುಗಳನ್ನು ಎದುರಿಸಲು ಮಹಿಳಾ ಚಳುವಳಿಯನ್ನು ಬಲಪಡಿಸಿದರೆ ಮಹಿಳೆಯರಿಗೆ ನ್ಯಾಯ ಸಿಗಲು ಸಾಧ್ಯ ದುಡಿಯುವ ಜನರ ಚಳುವಳಿಗಳನ್ನು ತೀವ್ರಗೊಳಿಸಿದಾಗ ಮಹಿಳೆಯರು ಆರ್ಥಿಕ ಸಬಲರಾಗಲು ಸಾಧ್ಯವಿದೆ ಅನ್ಯಾಯ ಎದುರಿಸಿ ನ್ಯಾಯ ಕೊಡಿಸಲು ಪ್ರತಿಯೊಬ್ಬರೂ ನಿಲ್ಲಬೇಕಿದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಕಾರ್ಮಿಕರ ಮುಖಂಡರಾದ ಚಂದ್ರಶೇಖರ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಸರೋಜಾವರು ವಹಿಸಿದ್ದರು. ನಿರೂಪಣೆಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶೀಲಾವತಿಯವರು ಮಾಡಿದರು, ಸುಮನಾ ನಾಡಾವರು ವಂದಿಸಿದರು ಸುಶೀಲಾ ಉಪ್ಪುಂದ ಸ್ವಾಗತಿಸಿದರು. ಜಿಲ್ಲೆಯ ವಿವಿಧ ವಲಯಗಳಿಂದ ಮಹಿಳಾ ಪ್ರತಿನಿಧಿಗಳು ಭಾಗವಹಿಸಿ ಜಿಲ್ಲೆಯ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ಸೌಜನ್ಯ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಇದೇ ಸಂದರ್ಭದಲ್ಲಿ 23 ಸದಸ್ಯರ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಸರೋಜಾವರು ಕಾರ್ಯದರ್ಶಿಯಾಗಿ ಶೀಲಾವತಿಯವರು, ಖಜಾಂಚಿಯಾಗಿ ಲಲಿತಾವರು ಆಯ್ಕೆಯಾಗಿರುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...