ಜನಿವಾರ ವಿವಾದ ವಿದ್ಯಾರ್ಥಿಗೆ 2.06 ಲಕ್ಷ ರ್‍ಯಾಂಕ್: ನೆಟ್ಟಿಗರಿಂದ ಅಪಹಾಸ್ಯ

Date:

ಉನ್ನತ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವೇಳೆ ಜನಿವಾರ ಧರಿಸಿ ಹಾಜರಾಗುವ ವಿಚಾರವಾಗಿ ವಿವಾದ ಸೃಷ್ಟಿಸಿದ್ದ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಟ್ರೋಲ್‌ಗೆ ಕುಲಕರ್ಣಿ ಪಡೆದಿರುವ ರ್‍ಯಾಂಕ್ ಕಾರಣವಾಗಿದೆ.

ಶನಿವಾರ ಸಿಇಟಿ ಫಲಿತಾಂಶ ಪ್ರಕಟವಾಗಿದ್ದು, ಬೀದರ್‌ನ ಸುಚಿವ್ರತ ಕುಲಕರ್ಣಿ ಅವರು 2.06 ಲಕ್ಷದ ರ್‍ಯಾಂಕ್ ಪಡೆದಿದ್ದಾರೆ. ಹೀಗಾಗಿ, ಲಕ್ಷಗಳಷ್ಟು ಹಿಂದಿನ ರ್‍ಯಾಂಕ್ ಗಳಿಸುವ ಬಗ್ಗೆ ತಿಳಿದೇ, ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಜನಿವಾರ ವಿವಾದ ಸೃಷ್ಟಿಸಿರಬೇಕೆಂದು ನೆಟ್ಟಿಗರು ಅಪಹಾಸ್ಯ ಮಾಡಿದ್ದಾರೆ.

ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 56% ಅಂಕ ಗಳಿಸಿದ್ದರು. ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಣಿತ, ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಷಯಗಳಲ್ಲಿ ಗಳಿಸಿದ್ದ ಅಂಕಗಳು ಮತ್ತು ಸಿಇಟಿಯಲ್ಲಿ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಷಯಗಳಲ್ಲಿ ಪಡೆದಿರುವ ಅಂಕಗಳನ್ನು ಒಟ್ಟುಗೂಡಿಸಿ ಅವರಿಗೆ 2,00,006ನೇ ರ್‍ಯಾಂಕ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ನಲ್ಲಿ ಸಿಇಟಿ ಬರೆಯಲು ಸುಚಿವ್ರತ ಕುಲಕರ್ಣಿ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾಗ, ಆತನಿಗೆ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಪರೀಕ್ಷಾ ಸಿಬ್ಬಂದಿ ಸೂಚಿಸಿದ್ದರು. ಆದರೆ, ಜನಿವಾರ ತೆಗೆಯಲು ಕುಲಕರ್ಣಿ ನಿರಾಕರಿಸಿದ್ದರು. ಅದಕ್ಕೂ ಮುನ್ನವೇ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಕುಲಕರ್ಣಿಗೆ ವಿವಾದದಿಂದಾಗಿ ಮತ್ತೊಂದು ವಿಷಯದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ.

ಪರೀಕ್ಷಾ ಕೇಂದ್ರದಲ್ಲಾದ ಗೊಂದಲದಿಂದ ಪರೀಕ್ಷೆ ಬರೆಯಲಾಗದ ಕುಲಕರ್ಣಿ ಮತ್ತು ಅವರ ತಾಯಿಯೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮಾತನಾಡಿದ್ದರು. ಅವರ ಮುಂದೆ ಎರಡು ಆಯ್ಕೆ ಇಟ್ಟಿದ್ದರು. 1) ಪರೀಕ್ಷೆ ಬರೆಯುವುದು. 2) ಸರಾಸರಿ ಅಂಕದ ಆಧಾರದ ಮೇಲೆ ರ್‍ಯಾಂಕ್ ನೀಡುವುದು. ವಿದ್ಯಾರ್ಥಿ ಕುಲಕರ್ಣಿ 2ನೇ ಆಯ್ಕೆಯನ್ನು ಆಯ್ಕೆ ಮಾಡಿಕೊಂಡಿದ್ದರು ಎಂದು ಸಚಿವ ಸುಧಾಕರ್ ಅವರೇ ಮಾಹಿತಿ ನೀಡಿದ್ದರು.

ವಿದ್ಯಾರ್ಥಿಯ ಆಯ್ಕೆಯಂತೆ ಪಿಯುಸಿ ಮತ್ತು ಸಿಇಟಿ ಅಂಕಗಳನ್ನು ಪರಿಗಣಿಸಿ, ಸರಾಸರಿ ಅಂಕದೊಂದಿಗೆ 2,00,006ನೇ ರ್‍ಯಾಂಕ್ ನೀಡಲಾಗಿದೆ.

ಈ ಲೇಖನ ಓದಿದ್ದೀರಾ?: ಹಾರೋಹಳ್ಳಿ | ಬನವಾಸಿಯಲ್ಲಿ ಅಸ್ಪೃಶ್ಯತೆ ಆಚರಣೆ: ರಾಜಿ, ಮಾತುಕತೆ ನೆಪದಲ್ಲಿ ಆರೋಪಿಗಳ ರಕ್ಷಣೆ

ಆತನ ಫಲಿತಾಂಶ ಬಂದ ಬೆನ್ನಲ್ಲೇ, ಆತನನ್ನು ನೆಟ್ಟಿಗರು ಅಪಹಾಸ್ಯ ಮಾಡುತ್ತಿದ್ದಾರೆ. “ಮುಂದಿನ ಸಾರಿ ಎಲ್ಲರೂ ಏನಾದ್ರು ನೆಪ ಇಟ್ಕೊಂಡು ಪರೀಕ್ಷೆಗೆ ಗೈರಾಗೋದು ಒಳ್ಳೇದು. ರ್‍ಯಾಂಕ್ ಬರುತ್ತೇವೆ. ಪುಕ್ಸಟ್ಟೆ ಮೀಸಲಾತಿ ನೋಡಿ ಇದು” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ.

“ಕುಣಿಯೋಕೆ ಬರದವರು ನೆಲ ಡೊಂಕು ಎಂದರಂತೆ, ಜನಿವಾರ ಹೆಚ್ಚು ದಿನ ಬಾಳಿಕೆ ಬರೊಲ್ಲ. ಸುಳ್ಳು ಯಾವತ್ತೂ ಸತ್ಯವಾಗಲ್ಲ” ಎಂಬಿತ್ಯಾದಿಯಾಗಿ ನೆಟ್ಟಿಗರು ಅಪಹಾಸ್ಯ ಮಾಡಿದ್ದಾರೆ.

ಆದಾಗ್ಯೂ, “ರ್‍ಯಾಂಕ್‌ಗೂ ಜನಿವಾರಕ್ಕೂ ಏನೂ ಸಂಬಂಧ. ಇಂತಹ ವಿಚಾರಗಳನ್ನು ಮುನ್ನೆಲೆ ತಂದು ವಿದ್ಯಾರ್ಥಿಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಬೇಡಿ” ಎಂದು ಕೆಲವರು ಕಿವಿ ಮಾತು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...