ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ ಭ್ರಷ್ಟಾಚಾರ ನಡೆಸಿರುವುದರ ಬಗ್ಗೆ ಆರೋಪಿಸಿ ದೂರು ನೀಡಿದೆ.

ಜಿಲ್ಲಾಧಿಕಾರಿಯವರು ಇದುವರೆಗೆ ಯಾವುದೇ ಕ್ರಮಕೈಗೊಳ್ಳದೆ ರಾಜಕೀಯ ಬಲದಿಂದ ಹಗರಣ ಮುಚ್ಚಾಕಲು ಯತ್ನ ನಡೆಸುತ್ತಿದ್ದು, ಸಂಬಂಧಪಟ್ಟ ದೂರನ್ನು ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ನೇರವಾಗಿ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಜಾರಕಿಹೊಳಿ ಬ್ರಿಗೇಡ್ ಅಧ್ಯಕ್ಷ ಗೋವಿಂದನಾಯಕ ಮಾಹಿತಿ ನೀಡಿರುತ್ತಾರೆ.

ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಮೊಟ್ಟೆ, ಮತ್ತಿತರ ಆಹಾರ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ಒದಗಿಸಿ ಭ್ರಷ್ಟಾಚಾರ ನಡೆಸಿದ್ದು, ಹಾಲು ಪೌಡರ್, ಪುಷ್ಠಿ ಪೌಷ್ಠಿಕ ಆಹಾರ ಕೆ.ಜಿ ಗೆ ₹120 ರೂಪಾಯಿಯಂತೆ ಮಾರಿಕೊಳ್ಳುತ್ತಿದ್ದಾರೆ, ಭಾಗ್ಯಲಕ್ಷ್ಮೀ ಬಾಂಡ್ ಪಡೆಯಲು ಲಂಚ ನೀಡಬೇಕು, ವಿಮೆ ಮಾಡಿಸುವ ನೆಪದಲ್ಲಿ ಲಂಚ, ಇದಕ್ಕೆಲ್ಲಾ ಸಾಕ್ಷಿ ಇದ್ದು ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐ ಕ್ರಮ‌ಕೈಗೊಳ್ಳುತಿಲ್ಲ. ಭ್ರಷ್ಟಚಾರದ ಬಗ್ಗೆ ದಾಖಲೆಗಳನ್ನು ನೀಡಿದ್ದರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭ್ರಷ್ಟಾಚಾರ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದಕ್ಕೆ ಸಿಡಿಪಿಒರವರು ಅಂಗನವಾಡಿ‌ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಗುರುಮಲ್ಲಮ್ಮ ಎಂಬುವವರಿಂದ ಸುಳ್ಳು ಆರೋಪ ಹೊರಿಸಿ, ನಮ್ಮಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಮ್ಮ ಬಳಿ ಭ್ರಷ್ಟಾಚಾರ ಕುರಿತಾದ ದಾಖಲೆಗಳಿವೆ, ಆಡಿಯೋ ರೆಕಾರ್ಡ್ ಇದೆ, ದಾಖಲೆ ಸಮೇತವೇ ದೂರು ನೀಡಿರುವುದಾಗಿ ವಿವರಣೆ ನೀಡಿದರು.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ದಿಲೀಪ್ ಹಂಗಳ ಮಾತನಾಡಿ, ತಾಲ್ಲೂಕಿನಲ್ಲಿ‌ ಲಂಚ ತಾಂಡವಾಡುತ್ತಿದ್ದು ಕಂದಾಯ ಇಲಾಖೆಯಲ್ಲಿ‌ ಖಾತೆ ಬದಲಾವಣೆಗೆ ವಿಎ ಮಾಡುವುದಾದರೆ ₹30 ಸಾವಿರ, ಕಂದಾಯ ನಿರೀಕ್ಷಕರ ಬಳಿ ಹೋದರೆ ಒಂದು ಲಕ್ಷ ಲಂಚ, ಅಂಗನವಾಡಿಯಲ್ಲಿ ಎರಡು‌ ಮಕ್ಕಳಿದ್ದರೆ ಅಡಿಗೆ ಮಾಡದೆ ಚಾಕಲೇಟ್ ಕೊಟ್ಟು ಕಳುಹಿಸುತ್ತಾರೆ. ಅದರ ರೇಷನ್ ಹಣ ದುರುಪಯೋಗ ಮಾಡಿದ್ದಾರೆ, ಇದಕ್ಕೆ ಪೂರಕವಾದ ದಾಖಲೆ ಬಿಡುಗಡೆ ಮಾಡಿದ್ದೇವೆ ಅದರೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಭ್ರಷ್ಟರಿಗೆ ತಾಲ್ಲೂಕು ಆಡಳಿತ ಬೆಂಬಲ ನೀಡುತ್ತಿದ್ದು ಇದರ ವಿರುದ್ದ ಪ್ರತಿಭಟನೆ ಮಾಡಲಾಗುವುದು ಎಂದರು.

ವಕೀಲರಾದ ಸಿದ್ದೇಶ್ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ಜನನ ಮರಣ ಪತ್ರ ಪಡೆಯಲು ಐದು ಸಾವಿರವರೆಗೂ ಲಂಚ ಕೇಳುತ್ತಾರೆ. ತಾಲೂಕಿನ ಸಿಡಿಪಿಒ ಇಲಾಖೆ ಅಧಿಕಾರಿ ಬಾಗ್ಯಲಕ್ಷ್ಮಿ ಹಣ ಪಡೆಯಲು ಯಾವ ದಾಖಲೆ ಬೇಡ ಐದು ಸಾವಿರ ಕೊಡಿ ಸಾಕು ಎಂದು ಹೇಳುತ್ತಾರೆ ಎಂದರೆ ಆಡಳಿತ ವ್ಯವಸ್ಥೆ ಹೇಗಿದೆ, ಭ್ರಷ್ಟಚಾರ ಎಷ್ಟು ರಾಜಾರೋಷವಾಗಿ ನಡೆಯುತ್ತಿದೆ ಇಂತವರ ವಿರುದ್ದ ಸರ್ಕಾರದ ಕ್ರಮ ಯಾವಾಗ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಕೇರಳ ತನ್ನ ವೈಭವದ ದಿನಗಳಿಗೆ ಮರಳಬೇಕಾದರೆ ಯುಡಿಎಫ್ ಅಧಿಕಾರಕ್ಕೆ ಬರಬೇಕು: ಸಚಿವ ಕೃಷ್ಣಬೈರೇಗೌಡ

ಪತ್ರಿಕಾಗೋಷ್ಠಿಯಲ್ಲಿ ಶಿವಮಲ್ಲು‌ ಹೊನ್ನೇಗೌಡನಹಳ್ಳಿ, ರಮೇಶ್ ನಾಯಕ್, ವೇಣು, ಗಿರೀಶ್ , ಮಂಜುನಾಥ್, ರವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...

ಹಾವೇರಿ | ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಸಿಇಒ ರುಚಿ ಬಿಂದಲ್

"ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು...