ಉಡುಪಿ | ದಲಿತರಿಗೆ ಮೀಸಲಾಗಿದ್ದ ಗಾಂಧಿಭವನ ಹಸ್ತಾಂತರಿಸಿದರೆ ಉಗ್ರಹೋರಾಟ – ಜಯನ್ ಮಲ್ಪೆ

Date:

ದಲಿತರ ಮೀಸಲು ಹಣದಿಂದ ನಿರ್ಮಾಣಗೊಂಡಿದ್ದ ಉಡುಪಿ ನಗರ ಸಭೆಯ ವ್ಯಾಪ್ತಿಯಲ್ಲಿರುವ ಬನ್ನಂಜೆ ಗಾಂಧಿಭವನವನ್ನು ಬೇರೆಯವರಿಗೆ ಹಸ್ತಾಂತರಿಸಿದರೆ ಉಗ್ರಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಸಮಿತಿ ಸದಸ್ಯ ಜಯನ್ ಮಲ್ಪೆ ಜಿಲ್ಲಾಡಳಿತಕ್ಕೆ ಎಚ್ಚರಿಸಿದ್ದಾರೆ.

ಕಳೆದ 90 ವರ್ಷಗಳಿಂದ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯಾಗಿದ್ದ ಈ ಜಾಗದಲ್ಲಿ ಆಗಿನ ಪುರಸಭೆ ಅಧ್ಯಕ್ಷರಾಗಿದ್ದ ಡಾ.ವಿ.ಎಸ್.ಆಚಾರ್ಯ ಮತ್ತು ರೊನಾಲ್ಡ್ ಪ್ರವೀನ್ ಕುಮಾರ್‌ರವರು ದಲಿತರ ಸಭೆ-ಸಮಾರಂಭ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಮೀಸಲು ನಿಧಿಯನ್ನು ಬಳಸಿಕೊಂಡು 1985ರಲ್ಲಿ ಗಾಂಧಿಭವನವನ್ನು ನಿರ್ಮಿಸಲಾಗಿತ್ತು.

ಈ ಗಾಂಧಿಭವನದಲ್ಲಿ ದಲಿತ ಸಂಘರ್ಷ ಸಮಿತಿ ಕಳೆದ ಸುಮಾರು 40 ವರ್ಷಗಳಿಂದ ದಲಿತರ ಕುಂದುಕೊರತೆ ಸಭೆ ನಡೆಸಿಕೊಂಡು ಬರುತ್ತಿತ್ತು. ಜೊತೆಗೆ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಹಾಗೂ ಉಡುಪಿ ತಾಲೂಕಿನ ದಲಿತರ ಸಾಂಸ್ಕೃತಿಕ, ತರಬೇತಿ, ಮದುವೆ ಸಭೆ ಸಮಾರಂಭ ನಡೆಸಿಕೊಂಡು ಬರಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004620604

ಈ ಗಾಂಧಿಭವನದ ಕಟ್ಟಡ ಕ್ರಮೇಣ ಸರಿಯಾದ ನಿರ್ವಾಹಣೆಗೆ ಉಡುಪಿ ನಗರಸಭೆ ಹಣನೀಡದೆ ಇರುವುದರಿಂದ ಕಟ್ಟಡ ಶೀತಲೀಕರಣಗೊಂಡು ಸರಿಯಾದ ನಿರ್ವಾಹಣೆ ಇಲ್ಲದೆ ಪಾಲುಬಿದ್ದಿತ್ತು.

ಇದೀಗ ದಲಿತರ ಮೀಸಲು ಹಣದಿಂದ ನಿರ್ಮಿಸಿರುವ ಮತ್ತು ಹಲವು ದಶಕಗಳಿಂದ ದಲಿತರಿಗಾಗಿ ಮೀಸಲಾಗಿರಿಸಿದ್ದ ಈ ಗಾಂಧಿಭವನವನ್ನು ಜಿಲ್ಲಾಧಿಕಾರಿ ಉಡುಪಿಯ ಸಂಜೀವನಿ ಜೀವನೋಪಾಯ ಪ್ರಚಾರ ಮತ್ತು ಮಾರ್ಕೆಟಿಂಗ್ ಸೊಸೈಟಿ, ಮಹಿಳಾ ಸ್ವಸಹಾಯ ಸಂಘಕ್ಕೆ ಹಾಗೂ ಹಿರಿಯ ನಾಗರಿಕ ಸಮಾಲೋಚನೆ ಘಟಕಕ್ಕೆ ಹಸ್ತಾಂತರಿಸಿರುವುದು ಜಿಲ್ಲೆಯ ದಲಿತ ಸಮುದಾಯಕ್ಕೆ ಮಾಡಿದ ಮಹಾದ್ರೋಹ ಎಂದಿರುವ ಜಯನ್ ಮಲ್ಪೆ ತಕ್ಷಣ ಈ ಆದೇಶವನ್ನು ಹಿಂದಕ್ಕೆ ಪಡೆಯದಿದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ದಲಿತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಾಹಿಸಬೇಕಾದ ಜಿಲ್ಲಾಧಿಕಾರಿ ಕಳೆದ 90 ವರ್ಷಗಳಿಂದ ದಲಿತರ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಿದ್ದ ಈ ಗಾಂಧಿಭವನವನ್ನು ಅನ್ಯರಿಗೆ ಹಸ್ತಾಂತರಿಸುವ ಮುನ್ನ ಸೌಜನ್ಯಕ್ಕೂ ದಲಿತರನ್ನು ವಿಶ್ವಾಸಕ್ಕೆ ಪಡೆಯದೆ ಏಕಾಎಕಿ ಗಾಂಧಿಭವನವನ್ನು ಹಸ್ತಾಂತರಿಸುವ ನಿರ್ಧಾರ ತೆಗೆದುಕೊಂಡು ಆದೇಶಿಸಿರುವುದು ದಲಿತ ಸಮಾಜಕ್ಕೆ ಮಾಡಿರುವ ಅನ್ಯಾಯ ಎಂದು ಜಯನ್ ಮಲ್ಪೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...