ಉಡುಪಿ | 330 ಕೋಟಿ ದೇವತೆಗಳಿಂದ ದಲಿತರಿಗೆ ನ್ಯಾಯಸಿಕ್ಕಿಲ್ಲ : ಜಯನ್ ಮಲ್ಪೆ

Date:

ಶಂಕರಾಚಾರ್ಯರಿಂದ, ಮದ್ವಚಾರ್ಯರಿಂದ, ರಾಮನುಚಾರ್ಯರು ಸೃಷ್ಟಿಸಿದ 330 ಕೋಟಿ ದೇವರುಗಳಿಂದ ದಲಿತರಿಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಬದಲಾಗಿ ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನ್ಯಾಯಸಿಕ್ಕಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಅವರು ಶನಿವಾರ ಮಲ್ಪೆಯಲ್ಲಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ ಅಂಬೇಡ್ಕರ್‌ರವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಕ್ಯಾಂಡಲ್ ಮೆರವಣಿಗೆಯ ಸಮಾರೋಪದಲ್ಲಿ ಮಾತನಾಡುತ್ತಾ, ದಲಿತರ ದೌರ್ಬಲ್ಯ ಅಸಹಾಯಕತೆ ಬಡತನ ಹಸಿವು ನಮ್ಮ ಹಣೆಬರಹ ಪಾಪವಲ್ಲ.ನಿಜವಾದ ಪಾಪವೆಂದರೆ ಶಿಕ್ಷಣ ಪಡೆದರೂ ದಲಿತರು ಘರ್ಜಿಸದೆ ಇರುವುದು. ಅಂಬೇಡ್ಕರ್ ನಿಮ್ಮಂತೆಯೇ ವಿದ್ಯಾಭ್ಯಾಸ ತೊರೆದು ದೇವರನ್ನು ಪೂಜಿಸಲು ಆರಂಭಿಸಿದಿದ್ದರೆ ಇಂದು ದಲಿತರು ದೇವಸ್ಥಾನದ ಹೊರಗೆ ಭಿಕ್ಷೆಯನ್ನು ಬೇಡಿಕೊಂಡಿರಬೇಕಾಗಿತ್ತು ಎಂದರು.

1008544784

ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದ ಅಸಮಾನತೆ ಹೆಚ್ಚಾಗಿದ್ದು, ಶಿಕ್ಷಣವನ್ನು ಇಂದು ವ್ಯಾಪಾರಿಕಾರೀಕರಣ ಮಾಡಲಾಗುತ್ತಿದೆ. ಜೊತೆಗೆ ಶಿಕ್ಷಣದ ಹಕ್ಕನ್ನು ಕಸಿದುಕೊಂಡು ಸರಕಾರಿ ಶಾಲೆಯನ್ನು ಮುಚ್ಚುವ ಹಂತಕ್ಕೆ ಬಂದಿದ್ದಾರೆ, ಅಂಬೇಡ್ಕರ್‌ರವರ ಚಿಂತನೆಯನ್ನು ಮೈಗೂಡಿಸಿ ಹೋರಾಡದಿದ್ದರೆ ದಲಿತರು,ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಲಾರರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಹಕ್ಕುಗಳ ಹೋರಾಟ ಸಮಿತಿಯ ಉಡುಪಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರ ದಲಿತರಿಗೆ ಮೀಸಲಾತಿಯಲ್ಲಿ ಅನ್ಯಾಯಮಾಡುತ್ತಿದೆ. ದಲಿತ ಚಳುವಳಿ ಖಾಸಾಗಿ ಕ್ಷೇತ್ರದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ರಮೇಶ್ ಕಾಂಚನ್, ಮಹಾಬಲ ಕುಂದರ್, ಸತೀಶ್ ನಾಯ್ಕ, ರಮೇಶ್ ತಿಂಗಳಾಯ, ವೆಂಕಟೇಶ್ ಕುಲಾಲ್, ಮಂಜುನಾಥ, ಶರತ್ ಶೆಟ್ಟಿ, ಮೀನಾಕ್ಷಿ ಮಾಧವ, ಉಷಾ, ಸತೀಶ್ ಮಂಚಿ, ಮಾಧವ ಬನ್ನಂಜೆ , ಸತೀಶ್ ಕೊಡವೂರು, ಸುಧಾರ್ಶನ್ ಪಡುಕರೆ,ಯಾದವ ಅಮೀನ್ ಕೊಳ,ಹರೀಶ್ ಸಲ್ಯಾನ್, ಸಂತೋಷ್ ಕಪ್ಪೆಟ್ಟು, ರವಿರಾಜ್ ಲಕ್ಮೀನಗರ, ದಯಾಕರ ಮಲ್ಪೆ, ಸಾಧು ಚಿಟ್ಪಾಡಿ, ಕೃಷ್ಣಶ್ರೀಯಾನ್, ಸುಮಿತ್ ನೆರ್ಗಿ, ಗುಣವಂತ ತೋಟ್ಟಂ, ಭಗವಾನ್, ವಿನಯ ಬಲರಾಮನಗರ, ಸತೀಸ್ ಕಪ್ಪೆಟ್ಟು, ದೀಪಕ್, ಸಂದ್ಯಾಕೃಷ್ಣ, ಪೂರ್ಣಿಮ ಸಂದ್ಯಾತಿಲಕ್, ಪ್ರಮೀಳ, ಶಶಿಕಲಾ ತೊಟ್ಟಂ, ವಿನಯ ಕೊಡಂಕೂರು, ವಿನೋದ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...