ಉಡುಪಿ | ಒಳಮೀಸಲಾತಿ ವರದಿ ಅವೈಜ್ಞಾನಿಕ – ಜಯನ್ ಮಲ್ಪೆ

Date:

ನ್ಯಾಯಮೂರ್ತಿ ನಾಗಮೋಹನ್ ಆಯೋಗವು ನೀಡಿರುವ ರಾಜ್ಯದ ದಲಿತರ ಜನಸಂಖ್ಯೆಯ ಜೊತೆಗೆ ಶೈಕ್ಷಣಿಕ, ಔದ್ಯೋಗಿಕ ಮತ್ತು ಸಾಮಾಜಿಕ ಹಿಂದುಳಿದಿರುವ ಸಮೀಕ್ಷ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು ತಕ್ಷಣಕ್ಕೆ ಅಂಗೀಕರಿಸಬಾರದೆಂದು ಸರಕಾರಕ್ಕೆ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಒತ್ತಾಯಿಸಿದ್ದಾರೆ.

ಪರಿಶಿಷ್ಟಜಾತಿಯ 101 ಉಪಜಾತಿಗಳನ್ನು ಮೀಸಲಾತಿಯಲ್ಲಿ ಎ,ಬಿ,ಸಿ,ಡಿ.ಇ.ಗುಂಪುಗಳನ್ನಾಗಿ ವರ್ಗೀಕರಿಸಿರುವ ಆಯೋಗವು ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟಿ ಮೀಸಲಾತಿಯನ್ನೇ ನಿರ್ನಾಮ ಮಾಡಲು ಹೊರಟಿದಂತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರಪತಿಯಿಂದ ಅಗೀಕೃತಗೊಂಡ ಆದಿ ದ್ರಾವಿಡ, ಆದಿ ಆಂದ್ರ. ಆದಿ ಕರ್ನಾಟಕವನ್ನು ಉಪಜಾತಿಗಳಲ್ಲ ಅದು ಒಂದು ಗುಂಪು ಎನ್ನುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾಗಮೋಹನ್ ಆಯೋಗವು ಸಮೀಕ್ಷೆಯ ಪ್ರಾರಂಭದಲ್ಲಿ ತಿಳಿಸಿಲ್ಲ. ಹಲವು ದಶಕಗಳಿಂದ ಕರಾವಳಿಯ ದಲಿತರು ಜಾತಿಪ್ರಮಾಣ ಪತ್ರ ಪಡೆಯುವಾಗ ಪರಿಶಿಷ್ಟಜಾತಿ ಮತ್ತು ಉಪಜಾತಿಯಲ್ಲಿ ಆದಿದ್ರಾವಿಡ ಎಂದು ನಮೂದಿಸಿದ್ದರು. ಈಗ ವಗೀಕರಣಮಾಡುವಾಗ ಪ್ರವರ್ಗ ಇ ಯಲ್ಲಿ ಸೇರಿಸಿ ಅನ್ಯಾಯವಾಡಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆದ ದಲಿತರ ಈ ಒಳಮೀಸಲಾತಿ ಸಮೀಕ್ಷೆ ರಾಜಕಾರಣಿಗಳ, ಅಧಿಕಾರಿಗಳ ಸ್ವಾರ್ಥಕ್ಕೆ ಅಮಾಯಕ ದಲಿತರು ಎಡಗೈ ಬಲಗೈ ಎಂದು ಕದನ ಕಲಹಕ್ಕೆ ಇಳಿಯುವಂತೆ ಮಾಡಿದೆ ಎಂದಿದ್ದಾರೆ. ಪರಿಶಿಷ್ಠ ಜಾತಿಯ 101ಮೂಲ ಜಾತಿಗಳಲ್ಲಿ ಪ್ರವರ್ಗ ಎ.ಯಲ್ಲಿ

59ಉಪಜಾತಿಗಳನ್ನು ಸೇರಿಸಿ ಒಟ್ಟು ಜನಸಂಖ್ಯೆ 522099ಕ್ಕೆ 4.97ಶೇಕಡ, ಪ್ರವರ್ಗ ಬಿ,ಯಲ್ಲಿ 18ಉಪಜಾತಿಗಳನ್ನು ಸೇರಿಸಿ ಒಟ್ಟು ಜನಸಂಖ್ಯೆ 36,69,246 ಇವರಿಗೆ ಶೇ.34.91ನೀಡಿದರೆ, ಪ್ರವರ್ಗ ಸಿ,ಯಲ್ಲಿ 17ಉಪಜಾತಿಗಳನ್ನು ಸೇರಿಸಿ ಒಟ್ಟು ಜನಸಂಖ್ಯೆ 30,08,633ಕ್ಕೆ ಶೇ.28.63% ನೀಡಿದ್ದಾರೆ. ಪ್ರವರ್ಗ ಡಿ.ಯವರಲ್ಲಿ 4ಉಪಜಾತಿಯ ಒಟ್ಟು ಜನಸಂಖ್ಯೆ 28,34,939ಇದ್ದವರಿಗೆ ಶೇಕಡ 26.97% ಹಾಗೂ ಪ್ರವರ್ಗ ಇ.ಯಲ್ಲಿ 3ಉಪಜಾತಿಯನ್ನು ಸೇರಿಸಿ ಒಟ್ಟು ಜನಸಂಕ್ಕೆ 4,74,954ಇದ್ದವರಿಗೆ ಶೇ. 4.52% ನೀಡಿ ಆಯೋಗವು ವರದಿ ನೀಡಿರುವುದು ಸಮಾಜಿಕ ಅಸಮಾನತೆಗೆ ದಾರಿಮಾಡಿದೆ ಎಂದಿದ್ದಾರೆ. ಎಷ್ಟೆಲ್ಲ ಜನರ ಬೆವರು ನೆತ್ತರಿನ ಹೋರಾಟದೊಂದಿಗೆ, ಕನಸುಗಳೊಂದಿಗೆ ಕಟ್ಟಿದ ದಲಿತ ಶಕ್ತಿಯ ಮರ ಫಲ ಕೊಡುವ ಹೊತ್ತಿನಲ್ಲಿ ಮರ ಬೆಳೆಸಿದ ಸೋದರರೇ ಪಾಲು ಬೇಡಿ ಟೊಂಗೆಗಳಿಗೆ ಕೊಡಲಿ ಹಚ್ಚಿದರೆ ಹೇಗೆಂಬುದನ್ನು ಅರಿವು ಮೂಡಿಸಬೇಕಶಾದ ಸರಕಾರವೇ ದಲಿತರನ್ನು ಒಳಮೀಸಲಾತಿಯಲ್ಲಿ ಒಡೆಯುತ್ತಿರುವುದು ನೋವಿನ ಸಂಗತಿ ಎಂದು ಜಯನ್ ಮಲ್ಪೆ ಸರಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿರುವುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...