ರಾಜ್ಯದ ಖಾಸಗಿ ಶಾಲೆ-ಕಾಲೇಜುಗಳ ದಂಧೆ ಕಡಿವಾಣಕ್ಕೆ ಆಗ್ರಹ

Date:

ರಾಜ್ಯಾದ್ಯಂತ ಬಹುತೇಕ ಖಾಸಗಿ ಶಾಲಾ-ಕಾಲೇಜುಗಳಲ್ಲಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

“ಶಾಲಾ- ಕಾಲೇಜುಗಳಲ್ಲಿ ನೋಟ್‌ಬುಕ್, ಪೆನ್, ಪೆನ್ಸಿಲ್ ಸೇರಿದಂತೆ ಇತರೆ ಲೇಖನಿ ಸಾಮಗ್ರಿ ಹಾಗೂ ಶಾಲಾ ಸಮವಸ್ತ್ರ ಶೂಗಳನ್ನು ತಮ್ಮ ಶಾಲೆಯಲ್ಲಿಯೇ ಮಾರಾಟ ಮಾಡುತ್ತಿದ್ದಾರೆ. ಈ ನಡೆ ನಿಯಮ ಬಾಹಿರವಾಗಿದ್ದರೂ ಇತ್ತೀಚಿನ ವರ್ಷಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಖಾಸಗಿ ಶಾಲೆ ದಂಧೆ ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳೂ ಅಗತ್ಯ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

“ಖಾಸಗಿ ಶಾಲೆಗಳು ವ್ಯಾಪಾರಸ್ಥರೊಂದಿಗೆ ಒಪ್ಪಂದ ಮಾಡಿಕೊಂಡು, ಪೋಷಕರಿಗೆ ಒತ್ತಡ ಹೇರಿ ಪ್ರವೇಶಾತಿ ಸಂದರ್ಭದಲ್ಲೇ ಲೇಖನಿ ಸಾಮಗ್ರಿ ಒದಗಿಸುವುದನ್ನು ರೂಢಿಸಿಕೊಂಡಿವೆ. ನೋಟ್ ಪುಸ್ತಕ, ಬೈಂಡ್ ಕಾಗದ, ಬಣ್ಣದ ಪೆನ್ಸಿಲ್, ನಕ್ಷೆ ಮೊದಲಾದವುಗಳನ್ನು ನೀಡುತ್ತಾರೆ. ಹಣ ಪಾವತಿಸಿ ಶಾಲೆಯಲ್ಲೇ ಅವುಗಳನ್ನು ಖರೀದಿಸುವಂತೆ ಪೋಷಕರ ಮೇಲೆ ಒತ್ತಡ ಹೇರಲಾಗುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಕೆಆರ್ ಆಸ್ಪತ್ರೆ ವಿರುದ್ಧ ಸುಮೊಟೊ ಪ್ರಕರಣ

ಮಾರುಕಟ್ಟೆಗಿಂತ ಹೆಚ್ಚಿನ ದರಗಳಲ್ಲಿ ಇವುಗಳನ್ನು ಮಾರಾಟ ಮಾಡಲಾಗುತ್ತಿದ್ದು, ಬಡ ಪೋಷಕರ ಜೇಬಿಗೆ ಹೊರೆಯಾಗಿದೆ. ಆದ್ದರಿಂದ ಖಾಸಗಿ ಶಾಲಾ ಕಾಲೇಜುಗಳಲ್ಲಿ ನಡೆಯುವ ಈ ಅಕ್ರಮ ದಂಧೆಯನ್ನು ಕೂಡಲೇ ನಿಲ್ಲಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಸ್ವೀಕರಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಬೀವುಲ್ಲಾ, ಮುತ್ತೂಭಾಯಿ, ಉಸ್ಮಾನ್ ಗನ್ನಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...