ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ಮಾಡಲ್ಲ: ಕೊತ್ತೂರು ಮಂಜುನಾಥ್

Date:

ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.

ಕೋಲಾರ ತಾಲೂಕಿನ ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳು ಅಧಿಕಾರ ನಡೆಸಿದ್ದಾರೆ ಅವರನ್ನು ಪ್ರಶ್ನೆ ಮಾಡಿ ಕೇಳಿ ನಿಮ್ಮ ಕೊಡುಗೆ ಏನು ಅಂತ ಅದೇ ರೀತಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಕೊಟ್ಟಂತ ಕೊಡುಗೆಗಳನ್ನು ಜನಕ್ಕೆ ಮತ್ತು ವಿರೋಧ ಪಕ್ಷಗಳಿಗೆ ಹೇಳಬೇಕು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ನೆಮ್ಮದಿ ಮತ್ತು ಅಭಿವೃದ್ಧಿ ಅದಕ್ಕಾಗಿ ಕಾಂಗ್ರೆಸ್ ಬೆಂಬಲಿಸುವಂತೆ” ಮನವಿ ಮಾಡಿದರು.

“ರಾಜ್ಯದಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಮಧ್ಯವರ್ತಿಗಳು ಇಲ್ಲದೇ ನೇರವಾಗಿ ಪಲಾನುಭವಿಗಳಿಗೆ ಸೌಲಭ್ಯ ಒದಗಿಸುತ್ತಿವೆ. ಕಷ್ಟಕ್ಕೆ ಆಗಿರುವವರನ್ನು ನೆನಪಿಸಿಕೊಳ್ಳಬೇಕು.
ಕಾಂಗ್ರೆಸ್ ಸರ್ಕಾರದಿಂದ ಪ್ರತಿ ಹಳ್ಳಿಯಲ್ಲಿ ಯಾವುದೇ ಜಾತಿ ಧರ್ಮವಿಲ್ಲದೇ ಸೌಲಭ್ಯಗಳನ್ನು ಒದಗಿಸುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ಹಸಿವು ಮುಕ್ತ ಕರ್ನಾಟಕ ಮುಖ್ಯ ಗುರಿಯಾಗಿದೆ. ಆ ನಿಟ್ಟಿನಲ್ಲಿ ಹತ್ತು ಕೆಜಿ ಅಕ್ಕಿ ವಿತರಣೆ ಮಾಡಿದೆ. ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಈ ಭಾಗದ ಕೈಗಾರಿಕೆಗಳು ಸೇರಿದಂತೆ ಅಭಿವೃದ್ಧಿಗೆ ಕೈ ಜೋಡಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, “ಈ ಭಾಗದಲ್ಲಿ ಕೈಗಾರಿಕೆಗಳು, ಪಟ್ಟಣ ಪಂಚಾಯತಿಯಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ಸುಮಾರು ಒಂಭತ್ತು ವರ್ಷಗಳ ನಂತರ ಚುನಾವಣೆ ನಡೆಯುತ್ತಿದೆ. ವಾರ್ಡ್‌ಗಳಲ್ಲಿಯೇ ಜನಾಭಿಪ್ರಾಯ ಮತ್ತು ಒಲವು ಸಂಗ್ರಹ ನಡೆದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಈ ಭಾಗದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ ಅಭಿವೃದ್ಧಿ ಮಾಡಲು ಸಹ ಸಹಕಾರಿಯಾಗುತ್ತದೆ” ಎಂದರು.

“ವೇಮಗಲ್ ಹೋಬಳಿ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರವಾಗಿ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಕಾಂಗ್ರೆಸ್ ಬೆಂಬಲಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರ ಯಾವುದು ಇದೆ ಅವರಿಗೆ ಆಶೀರ್ವಾದ ಮಾಡಿ ಗ್ಯಾರಂಟಿ ಮುಂದುವರೆಸಲು ಕಾಂಗ್ರೆಸ್ ಬೆಂಬಲಿಸಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, “ಕುರಗಲ್ ಸರ್ಕಾರಿ ಶಾಲೆ ಮುಚ್ಚಿ ಹೋಗುತ್ತಿತ್ತು, ಗ್ರಾಮದ ಕೆ.ಎಂ ಚೌಡೇಗೌಡ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿವೃದ್ಧಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಜೊತೆಗೆ ಸಮಾಜಸೇವೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದಾರೆ, ಎಸ್.ಎಂ ಕೃಷ್ಣ ಕಾಲದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಪ್ರೌಢಶಾಲೆಯನ್ನು ಗುರುತಿಸಿದ್ದರು, ನಮಗೆ ಅಧಿಕಾರ ಮುಖ್ಯ ಅಲ್ಲ, ನಿಮ್ಮ ಸೇವೆ ಮಾಡುವ ಅವಕಾಶ ಬೇಕು ತಮ್ಮ ವಾರ್ಡ್ ಗಳಲ್ಲಿ‌ ನಿಲ್ಲುವಂತಹ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಮುಖಂಡರಾದ ಉರಟ ಅಗ್ರಹಾರ ಚೌಡರೆಡ್ಡಿ, ಮೈಲಾಂಡಹಳ್ಳಿ ಮುರಳಿ, ಕೆ.ಎಂ ಚೌಡೇಗೌಡ, ರಮೇಶ್, ಕಡಗಟ್ಟೂರು ದೇವರಾಜ್, ಬೈರಂಡಹಳ್ಳಿ ನಾಗೇಶ್, ಅಫ್ಸರ್, ಪೇರ್ಜೆನಹಳ್ಳಿ ನಾಗೇಶ್, ಬೆಟ್ಟಹೊಸಪುರ ಜಗನ್, ಯಲವಾರ ರಾಜಕುಮಾರ್, ಬರ್ಕತ್ತುಲ್ಲಾಖಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...