ಜೋಯಿಡಾ | ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಡಿಸೆಂಬರ್. 6ಕ್ಕೆ ‘ಕಾರವಾರ ಚಲೋ’ ಹೋರಾಟ

Date:

ಜೋಯಿಡಾ: ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಡಿಸೆಂಬರ್. 6ರಂದು ಜಿಲ್ಲಾಮಟ್ಟದ ‘ಬೃಹತ್ ಕಾರವಾರ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅರಣ್ಯವಾಸಿಗಳು ಮನೆಗೊಬ್ಬರಂತೆ ಭಾಗವಹಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಇಂದು ಜೋಯಿಡಾ ತಾಲೂಕಿನ ಕುಣಬಿ ಭವನದಲ್ಲಿ ನಡೆದ ಅರಣ್ಯವಾಸಿಗಳ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುವ ಚಳಿಗಾಲ ಅಧಿವೇಶನವು ಅರಣ್ಯವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅತ್ಯುತ್ತಮ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಸಮಾವೇಶದ ಮಾಹಿತಿಯನ್ನು ಗ್ರಾಮ–ಗ್ರಾಮಕ್ಕೆ ತಲುಪಿಸಿ, ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಜವಾಬ್ದಾರಿ ಗ್ರೀನ್ ಕಾರ್ಡ್ ಪ್ರಮುಖರ ಮೇಲಿದೆ ಎಂದು ಸೂಚಿಸಿದರು.

ಕಾನೂನು ಜ್ಞಾನ ಮತ್ತು ಅರಿವು ಕೊರತೆಯಿಂದ ಅರಣ್ಯವಾಸಿಗಳು ಅನೇಕ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ನೀಡುವ ಉದ್ದೇಶದಿಂದ ಅರಣ್ಯವಾಸಿಗಳಲ್ಲಿ ಕಾನೂನು ತಿಳುವಳಿಕೆ, ಜಾಗೃತಿ ಮತ್ತು ಹಕ್ಕುಗಳ ಅರಿವು ಮೂಡಿಸಲು ‘ಕಾನೂನು ಜಾಗೃತ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗುತ್ತಿದೆ. ಭೂಮಿ ಹಕ್ಕಿಗಾಗಿ ಸಂಘಟಿತ ಹೋರಾಟದ ಜೊತೆಗೆ ಕಾನೂನು ಹೋರಾಟಕ್ಕೂ ವೇದಿಕೆ ಸಿದ್ಧವಿದೆ ಎಂದು ಅವರು ಹೇಳಿದರು. ಜಿಲ್ಲಾದ್ಯಂತ ಅರಣ್ಯವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಕಾನೂನು ಜಾಗೃತ ಜಾಥಾ ಆಯೋಜಿಸುವ ಮೂಲಕ ಅವರ ಹಕ್ಕುಗಳ ಪರವಾಗಿ ನಿರಂತರ ಹೋರಾಟ ನಡೆಯಲಿದೆ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

ಭೂಮಿ ಹಕ್ಕು ಅನಿವಾರ್ಯ: ಸುಭಾಷ್ ಗಾವಡ ಭೂ ರಹಿತರಾದ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾದರೆ, ಮುಂದಿನ ದಿನಗಳಲ್ಲಿ ನಿರಾಶ್ರಿತರಾಗುವ ಗಂಭೀರ ಪರಿಸ್ಥಿತಿ ಎದುರಾಗಲಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರಣ್ಯವಾಸಿಗಳಿಗೆ ಭೂಮಿ ಹಕ್ಕು ನೀಡುವ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ, ಅವರ ಪರವಾಗಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಸಂಚಾಲಕ ಹಾಗೂ ಸಾಮಾಜಿಕ ಹೋರಾಟಗಾರ ಸುಭಾಷ್ ಗಾವಡ ಒತ್ತಾಯಿಸಿದರು.

ಎಂ. ರಫೀಕ್ ಖಾನ್, ದೀಲಿಪ್ ಮಿರಾಶಿ, ಬಬಲಿ ಗಾಂವಕರ್, ರತ್ನಾಕರ್ ನಾಯ್ಕ, ಛಾಯಾ ಉಳವಿ, ಕೇಶವ ವರಕಟಕರ್, ರಮೇಶ್ ಜಿ. ಗಾವಂಟಕರ್, ರಾಮದಾಸ್ ವೇಳಿಪ್, ಅಂತೋನ್, ರಾಮದಾಸ್, ಉಳವಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...