ಅನಂತಕುಮಾರ್ ಒತ್ತಾಯಕ್ಕೆ ಬಿಜೆಪಿಗೆ ಬಂದೆ: ಬಸವರಾಜ ಬೊಮ್ಮಾಯಿ

Date:

  • ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ ಅಗತ್ಯ ಬಹಳವಿತ್ತು: ಬೊಮ್ಮಾಯಿ
  • ಕೇಂದ್ರದ ಯಾವುದೇ ವಿಚಾರ ಬಂದಾಗ ಅನಂತಕುಮಾರ್ ಮೇಲೆ ಹಾಕುತ್ತಿದ್ದೆವು.

ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅನಂತ ನಮನ 64 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಅನಂತಕುಮಾರ್ ಅವರು ಅನಂತವಾದ ಬದುಕನ್ನು ಅಲ್ಪ ಸಮಯದಲ್ಲಿ ಇದ್ದು ಯಶಸ್ಸು ಸಾಧನೆಗಳನ್ನು ಮಾಡಿ ಅತಿ ಚಿಕ್ಕ ವಯಸಿನಲ್ಲಿ ಬಿಟ್ಟು ಹೋಗಿದ್ದಾರೆ. ಅನಂತಕುಮಾರ್ ನಾನು ಕ್ಲಾಸ್ ಮೇಟ್. ನಾನು ಏನಾದರು ತಪ್ಪು ಮಾಡಿದ್ದರೆ ಅವರು ಕರೆಕ್ಷನ್ ಮಾಡುತ್ತಿದ್ದರು. ಅವರು ನಮ್ಮ ಬೆಂಚ್ ಮೆಟ್ ಆಗಿದ್ದರು” ಎಂದರು.

“ಕೃಷ್ಣಾ ನದಿ ವಿಚಾರದಲ್ಲಿ ರಾಜ್ಯಕ್ಕೆ ಒಂದು ಆತಂಕ ಎದುರಾಗಿತ್ತು. ಆಂಧ್ರ ತೆಲಂಗಾಣಕ್ಕೆ ಪ್ರತ್ಯೇಕವಾಗಿ ನೀರು ಹಂಚಿಕೆಗೆ ಮಾಡುವಂತೆ ಆಗ್ರಹಿಸಿದ್ದರು. ಆಗ ನಾನು ಅನಂತಕುಮಾರ್ ಅವರಿಗೆ ಇದರ ಬಗ್ಗೆ ಹೇಳಿದೆ. ಅವರು ತಕ್ಷಣ ಲಾ ಸೆಕ್ರೆಟರಿಗೆ ಕರೆದು ರಾಜ್ಯ ಸರ್ಕಾರದ ಪರ ಬರೆಯುವಂತೆ ಹೇಳಿದರು. ಅವರು ನಿರಾಕರಿಸಿದರು, ಆದರೆ, ಅನಂತಕುಮಾರ್ ಅವರು ಲಾ ಸೆಕ್ರೆಟರಿಯನ್ನೇ ಬದಲಾಯಿಸುವುದಾಗಿ ಹೇಳಿದರು. ಆಗ ಆತ ಸಹಿ ಮಾಡಿದ. ಇದು ಅತ್ಯಂತ ದೊಡ್ಡ ಕೆಲಸ” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿ ಪ್ರತಿಭಟನೆ | ಅಹಿತಕರ ಘಟನೆ ನಡೆದರೆ ಕಾನೂನು ಕ್ರಮ: ಸಚಿವ ಪರಮೇಶ್ವರ್‌ ಎಚ್ಚರಿಕೆ

“ಇಡೀ ರಾಜ್ಯಕ್ಕೆ ಅನಂತಕುಮಾರ್ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರು ನಾನು ಬೇರೆ ಬೇರೆ ಪಕ್ಷದಲ್ಲಿ ಇದ್ದೆವು, ನನಗೆ ಯಾವಾಗಲೂ ದೋಸ್ತ ಅಂತ ಕರೆಯುತ್ತಿದ್ದರು. ಅವರು ಬಿಜೆಪಿಗೆ ಬರುವಂತೆ ಒತ್ತಾಯ ಮಾಡಿದರು. ರಾಜನಾಥ ಸಿಂಗ್ ಅವರು ನೀವೇಕೆ ಬಿಜೆಪಿ ಬರುತ್ತಿಲ್ಲ ಎಂದರು. ನೀನು ಬಂದರೆ ನಮಗೂ ಅನುಕೂಲ ನಿನಗೂ ಗೌರವ ಸಿಗುತ್ತದೆ ಅಂತ ಅನಂತಕುಮಾರ್ ಹೇಳಿದರು. ಅನಂತಕುಮಾರ್ ಒತ್ತಾಯಕ್ಕೆ ಬಿಜೆಪಿ ಬಂದೆ. ನನ್ನನ್ನು ಗೌರವದಿಂದ ನೋಡಿಕೊಂಡರು ಎಂದು ಹಳೆಯ‌ ನೆನಪುಗಳನ್ನು ಮೆಲುಕು ಹಾಕಿದರು.

“ಅನಂತಕುಮಾರ್‌ ಅವರಲ್ಲಿ ದೂರದೃಷ್ಟಿಯುಳ್ಳ ನಾಯಕತ್ವದ ಗುಣ‌ ಇತ್ತು. ನಾವು ಕಾಲೇಜಿನಲ್ಲಿ ಕ್ಯಾಂಟೀನ್ ನಲ್ಲಿ ಟಿ ಕುಡಿಯುವಾಗ ಎಮರ್ಜೆನ್ಸಿ ವಿರುದ್ದ ಪ್ರತಿಭಟನೆ ಮಾಡೋಣ ಅಂತ ಹೇಳಿದರು. ಅವರನ್ನು ವಿದ್ಯಾರ್ಥಿ ಸಂಘಟನೆಯ ಜನರಲ್ ಸೆಕ್ರೆಟರಿ ಮಾಡಿದ್ದೆವು. ಅವರು ಪ್ರತಿಭಟನೆಯಲ್ಲಿ ಆರೆಸ್ಟ್ ಆಗಿ ನಾಲ್ಕು ತಿಂಗಳು ಜೈಲಿಗೆ ಹೋಗಿದ್ದರು. ಆದರೆ, ಸದಾ ಕಾಲ ಉತ್ಸಾಹ ಕಡಿಮೆಯಾಗಲಿಲ್ಲ” ಎಂದರು

“ಅನಂತಕುಮಾರ್ ಅವರು ಆಪದ್ಬಾಂಧವರು, ಕೇಂದ್ರದ ಯಾವುದೇ ವಿಚಾರ ಬಂದಾಗ ನಾವು ಅನಂತ ಕುಮಾರ್ ಮೇಲೆ ಹಾಕುತ್ತಿದ್ದೆವು. ಮೊನ್ನೆಯ ಕಾವೇರಿ ವಿಚಾರವಾಗಿ‌ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅವರನ್ನು ಎಲ್ಲರೂ ನೆನೆಸಿಕೊಂಡರು ಎಂದು ಹೇಳಿದರು.

ಮಾಜಿ ಸಚಿವ ಸಿ.ಟಿ.ರವಿ, ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಪಿ.ವಿ.ಕೃಷ್ಣಭಟ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...