ಕೊಡಗು | ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರಿಗಿದೆ : ಎಂ ಎ ನಿರಂಜನ್

Date:

ಕೊಡಗು ಜಿಲ್ಲೆ, ಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಕೊಡಗು ಪತ್ರಕರ್ತರ ಸಂಘ (ರಿ) ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ
ವಕೀಲರ ಸಂಘದ ಅಧ್ಯಕ್ಷ ಎಂ ಎ ನಿರಂಜನ್ ಮಾತನಾಡಿ ‘ ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರ ಹರಿತವಾದ ಲೇಖನಿಗಿದೆ. ಪತ್ರಕರ್ತರು ಸತ್ಯನಿಷ್ಠ ವರದಿಗಳನ್ನು ಪ್ರಕಟಿಸುವಾಗ ಯಾವುದೇ ಹಿಂಜರಿಕೆ ಇರಬಾರದು ‘ ಎಂದರು.

” ನ್ಯಾಯಾಂಗದ ತೀರ್ಪಿನ ಬಗ್ಗೆ ವಿಶ್ಲೇಷಣಾತ್ಮಕವಾಗಿ ಪ್ರಶ್ನಿಸುವ ಹಕ್ಕು ಪತ್ರಕರ್ತರಿಗೆ ಸದಾ ಇರುತ್ತದೆ. ಹೀಗಾಗಿ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎಂದಿಗೂ ಧಕ್ಕೆಯಾಗುವುದಿಲ್ಲ. ಹೀಗಿದ್ದರೂ, ಇಂದಿನ ದಿನಗಳಲ್ಲಿ ತನಿಖಾ ವರದಿಗಳು ಕಡಿಮೆಯಾಗುತ್ತಿರುವುದು ವಿಷಾಧನೀಯ. ಈ ನಿಟ್ಟಿನಲ್ಲಿ ಕೊಡಗಿನ ಪತ್ರಕರ್ತರು ಗಮನಹರಿಸಬೇಕು. ಇಂದು ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಪತ್ರಕರ್ತರು ಚಿಂತನಾಶೀಲ ಬರವಣಿಗೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು. ಹಿರಿಯರ ಗರಡಿಯಲ್ಲಿ ಮುನ್ನುಗ್ಗುವ ಪ್ರಯತ್ನ ಮಾಡಬೇಕು. ನಿಖರತೆ ಇದ್ದರೆ ಯಾವ ವಿಚಾರದಲ್ಲೂ ಎದರುವಂತಿಲ್ಲ. ಪತ್ರಕರ್ತರು ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ” ಎಂದು ಸಲಹೆ ನೀಡಿದರು.

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ ಆರ್ ನಾಗೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ ಕೊಡಗು ಪತ್ರಕರ್ತರ ಸಂಘ ಬಲಿಷ್ಠವಾಗಬೇಕಾದರೆ ಸಂಘದ ಸಾರಥಿ ಗಟ್ಟಿಯಾಗಿರಬೇಕು. ಅನಿಲ್ ಹೆಚ್ ಟಿ ಅವರು ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘವನ್ನು ಮುನ್ನಡೆಸಲಿದ್ದಾರೆ. ಸಂಘದಲ್ಲಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸುವುದಾಗಿ ಇದೇ ಸಂದರ್ಭ ಘೋಷಿಸಿದರು ‘.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂರ್ಗ್ ಹೋಟೇಲ್ಸ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಸಂಘದ ಸ್ಟಿಕ್ಕರ್ ಬಿಡುಗಡೆಗೊಳಿಸಿ ಮಾತನಾಡಿ, ‘ ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಕಾಳಜಿಯಿಂದ ಪತ್ರಿಕಾರಂಗ ನಡೆಯುತ್ತಿದೆ. ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರು ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗು ಪತ್ರಕರ್ತರ ಸಂಘಕ್ಕೆ ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ‘ ನೀಡಿದರು.

ಪ್ರವಾಸೋದ್ಯಮದ ಬೆಳವಣಿಗೆ ನಿಟ್ಟಿನಲ್ಲಿ ಕೊಡಗಿನ ಪತ್ರಕರ್ತರು ನಿರಂತರ ಸಹಕಾರ ನೀಡುತ್ತಾ ಬಂದಿದ್ದಾರೆ, ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೆ ನವ ರೂಪುರೇಷೆ ನೀಡುವ ನಿಟ್ಟಿನಲ್ಲಿ ಏಪ್ರಿಲ್ ಎರಡನೇ ವಾರದಲ್ಲಿ ಮಡಿಕೇರಿಯಲ್ಲಿ ಎರಡು ದಿನ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸಿದ್ದು, ರಾಜ್ಯ ಮಟ್ಟದಿಂದಲೂ ಪ್ರವಾಸೋದ್ಯಮ ಕ್ಷೇತ್ರದ ಅನೇಕ ಪ್ರಮುಖರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದರು.

ಕೊಡಗು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅನಿಲ್ ಹೆಚ್ ಟಿ ಕೊಡಗಿನ ಪತ್ರಿಕಾ ಕ್ಷೇತ್ರದ ಭೀಷ್ಮ ಶಕ್ತಿ ಪತ್ರಿಕೆಯ ಸ್ಥಾಪಕರಾದ ಬಿ ಎಸ್ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಪದಗ್ರಹಣ ಸ್ವೀಕರಿಸಿ ಮಾತನಾಡಿ ” ಸಂಘದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದೇನೆ. ಇದರಿಂದ ನನ್ನ ಹೊಣೆಗಾರಿಕೆ ಹೆಚ್ಚಾಗಿದೆ. ಸಂಘ ಕಳೆದ ಎರಡು ವರ್ಷದಲ್ಲಿ ಅತ್ಯುತ್ತಮವಾಗಿ ಬೆಳೆದುಬಂದಿದೆ. ನಿವೇಶನ ರಹಿತ ಪತ್ರಕರ್ತರಿಗೆ ನಿವೇಶನ, ಪತ್ರಕರ್ತರು ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ಗುಂಪು ಆರೋಗ್ಯ ವಿಮೆ ಸೇರಿದಂತೆ ಹಲವು ಉಪಯುಕ್ತ ಯೋಜನೆ ರೂಪಿಸಲಾಗುತ್ತದೆ. ಸಂಘದಲ್ಲಿ ನೂರಕ್ಕೂ ಅಧಿಕ ಮಂದಿ ಸದಸ್ಯರಿದ್ದು, ಪತ್ರಿಕಾ ಭವನ ಟ್ರಸ್ಟ್ ಕೂಡ ಬೆನ್ನೆಲುಬಾಗಿ ನಿಂತಿದೆ. ಎರಡು ವರ್ಷದಲ್ಲಿ ಸುಮಾರು 7 ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ಒಟ್ಟು 10 ದತ್ತಿ ಪ್ರಶಸ್ತಿ ಸ್ಥಾಪಿಸುವ ಗುರಿ ಇದೆ. ಸಂಘದಿಂದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ” ಎಂದು ತಿಳಿಸಿದರು.

ಸಂಘದ ಗೌರವ ಸಲಹೆಗಾರ ಟಿ ಪಿ ರಮೇಶ್ ಮಾತನಾಡಿ ‘ ಪತ್ರಕರ್ತರ ಸಂಘ ಸಾರ್ವಜನಿಕವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಹೊಸ ಸಂಘವನ್ನು ರಚನೆ ಮಾಡಿ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ ‘ ಎಂದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್ ಎ ಮುರುಳೀಧರ್ ಮಾತನಾಡಿ ‘ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಸಂಘ ಅಸ್ಥಿತ್ವದಲ್ಲಿದ್ದರೆ ಅದು ಕೊಡಗು ಪತ್ರಕರ್ತರ ಸಂಘ ಮಾತ್ರ. ನಾಲ್ಕು ತಾಲೂಕು ಸಮಿತಿಗಳನ್ನು ಕೂಡ ರಚನೆ ಮಾಡಿಕೊಂಡು ಕ್ರೀಯಾಶೀಲವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಸಂಘದಲ್ಲಿ ಒಗ್ಗಟ್ಟು ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು’ ಎಂದು ಹೇಳಿದರು.

ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಬಿ ಜಿ ಅನಂತಶಯನ, ಮದೆನಾಡಿನ ಸಿಂಚನಾ, ಡಾ ಮುಲ್ಲೇಂಗಡ ರೇವತಿ ಪೂವಯ್ಯ, ಜಾದುಗಾರ ವಿಕ್ರಂ ಜಾದೂಗಾರ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ ಪಿ ಕೇಶವ ಕಾಮತ್, ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ ವಿ ರವಿಕುಮಾರ್, ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...