ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

Date:

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜು.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಮೈಸೂರಿನ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಜನತೆ ಬಹಳ ನಿರೀಕ್ಷೆಯೊಂದಿಗೆ ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರು. ವಿಧಾನಸೌಧದಲ್ಲಿ ಪಕ್ಷದ ಆಡಳಿತ ಬದಲಾಗಿದೆ. ಅಧಿಕಾರ ನಡೆಸುತ್ತಿರುವವರ ಮುಖಗಳು ಬದಲಾಗಿವೆ. ಆದರೆ ಯಥಾಸ್ಥಿತಿ ಆಡಳಿತ ಮುಂದುವರೆಯುತ್ತಿದೆ” ಎಂದು ಕಿಡಿಕಾರಿದರು.

ರೈತ ಸಂಘ 1 3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸರ್ಕಾರ ಬಂದು ಒಂದು ವರ್ಷದ ಅವಧಿಯಲ್ಲೇ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿದ್ದ 187 ಕೋಟಿ ಹಣ ದುರುಪಯೋಗದ ಹಗರಣದ ಆರೋಪಕ್ಕೆ ಒಳಗಾಗಿದೆ. ಎಲ್ಲ ಸರ್ಕಾರಿ ಕಛೇರಿಗಳಲ್ಲಿ ಲಂಗು ಲಗಾಮಿಲ್ಲದೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭೂ ಮಾಫಿಯಗಳ ಅಕ್ರಮಗಳು ನಿರಂತರವಾಗಿ ಸಾಗುತ್ತಲೆ ಇವೆ. ರೈತರ ಆತ್ಮಹತ್ಯೆ ಸರಣಿ ಮುಂದುವರೆಯುತ್ತಲೆ ಇದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ರೈತಪರ ನೀತಿಗಳನ್ನು ರೂಪಿಸಲು, ರೈತರ ಆತ್ಮಹತ್ಯೆ ತಡೆಗಟ್ಟಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜುಲೈ 18ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದೆ. ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು,ಪ್ರಸನ್ನ ಏನ್ ಗೌಡ,ನೇತ್ರಾವತಿ ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು:

  1. ರೈತರು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸರ್ಕಾರ ವೆಚ್ಚವನ್ನು ಭರಿಸಬೇಕು.
  2. ಕರ ನಿರಾಕರಣೆ ಚಳುವಳಿಯಲ್ಲಿ ರೈತ ಕುಟುಂಬದವರು ಉಳಿಸಿಕೊಂಡಿರುವ ಗೃಹ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು.
  3. ಕಳೆದ ವರ್ಷ ಏಪ್ರಿಲ್ ನಿಂದ ಇದುವರೆಗೆ 1182 ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ. ಈ ಆತ್ಮಹತ್ಯೆಗಳಲ್ಲಿ ಯುವಕರು ಹೆಚ್ಚು ಒಳಗಾಗಿರುವುದು ಆತಂಕಕ್ಕೀಡು ಮಾಡಿದೆ. ಸರ್ಕಾರ ರೈತರ ಆತ್ಮಹತ್ಯೆ ತಡೆಗಟ್ಟಲು ರೈತಪರ ಕಾರ್ಯಕ್ರಮಗಳನ್ನು ರೂಪಿಸಿ, ರೈತ ಸಮುದಾಯಕ್ಕೆ ಅತ್ಮಸ್ಥೆರ್ಯ ತುಂಬಬೇಕು. ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ನಿಗಧಿ ಮಾಡಿ ಖರೀದಿಸಬೇಕು. ಹಿಂದೆಂದೂ ಕಂಡರಿಯದ ಬರಗಾಲವನ್ನು ರಾಜ್ಯ ಎದುರಿಸಿದೆ. ಇಂತಹ ಸಂದರ್ಭದಲ್ಲೂ ಬ್ಯಾಂಕುಗಳು ಸಾಲ ಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಪ್ಪಿಸಿ ರೈತರ ರಕ್ಷಣೆಗೆ ಬರಬೇಕು.
  4. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯನ್ನು ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಬೇಕು. ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆ ಕೂಡಲೇ ಹಾಕಬೇಕು.
  5. ಫಸಲು ಪಹಣಿ ದುರಸ್ಥಿ, ಪಕ್ಕಾ ಪೋಡು,ಹದ್ದುಬಸ್ತು ಶುಲ್ಕ ದುಬಾರಿಯಾಗಿದ್ದು, ಅದನ್ನು ಕೂಡಲೆ ಇಳಿಸಬೇಕು.
  6. ರೈತರಿಂದ ಖರೀದಿ ಕೇಂದ್ರದ ಮೂಲಕ ಜೋಳ, ರಾಗಿ ಇತ್ಯಾದಿ ಉತ್ಪನ್ನಗಳನ್ನು ಖರೀದಿ ಮಾಡಿದ್ದು, ಇನ್ನೂ ರೈತರಿಗೆ ಹಣ ಪಾವತಿಯಾಗಿಲ್ಲ ಕೂಡಲೇ ಈ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು.
  7. ಬರ ಪರಿಹಾರದ ಹಣ, ವಿಮಾ ಪರಿಹಾರದ ಹಣವನ್ನೂ ಸಹ ಬ್ಯಾಂಕ್‌ನವರು ಸಾಲಕ್ಕಾಗಿ ಜಮಾ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಂಕ್‌ನವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಇದನ್ನು ತಪ್ಪಿಸಬೇಕು.
  8. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ರೈತರಿಗು ಪಟ್ಟಾ ನೀಡಬೇಕು.
  9. ಕಾಡು ಪ್ರಾಣಿಗಳಿಂದ ಹಾಳಾದ ಅಸ್ತಿ, ಪ್ರಾಣ ಹಾನಿ, ನಷ್ಟವಾದ ಬೆಳೆಗಳಿಗೆ ವೈಜ್ಞಾನಿಕ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಮತ್ತು ರೈತರ ಜಮೀನಿನಲ್ಲಿ ಬೆಳೆಯುವ ಸಾಗುವನಿ ಕಡಿತ ಮತ್ತು ಸಾಗಾಣಿಕೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.
  10. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ 150 ರೂ ಪಾವತಿಸಬೇಕೆಂದು ಹಿಂದಿನ ಸರ್ಕಾರ ತೀರ್ಮಾನಿಸಿದ್ದು, ಇದಕ್ಕಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೆ ನಿವಾರಿಸಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಎಸ್ಎಪಿ ಘೋಷಿಸಬೇಕು.
  11. ಸರ್ಕಾರ ಮಾತಿನಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು.
  12. ಕಂದಾಯಬೀಳು, ಕ್ರಯದಬೀಳು ರೇಸ್ಟೋರ್ ಗೆ ಅವಕಾಶ ಕಲ್ಪಿಸಬೇಕು.
  13. ಕೆ ಆರ್ ಎಸ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಜಲಾಶಯದ ಸುತ್ತಾಮುತ್ತಾ ಗಣಿಗಾರಿಕೆ ನಿಷೇಧಿಸಿ ಅಣೆಕಟ್ಟನ್ನು ರಕ್ಷಿಸಬೇಕು.
  14. ಮುಡಾ ಹಗರಣಕ್ಕೆ ಸೂಕ್ತ ಕ್ರಮವಹಿಸಿ ತಪಿತಸ್ಥರು ಯಾರು ಭಾಗಿಯಾಗಿದ್ದರೂ ಅವರ ವಿರುದ್ಧ ನಿಷ್ಪಕ್ಷವಾಗಿ ಕ್ರಮ ಕೈಗೊಳ್ಳಬೇಕು.
  15. ಕಾವೇರಿ ಜಲಾಶಯದಲ್ಲಿ ನೀರಿನ ಶೇಖರಣೆ ಕಡಿಮೆ ಇರುವುದರಿಂದ ನೀರು ಹರಿಸಬಾರದು.
  16. ಮೈಸೂರು ತಾ ಕೋಚನಹಳ್ಳಿ ರೈತರಿಗೆ ಮೋಸ ಮಾಡಿರುವ ಭೂಮಾಫಿಯ ಕುಳಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ರೈತರಿಗೆ ನ್ಯಾಯ ದೊರಕಿಸಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...