ಮಂಡ್ಯ | ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕೆ.ಆರ್.ಪೇಟೆ ತಾಲೂಕು ರೈತರ ಸಭೆ

Date:

ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ನಿಸರ್ಗ ಪ್ರಿಯ, ರೈತ ಮುಖಂಡರ ಜೊತೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕು ಕಚೇರಿಯಲ್ಲಿ ತಾಲೂಕಿನ ರೈತರ ಸಮಸ್ಯೆಗಳು ಸೇರಿದಂತೆ ಇತರೆ ವಿಷಯಗಳ ಕುರಿತು ಸಭೆ ನಡೆಸಿದರು.

ಬೆಳೆ ಸಮೀಕ್ಷೆ, ಕಳಪೆ ಬಿತ್ತನೆ ಬೀಜ, ಕಳಪೆ ಗೊಬ್ಬರ, ಕಳಪೆ ಕೀಟನಾಶಕ ಮಾರಾಟ ಹಾಗೂ ಕೋರಮಂಡಲ್ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯಿಂದ ಆಗುತ್ತಿರುವ ಹಾನಿ ಮತ್ತು ಎಥನಾಲ್ ಘಟಕ ಪ್ರಾಜೆಕ್ಟ್ ಕುರಿತಂತೆ ತಾಲೂಕು ಆಡಳಿತ ಎಲ್ಲ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಪುಟ್ಟೇಗೌಡ ಮಾತನಾಡಿ, ತಾಲೂಕಿನಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಿದ್ದು, ರೈತರಿಗೆ ಅನ್ಯಾಯ ಆಗುತ್ತಿದೆ. ಬೆಳೆ ಸಮೀಕ್ಷೆಯಲ್ಲಿ ದಲ್ಲಾಳಿಗಳು ನೇರವಾಗಿ ಭಾಗಿಯಾಗುತ್ತಿದ್ದು ಪಾರದರ್ಶಕತೆ ಇಲ್ಲ. ರೈತರ ಉಪಸ್ಥಿತಿ ಇಲ್ಲದೆ ಜಮೀನಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಸಮೀಕ್ಷೆ ನಡೆಸಿ ಬೇಕಾಬಿಟ್ಟಿ ವರದಿಯನ್ನು ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಇಲಾಖೆ ಅಧಿಕಾರಿಗಳ ವಂಚನೆಯಿಂದ ಸಾಕಷ್ಟು ರೈತರಿಗೆ ಅನ್ಯಾಯ ಆಗಿದೆ. ಕೆಲವು ರೈತರ ಜಮೀನಿನಲ್ಲಿ ಅಡಿಕೆ, ತೆಂಗು ಇಲ್ಲದೆ ಇದ್ದರು, ಇರುವುದಾಗಿ ಅಧಿಕಾರಿಗಳು ವರದಿ ಹಾಕಿದ್ದಾರೆ. ಸಮೀಕ್ಷೆ ವರದಿ ಆಗಿರುವ ಹಳ್ಳಿಗಳಿಗೆ ಎಸಿ, ತಹಶೀಲ್ದಾರ್ ನೇತೃತ್ವದಲ್ಲಿ ತೆರಳಿ ಪರಿಶೀಲನೆ ನಡೆಸಿ ಅಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದರೆ ಸೂಕ್ತ ಕ್ರಮವಹಿಸಿ. ಇಲ್ಲವಾದಲ್ಲಿ ಆರೋಪ ಮಾಡಿದ ನಮ್ಮ ಮೇಲೆ ಕೇಸ್ ಮಾಡಿ ಎಂದು ಸವಾಲು ಹಾಕಿದರು.

ಹಿರಿಯ ಮುಖಂಡರಾದ ರಾಜೇಗೌಡ ಮಾತನಾಡಿ, ಕುರಿ ಕಾಯೋಕೆ ತೋಳ ನೇಮಿಸಿದಂತೆ ಆಗಿದೆ. ಅಧಿಕಾರಿಗಳ ವರ್ತನೆ, ಸಮಾಜದಲ್ಲಿ ಹುಟ್ಟಿ ಸಮಾಜದ ಉಪ್ಪು ತಿಂದು ಸಮಾಜಕ್ಕೆ ಏನಾದರು ಉಪಯುಕ್ತವಾಗುವಂತೆ ಕೆಲಸ ಮಾಡಬೇಕು ಅನ್ನುವವರು ಒಬ್ಬರು ಇಲ್ಲ, ಹುಟ್ಟಲು ಹಳ್ಳಿ ಹೇಳಲು ರೈತನ ಮಕ್ಕಳು ಕೆಲಸ ಮಾಡೋದು ಮಾತ್ರ ಸಿರಿವಂತರ ಪರ ರೈತರ ವಿರೋಧವಾಗಿ ಎಂದು ಕಿಡಿಕಾರಿದರು.

ರೈತರ ಸಭೆಗೆ ಹಾಜರಾಗುವಂತೆ ನೋಟಿಸ್ ಇದ್ದರೂ ರೈತರಿಗೆ ಉತ್ತರ ಕೊಡಲು ಆಗದೆ ವಿನಾಃ ಕಾರಣ ರಜೆ ಹಾಕಿ, ಬೇಡದ ಸಬೂಬು ಕೊಟ್ಟು ಬಹುತೇಕ ಅಧಿಕಾರಿಗಳು ಗೈರಾಗಿದ್ದಾರೆ. ಇದೇನಾ ರೈತ ಪರ ಕಾಳಜಿ,ಸಮಾಜದ ಮೇಲಿನ ಬದ್ಧತೆ ರೈತರ ಕಂದಾಯದ ಸಂಬಳ ಬೇಕು ರೈತನ ಕಷ್ಟ ಕೇಳಲಾಗದವರು ಎಂದು ವಿಷಾದಿಸಿದರು.

ರೈತ ಮುಖಂಡ ಕರೊಟ್ಟಿ ತಮ್ಮೆಗೌಡ ಮಾತನಾಡಿ, ತಾಲೂಕಿನಲ್ಲಿ ಫರ್ಟಿಲೈಸರ್ ಅಂಗಡಿಗಳಲ್ಲಿ ಕಳಪೆ ಗೊಬ್ಬರ, ಕಳಪೆ ಕೀಟನಾಶಕ, ಕಳಪೆ ಬಿತ್ತನೆ ಬೀಜ ಎಗ್ಗಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆಲ್ಲ ಕೃಷಿ ಅಧಿಕಾರಿಗಳ ಕುಮ್ಮಕ್ಕು ಇದೆ. ದೂರು ನೀಡಿದರೂ ಕೂಡ ಅಂಗಡಿಗೆ ದಾಳಿ ನಡೆಸುವ ಬದಲು ಇರುವ ಸ್ಟಾಕ್ ಪೂರ್ಣ ಮಾರಾಟವಾಗುವ ಹಾಗೆ ನೆರವು ನೀಡುತ್ತಿದ್ದು, ರೈತ ವಿರೋಧಿ ನಿಲುವಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.

ಮಂಡ್ಯಕ್ಕೆ ಲ್ಯಾಬ್ ಪರೀಕ್ಷೆಗೆ ಕಳಿಸಿ ತಿಂಗಳು ಗಟ್ಟಲೆ ಆಗಿದೆ. ಆದರೆ, ಇದುವರೆಗೂ ಪರೀಕ್ಷೆ ಮಾಡಿಲ್ಲ. ಖಾಸಗಿಯಾಗಿ ಪರೀಕ್ಷೆ ಮಾಡಿಸಿದರೆ ರೈತ ಅದನ್ನ ಒಪ್ಪುವುದಿಲ್ಲ. ಅಧಿಕಾರಿಗಳು ಪರೀಕ್ಷೆ ಮಾಡಿಸುವ ತನಕ ರೈತ ಎಷ್ಟು ಸಮಯ ಕಾಯಬೇಕು. ಅದುವರೆಗೆ ರೈತ ಬಾಯಿಗೆ ಮಣ್ಣು ಹಾಕಿಕೊಳ್ಳಬೇಕೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...