ಕಲಬುರಗಿ | ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡುವಂತೆ ಆಗ್ರಹ; 20ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

Date:

ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ 20ನೇ ದಿನಕ್ಕೆ ಕಾಲಿಟ್ಟಿದ್ದು, ಅಫಜಲಪುರ ನಗರದ ಬಸವೇಶ್ವರ ಸರ್ಕಲ್‌ನಲ್ಲಿ ರಸ್ತೆ ತಡೆ ಚಳವಳಿ ನಡೆಸುವುದರ ಮೂಲಕ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

“ಅಫಜಲಪುರ ಭೀಮಾ ನದಿ ಬತ್ತಿ ಹೋಗಿದೆ. ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಜನ ಜಾನುವಾರುಗಳು, ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಸ್ಥಳೀಯರು ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಜನರು ಪ್ರಾಣದ ಹಂಗು ತೊರೆದು ಸಾವು ಬದುಕಿನ ಮಧ್ಯದಲ್ಲಿ ಬದುಕು ನಡೆಸುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಬೀಗರು, ನೆಂಟರು, ಸಂಬಂಧಿಕರು ಬೇರೆ ಊರಿನಿಂದ ಯಾರೂ ಕೂಡಾ ಬರಲಾರದಂತಾಗಿದೆ. ಮದುವೆಯಂತಹ ಕಾರ್ಯಕ್ರಮಗಳನ್ನು ನಡೆಸುವುದು ತುಂಬಾ ಸಂಕಷ್ಟಮಯವಾಗಿದ್ದು, ಜನರು ಚಿಂತಾಜನಕರಾಗಿದ್ದಾರೆ. ಇದಕ್ಕೆ ಮುಂದಾಲೋಚನೆಯಾಗಿ ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಮತ್ತು ಜೇವರ್ಗಿ ತಾಲೂಕಿನ ಹಳ್ಳಿಗಳಲ್ಲಿ ಹಾಗೂ ಆಲಮೇಲ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೆಂಗಳೂರಿಗೆ ಹೋಗಿ ನೀರಾವರಿ ಸಚಿವರಿಗೆ, ಮುಖ್ಯಮಂತ್ರಿಯವರಿಗೆ ಮತ್ತು ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸ್ಥಳಕ್ಕೆ ಹೋಗಿ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಿದ್ದೆವು ಹಾಗೂ ಹಲವು ಬಾರಿ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕಳು ಸಾವು

“ಸಾರ್ವಜನಿಕರ ಹಿತದೃಷ್ಟಿಯಿಂದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹರಿಸಬೆಕಾಗಿತ್ತು. ಆದರೆ ಈವರೆಗೆ ಸಮಸ್ಯೆ ಬಗೆ ಹರಿಸುವ ಕುರಿತು ಯಾವುದೇ ಕ್ರಮ ಆಗಿಲ್ಲದಿರುವುದನ್ನು ನೋಡಿದರೆ ತುಂಬಾ ಖೇದಕರ ಸಂಗತಿಯಾಗಿದೆ. ಅಫಜಲಪುರ ತಾಲೂಕಿನ ಗುಡ್ಡೆವಾಡಿ ಗ್ರಾಮದಲ್ಲಿ ಈಗಾಗಲೇ ಕುಡಿಯುವ ನೀರಿಲ್ಲದೆ ಉಸುಕಿನಲ್ಲಿ ಕಾಲು ತಿಕ್ಕಿ ಒದ್ದಾಡಿ ಆಕಳು ಸತ್ತು ಹೋಗಿದೆ. ಕುಡಿಯುವ ನೀರಿಲ್ಲದೆ ಜಾನುವಾರುಗಳು ಸಾಯುತ್ತಿವೆ. ಜನರ ಗೋಳಾಟ ಮುಗಿಲು ಮುಟ್ಟಿದೆ. ಮನೆಯಲ್ಲಿರುವ ದನಕರುಗಳು, ಎತ್ತುಗಳು, ಎಮ್ಮೆಗಳು, ಕುರಿಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಒಕ್ಕಲುತನ ಬೀದಿಪಾಲಾಗುತ್ತಿದೆ. ಕನಿಷ್ಟ ಸೌಜನ್ಯಕ್ಕಾದರೂ ಕರುಣೆ ತೋರದೆ, ಮಾನವೀಯತೆ ಇಲ್ಲದೆ ಇರುವುದು ತುಂಬಾ ದುಃಖಕರ ಸಂಗತಿಯಾಗಿದೆ. ಈಗಲಾದರು ಎಚ್ಚೆತ್ತುಕೊಂಡು ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರದವರೆಗೆ ಕುಡಿಯುವ ನೀರು ಬಿಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

ಈ ಸಂದರ್ಭದಲ್ಲಿ ಸಿದ್ದರಾಮ ದಣ್ಣುರು, ರಮೇಶ್ ಹೂಗಾರ, ಅಶೋಕ ಹೂಗಾರ, ಶರಣಬಸಪ್ಪಾ ಮಮಶೆಟ್ಟಿ, ಬೊಜಪ್ಪಾ ಕೊಳ್ಳುರು, ಲಕ್ಷ್ಮಿ ಕಾಂತ ಕುಮುಸಗಿ, ಸಿಪ್ಪಣ್ಣ ಚಿಲ್ಕವಳಗಿ ಎಲ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...