ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

Date:

ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಖರೀದಿಸಲು ಬಂದಿದ್ದ ದಂಪತಿಯ ಎರಡು ವರ್ಷದ ಮಗುವನ್ನು ಅಪಹರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗುರುವಾರ ನಡೆದಿದೆ.

ಸೀತಾಪುರ ಗ್ರಾಮದಿಂದ ರಘು ನಾಯಕ್ ದಂಪತಿ ಕಡೂರು ನಗರಕ್ಕೆ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಬಂದಿದ್ದರು. ಕಡೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪದಲ್ಲಿರುವ ಎಣ್ಣೆ ಗಾಣದ ಅಂಗಡಿಗೆ ಮಗು ಮಾನಸಳನ್ನು ತಂದೆ ರಘು ನಾಯಕ್ ಕರೆದುಕೊಂಡು ಹೋಗಿದ್ದರು.

ಮಗು ಕಾಣದಿದ್ದಾಗ ಹುಡುಕಾಟ ನಡೆಸಿದ ತಂದೆ ರಘು ನಾಯಕ್, ಬಳಿಕ ಬಟ್ಟೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಪರಿಶೀಲಿಸಿದಾಗ, ಮಗವನ್ನು ಮಹಿಳೆಯೋರ್ವರು ಅಪಹರಿಸುವ ದೃಶ್ಯ ಸೆರೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಡೂರು
ಮಗುವನ್ನು ಪೊಲೀಸರಿಗೆ ಒಪ್ಪಿಸಿದ ಮಹಿಳೆ ಮೇರಿ

ಬಟ್ಟೆ ಅಂಗಡಿಯಲ್ಲಿ ಬಟ್ಟೆ ಖರೀದಿ ಮಾಡುವಂತೆ ನಟಿಸುತ್ತಿದ್ದ ಮಹಿಳೆಯೋರ್ವರು, ಎಣ್ಣೆ ಗಾಣದ ಅಂಗಡಿ ಮುಂದೆ ನಿಂತಿದ್ದ ಮಾನಸಳನ್ನು ಸೀರೆಯ ಸೆರಗು ಮುಚ್ಚಿಕೊಂಡು ಅಪಹರಿಸಿರುವುದು ತಿಳಿದುಬಂದಿದೆ. ತಕ್ಷಣ ಮಗುವಿನ ಪೋಷಕರು ಮಗುವಿನ ಅಪಹರಣವಾಗಿರುವುದಾಗಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿದ್ದೀರಾ: ಹಾಸನ | ಶಾಸಕ ಶಿವಲಿಂಗೇಗೌಡರ ಆಡಿಯೋ ವೈರಲ್; ಜೆಡಿಎಸ್ ವಕ್ತಾರ ಎಸ್‌ಪಿಗೆ ದೂರು

ಮಗು ಅಪಹರಣಗೊಂಡ ವಿಡಿಯೋ ಎಲ್ಲೆಡೆ ಸುದ್ದಿಯಾಗಿ ಪ್ರಸಾರವಾಗಿತ್ತು. ಈ ಎಲ್ಲ ಬೆಳವಣಿಗೆಯ ನಡುವೆಯೇ ಬೆಟ್ಟದ ತರೀಕೆರೆ ಸಮೀಪದ ಬೆಟ್ಟ ತಾವರೆಕೆರೆ ಗ್ರಾಮದ ಪ್ರಕಾಶ್ ಹಾಗೂ ಮೇರಿಯವರು ಎರಡು ವರ್ಷದ ಮಗು ಮಾನಸಳನ್ನು ತರೀಕೆರೆ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

“ಕಡೂರು ಬಸ್‌ ನಿಲ್ದಾಣದ ಸಮೀಪ ನಮಗೆ ಮಗುವೊಂದು ಸಿಕ್ಕಿದೆ ಎಂದು ತಿಳಿಸುತ್ತಾ ನನ್ನ ಅತ್ತೆಯವರು ಮಗುವನ್ನು ನಮ್ಮ ಮನೆಗೆ ನಿನ್ನೆ ಕರೆದುಕೊಂಡು ಬಂದಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಮಗು ನಾಪತ್ತೆಯಾಗಿರುವ ಸುದ್ದಿ ನೋಡಿ ನಮಗೆ ಗಾಬರಿಯಾಯಿತು. ಹಾಗಾಗಿ, ಈ ಮಗುವನ್ನು ತರೀಕೆರೆ ಠಾಣೆಗೆ ಒಪ್ಪಿಸಿದ್ದೇವೆ” ಎಂದು ದಂಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

“ನಮ್ಮ ಮನೆಯಲ್ಲಿ ಮಕ್ಕಳಿಲ್ಲ. ಅದಕ್ಕಾಗಿ ಬಸ್ ನಿಲ್ದಾಣದ ಸಮೀಪವಿದ್ದ ಮಗುವನ್ನು ಮನೆಗೆ ಕರೆದುಕೊಂಡು ಹೋದೆವು” ಎಂದು ಮಗುವನ್ನು ಕರೆದುಕೊಂಡು ಹೋಗಿದ್ದ ಮಹಿಳೆ ಗಂಗಮ್ಮ ಪೊಲೀಸರ ಬಳಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಈ ದಿನ.ಕಾಮ್ ಜೊತೆಗೆ ಮಾತನಾಡಿದ ಬಾಲಕಿಯ ತಾಯಿ ಕಾವ್ಯಾ, “ನಮಗೆ ಮಗು ಸಿಕ್ಕಿದ್ದೇ ದೊಡ್ಡ ಖುಷಿ. ಮಗುವನ್ನು ತೆಗೆದುಕೊಂಡ ಹೋದ ಮಹಿಳೆಯ ವಿವರಗಳನ್ನು ನಾವು ಕೇಳುವುದಕ್ಕೆ ಹೋಗಿಲ್ಲ. ಮಗು ಸಿಕ್ಕ ಖುಷಿಯಲ್ಲಿ ಯಾವುದನ್ನೂ ನಾವು ಪ್ರಶ್ನಿಸಲು ಹೋಗಿಲ್ಲ” ಎಂದು ತಿಳಿಸಿದ್ದಾರೆ.

“ಸುದ್ದಿ ನೋಡಿ ತಾವರೆಕೆರೆ ಗ್ರಾಮದ ಪ್ರಕಾಶ್ ಹಾಗೂ ಮೇರಿ ತರೀಕೆರೆ ಠಾಣೆಗೆ ಮಗುವನ್ನು ಒಪ್ಪಿಸಿದ್ದಾರೆ. ಮಗು ಸುರಕ್ಷಿತವಾಗಿದೆ. ಮಗುವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ತನಿಖೆ ನಡೆಸುತ್ತೇವೆ” ಎಂದು ಕಡೂರು ಪೊಲೀಸ್ ಠಾಣೆಯ ಎಸ್‌ಐ ಈ ದಿನ. ಕಾಮ್ನ ಸಿಟಿಜನ್ ಜರ್ನಲಿಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ: ಮುನ್ನ, ಸಿಟಿಜನ್ ಜರ್ನಲಿಸ್ಟ್, ಕಡೂರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...