ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

Date:

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ. ಮಳೆ ಬಿಸಿಲು ಚಳಿಯಲ್ಲಿ ಸಣ್ಣ-ಸಣ್ಣ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳು ಯಾರೊಬ್ಬರೂ ಅವರ ಸಮಸ್ಯೆಗೆ ಸ್ಪಂಧಿಸುತ್ತಿಲ್ಲ. ಇಲ್ಲಿನ ಜನರ ಅಳಲು-ಆಕ್ರಂದನ ಮುಗಿಯುತ್ತಿಲ್ಲ.

ಈ ಕುಟಂಬಗಳ ಜನರ ಬಳಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಒಟರ್ ಐಡಿ ಸೇರಿದಂತೆ ಎಲ್ಲ ದಾಖಲೆಗಳೂ ಇವೆ. ಆದರೂ, ಈ ಕುಟುಂಬಗಳ ವೃದ್ಧರಿಗೆ ಪಿಂಚಣಿ, ವಿಧವಾ ಪಿಂಚಣಿ ಸೇರಿದಂತೆ ಸರ್ಕಾರದಿಂದ ಯಾವುದೇ ಸವಲತ್ತು ದೊರೆಯುತ್ತಿಲ್ಲ ಎಂದು ಅಲ್ಲಿನ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“30-40 ವರ್ಷಗಳಿಂದ ನಾವು ಜೇವರ್ಗಿ ಪಟ್ಟಣದಲ್ಲಿ ವಾಸವಾಗಿದ್ದೇವೆ. ಸ್ವಂತ ನೆಲೆ ಇಲ್ಲದೆ, ಬದುಕುತ್ತಿದ್ದೇವೆ.  ಮಳೆ ಬಂದರೆ ಅಡುಗೆ ಮಾಡಿಕೊಂಡು ಊಟ ಮಾಡುವುದಕ್ಕೂ ಆಗುವುದಿಲ್ಲ. ಉಪವಾಸ ಬೀಳುವ ಪರಿಸ್ಥಿತಿ ಇದೆ. ಚುನಾವಣೆ ಸಂದರ್ಭದಲ್ಲಿ ಶಾಸಕರು, ಸಂಸದರು ಬಂದು ಮನೆ ಕೊಡ್ತೀವಿ ಎಂದು ಹೇಳುತ್ತಾರೆ. ಆದರೆ, ಚುನಾವಣೆ ಮುಗಿದ ಮೇಲೆ ಯಾರೂ ನಮ್ಮತ್ತ ತಿರುಗಿಯೂ ನೋಡುವುದಿಲ್ಲ” ಎಂದು ಅಲ್ಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲೆಮಾರಿ1 2

ಅಲೆಮಾರಿ ಸಮುದಾಯದ ದುರ್ಗಮ್ಮ ಈದಿನ.ಕಾಮ್ ಜೊತೆ ಮಾತನಾಡಿದ್ದು, “ಮಳೆ ಬಂದ್ರೆ ಗುಡಿಸಲು ಸೋರುತ್ತವೆ. ಕುಡಿಸಲಿಗೆ ನೀರು ನುಗ್ಗುತ್ತವೆ. ಮಳೆ ನೀರಿನ ನಡುವೆಯೇ ಸಣ್ಣ ಮಕ್ಕಳೊಂದಿಗೆ ಹಲವಾರು ರಾತ್ರಿ ಕಳೆಯುತ್ತಿದ್ದೇವೆ. ಹಾವು, ಚೇಳುಗಳ ಆತಂಕ ದಿನನಿತ್ಯ ಕಾಡುತ್ತಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಸಮುದಾಯದ ಎಲ್ಲಮ್ಮ ಮಾತನಾಡಿ, “ನಮಗೆ ಯಾವುದೇ ಸವಲತ್ತು ಸಿಗದ ಕಾರಣ, ಮಕ್ಕಳನ್ನು ಶಾಲೆಗೆ ಕಳುಹಿಸಿಲು ಸಾಧ್ಯ ಆಗುತ್ತಿಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ನಮಗೆ ಅನುಕೂಲ ಇಲ್ಲ. ಹಾಗಾಗಿ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಭಿಕ್ಷೆ ಬೇಡಿಕೊಂಡು ತಿನ್ನುವವರಿಗೆ ಯಾರು ಸಹಾಯ ಮಾಡುವುದಿಲ್ಲ. ಜನಪ್ರತಿನಿದಿಗಳು ಸುಮ್ನೆ ಬರ್ತಾರೆ ಹೋಗ್ತಾರೆ” ಎಂದು ತಿಳಿಸಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಮರೆವ್ವ, “ಮಳೆ ಬಂದ್ರೆ ಗುಡಿಸಲು ಸೋರುತ್ತವೆ. ತಲೆಮೇಲೆ ಬುಟ್ಟಿ, ತಟ್ಟೆ, ಹರುಕು ಖವದಿ ಹೊದ್ದುಕೊಂಡು ನಿದ್ದೆ ಇಲ್ಲದೆ, ಸಂಕಷ್ಟ ಪಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...