ಕಲಬುರಗಿ | ರಮಾಬಾಯಿ ಅಂಬೇಡ್ಕರ್‌ರವರ 126ನೇ ಜಯಂತ್ಯುತ್ಸವ ಆಚರಣೆ

Date:

ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಭೀಮ್ ಆರ್ಮಿ ಏಕತಾ ಮಿಷನ್ ಸಂಘಟನೆ ವತಿಯಿಂದ ಭಾನುವಾರ (ಫೆ.11) ಏರ್ಪಡಿಸಿದ್ದ ಮಾತೆ ರಮಾಬಾಯಿ ಅಂಬೇಡ್ಕರ್‌ರವರ 126ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತನ್ನ ಶ್ರೀಮಂತಿಕೆಯನ್ನು ತ್ಯಾಗ ಮಾಡಿ ಸಮಾಜದ ಏಳಿಗೆಯನ್ನು ಬಯಸಿದ ಮಹಿಳೆ ರಮಾಬಾಯಿ. ಅವರ ಬಾಬಾ ಸಾಹೇಬರಿಗೆ ಎಷ್ಟೆಲ್ಲ ಪ್ರೇರಣೆ ಮತ್ತು ಹಿಂದಿನ ಶಕ್ತಿಯಾಗಿದ್ದರು ಎಂಬುವುದನ್ನು ನಾವು ತಿಳಿದುಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿದೇಶಕ್ಕೆ ಹೋದ ಸಂದರ್ಭದಲ್ಲಿ ರಮಾಬಾಯಿ ಅಂಬೇಡ್ಕರ್ ಅನುಭವಿಸಿದ ನೋವು ಹೇಳತೀರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಎಷ್ಟೇ ಕಷ್ಟ ಬಂದರೂ ಸಹ ತಾನೆಂದು ಬಾಬಾ ಸಾಹೇಬರಿಗೆ ತೋರಿಸಿಕೊಡಲಿಲ್ಲ. ಅಂಬೇಡ್ಕರ್ ಅವರು ಮಹಿಳೆಯರಿಗಾಗಿ ಮತ್ತು ದೇಶದ ಜನರ ನೋವುಗಳಿಗೆ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸ ರಮಾಬಾಯಿ ಅವರಿಗೆ ಇತ್ತು. ತನ್ನ ಮಗ ಸತ್ತಾಗಲೂ ಧೃತಿಗೆಡದೆ ಬಾಬಾ ಸಾಹೇಬರಿಗೆ ಪ್ರೇರಣೆಯಾದರು’ ಎಂದರು.

ಉಪನ್ಯಾಸಕ ರಾಹುಲ್ ಪಂಚಶೀಲ ಮಾತನಾಡಿ, “ಜೀವನದುದ್ದಕ್ಕೂ ಕಷ್ಟ ಅನುಭವಿಸಿದವರು ರಮಾಬಾಯಿಯಾಗಿದ್ದಾರೆ. ಜಗತ್ತು ನನ್ನನ್ನು ಗುರುತಿಸುತ್ತಿದೆ, ನಾನು ಇಷ್ಟೆಲ್ಲ ಸಾಧನೆ ಮಾಡಿದ್ದೇನೆ ಎಂದರೆ, ಅದಕ್ಕೆ ರಮಾಬಾಯಿ ಕಾರಣ ಎಂದು ಸ್ವತಃ ಬಾಬಾ ಸಾಹೇಬರೇ ಹೇಳಿಕೊಂಡಿದ್ದಾರೆ. ಜಗತ್ತಿನಲ್ಲಿ ಓದಿನ ಹಸಿವು ಇದ್ದಿದ್ದು ಡಾ.ಅಂಬೇಡ್ಕರ್ ಅವರಿಗೆ ಮಾತ್ರ. ಈ ಸಾಧನೆಗೆ ರಮಾಬಾಯಿಯವರ ಕೊಡುಗೆಯೂ ಇತ್ತು ಎಂಬುವುದು ಯಾರೂ ಮರೆಯಲು ಸಾಧ್ಯವಿಲ್ಲ” ಎಂದರು.

ಈ ಸಂದರ್ಭದಲ್ಲಿ ನಿಜಲಿಂಗ ದೊಡ್ಡಮನಿ, ಶ್ರೀನಾಥ ಮಿಂಚಿನ್, ಸುಭಾಷ ಹೊಸ್ಮನಿ, ಭರತ್, ಶಾರದಾ ಬೂದಿಹಾಳ, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಂಗರಗಿ, ಕಾರ್ಯದರ್ಶಿ ಸುಧೀರ ಹೊನ್ನಳ್ಳಿ, ತಾಲೂಕು ಅಧ್ಯಕ್ಷ ಸುಭಾಷ ಆಲೂರ, ಗೌರವಾಧ್ಯಕ್ಷ ಸಿದ್ದು ಮುದವಾಳ, ನಗರಾಧ್ಯಕ್ಷ ಬಸವರಾಜ ಇಂಗಳಗಿ, ಪ್ರ.ಕಾರ್ಯದರ್ಶಿ ಸಿದ್ದು ಹುಲ್ಲೂರ, ಮಿಲಿಂದ ಸಾಗರ, ಭೀಮಾಶಂಕರ ಬಿಲ್ಲಾಡ, ಗೀತಾ, ಪರಮೇಶ ಬಿರಾಳ, ಶಿವುಗೌಡ ಬಿರಾದಾರ, ಮರೆಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...