ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

Date:

ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ ಸತತವಾಗಿ ಒಂದರಿಂದ ನಾಲ್ಕು ಅಂಗಡಿ ಮುಗ್ಗಟ್ಟುಗಳಲ್ಲಿ ಕಳ್ಳತನವಾಗಿದೆ. ಅದರಲ್ಲಿಯೂ ಬೈಕ್‌ ಕಳ್ಳತನ, ಒಡವೆ ಕಳ್ಳತನ, ಕಾರು ಕಳ್ಳತನ ಸೇರಿದಂತೆ ಮೊಬೈಲ್ ಅಂಗಡಿಗಳು, ಕಿರಣಾ ಅಂಗಡಿ, ಜನರಲ್ ಸ್ಟೋರ್ ಸೇರಿದಂತೆ ಹಲವು ಅಂಗಡಿಗಳಲ್ಲಿ ಸಿಸಿಟಿವಿ ಅಳವಡಿಸಿದ್ದರೂ ಯಾವುದೇ ಭಯವಿಲ್ಲದೆ ದುರುಳರು ಕಳ್ಳತನ ಮಾಡುತ್ತಿರುವುದರಿಂದ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಪಟ್ಟಣದಲ್ಲಿ 2024 ಜನವರಿಯಿಂದ ಹಿಡಿದು ಮೇ ತಿಂಗಳವರೆಗೆ ಸುಮಾರು 12 ಕಡೆಗಳಲ್ಲಿ ಕಳ್ಳತನವಾಗಿರುವ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಇದ್ದು, ಇನ್ನು ಕೆಲವು ಕಳ್ಳತನದ ಪ್ರಕರಣಗಳು ದಾಖಲಿಸಲು ವ್ಯಾಪಾರಸ್ತರು ಮುಂದಾಗಿಲ್ಲ ಎಂಬುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈವರೆಗೆ ಅಂಗಡಿ ಮುಂಗಟ್ಟುಗಳು ಕಳ್ಳತನವಾದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಕೂಡಾ ಪೊಲೀಸ್ ಇಲಾಖೆಯವರು ಕಳ್ಳರ ಕೈಗಳಿಗೆ ಬೇಡಿ ಹಾಕಲು ವಿಫಲವಾಗಿರುವುದು ಎದ್ದು ಕಾಣುತ್ತಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಪಟ್ಟಣಕ್ಕೆ ಪ್ರವೇಶ ಪಡೆಯುವ ಮುಖ್ಯರಸ್ತೆ, ಲಾಡ್ಜಿಂಗ್ ಕ್ರಾಸ್ ಹತ್ತಿರ ನಿರಂತರವಾಗಿ ವಾಹನಗಳ ಸಂಚಾರವಿರುತ್ತದೆ. ಆದರೂ ಕಳ್ಳರು ಯಾರದೇ ಭಯವಿಲ್ಲದೇ ಮುಖ್ಯ ರಸ್ತೆಯ ಬದಿಯಲ್ಲಿರುವ ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡುತ್ತಿರುವುದನ್ನು ನೋಡಿದರೆ ಕಳ್ಳತನ ಮಾಡುವವರಿಗೆ ಪೊಲೀಸ್ ಇಲಾಖೆಯ ಬಗ್ಗೆ ಕಿಂಚಿತ್ತೂ ಭಯವಿಲ್ಲದಂತಾಗಿದೆ. ವಾಸ್ತವವೆಂದರೆ ಕಳ್ಳತನ ಆಗಿರುವ ಎಲ್ಲ ಅಂಗಡಿಗಳಲ್ಲಿ ಸಿಸಿಟಿವಿಗಳಿದ್ದು, ಕಳ್ಳತನ ಮಾಡಿರುವ ಕುರಿತ ಚಿತ್ರಗಳು ಸೆರೆಯಾಗಿವೆ. ಇಷ್ಟಾದರೂ ಕೂಡಾ ಕಳ್ಳರನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲದಿರುವುದರಿಂದ ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿ ವೈಫಲ್ಯವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ” ಎಂದು ಸಾರ್ವಜನಿಕ ವಲಯದಲ್ಲಿ ಮಾತನಾಡುತ್ತಿದ್ದಾರೆ.

“ಪೊಲೀಸ್ ಇಲಾಖೆಯವರು ಸಾರ್ವಜನಿಕ ರಕ್ಷಣೆ ಹೇಗೆ ಮಾಡುತ್ತಾರೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಒಟ್ಟಾರೆಯಾಗಿ ಈವರೆಗೆ ಕಳ್ಳತನ ಮಾಡಿರುವ ಕಳ್ಳರನ್ನು ಅತಿ ಬೇಗನೆ ಹಿಡಿದು ಸಾರ್ವಜನಿಕರಲ್ಲಿರುವ ಭಯದ ವಾತಾವರಣ ಹೋಗಲಾಡಿಸಬೇಕು ಮತ್ತು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದ್ದರೂ ಇಲ್ಲದಂತಾದ ಸಿಸಿ ಟಿವಿಗಳು

ಪಟ್ಟಣದಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಪ್ರವೇಶ ಪಡೆಯುವ ಲಾಡ್ಜಿಂಗ್ ಕ್ರಾಸ್ ಮುಖ್ಯ ರಸ್ತೆಯ ವೃತ್ತದಲ್ಲಿ ಮೂರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮಾರುಕಟ್ಟೆಯ ಜನತಾ ವೃತ್ತದಲ್ಲಿ ಮೂರು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಕೇವಲ ಒಂದೆರಡು ತಿಂಗಳು ಮಾತ್ರ ಚಾಲ್ತಿಯಲ್ಲಿದ್ದು ಕಳೆದ ಐದಾರು ತಿಂಗಳಿನಿಂದ ಬಂದ್ ಆಗಿರುವುದರಿಂದ ಸಿಸಿಟಿವಿ ಕ್ಯಾಮೆರಾಗಳು ಇದ್ದು ಇಲ್ಲದಂತಾಗಿವೆ. ಇದರಿಂದ ಅನೇಕ ಕಡೆಗಳಲ್ಲಿ ಆಗಿರುವ ಕಳ್ಳತನ ಪ್ರಕರಣಗಳು ತನಿಖೆಗೆ ತೊಡಕಾಗಿದೆ ಎನ್ನುವುದು ಸಾರ್ವಜನಿಕರ ವಲಯದಲ್ಲಿ ಪೋಲಿಸ್ ಇಲಾಖೆಯ ವಿರುದ್ಧ ದೊಡ್ಡ ಆರೋಪವಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

ಜನವರಿ ತಿಂಗಳಲ್ಲಿ ಮೊಬೈಲ್ ಅಂಗಡಿಯಲ್ಲಿ ಕಳ್ಳತನವಾಗಿದ್ದು, ₹2.50 ಲಕ್ಷ ನಷ್ಟವಾಗಿದೆ. ಫೆಬ್ರವರಿಯಲ್ಲಿ ನಾಲ್ಕು ಅಂಗಡಿಗಳಲ್ಲಿ ಕಳ್ಳತನವಾಗಿದೆ. ಮಾರ್ಚ್ ತಿಂಗಳು ಬಸ್ ನಿಲ್ದಾಣದಲ್ಲಿ ಬೈಕ್ ಮತ್ತು ಒಡವೆ ಕಳ್ಳತನವಾಗಿದೆ. ಏಪ್ರಿಲ್ ತಿಂಗಳಲ್ಲಿ ಗೋಡೌನಲ್ಲಿ ಕಳ್ಳತನವಾಗಿದ್ದರೂ ಪ್ರಕರಣ ದಾಖಲಾಗಿಲ್ಲ. ಮೇ ತಿಂಗಳಲ್ಲಿ ಕಾರು ಕಳ್ಳತನಕ್ಕೆ ಯತ್ನ ನಡೆದಿದೆ. ಮೇ ತಿಂಗಳ 23ರಂದು ನಾಲ್ಕು ಅಂಗಡಿಗಳಲ್ಲಿ ಕಳ್ಳತನವಾಗಿದೆ ಎನ್ನಲಾಗಿದೆ.

ವರದಿ: ಸಿಟಿಜನ್ ಜರ್ನಲಿಸ್ಟ್- ಅನಂತನಾಗ ದೇಶಪಾಂಡೆ 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...