ಕಲಬುರಗಿ | ಡಿ ಗ್ರೂಪ್‌ ನೌಕರನ ಮಗಳಿಗೆ 14 ಚಿನ್ನದ ಪದಕ

Date:

ಸರ್ಕಾರಿ ಆಸ್ಪತ್ರೆಯಲ್ಲಿ ಕಸ ಗುಡಿಸುವುದು ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡೋ ಡಿ ಗ್ರೂಪ್‌ ನೌಕರನ ಮಗಳು ಕಷ್ಟ ಪಟ್ಟು ಓದಿ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದಿದ್ದಾರೆ.

ಕಲಬುರಗಿ ನಗರದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಉನ್ನಕ ಶಿಕ್ಷಣ ಸಚಿವ ಡಾ.ಸುಧಾಕರ ಸಹಭಾಗಿತ್ವದಲ್ಲಿ ಚಿನ್ನದ ಪದಕ, ಪಿಎಚ್ ಡಿ ಪದವಿ, ಗೌರವ ಡಾಕ್ಟರೇಟ್ ಪದವಿಗಳನ್ನು ಪ್ರಧಾನ ಮಾಡಲಾಯಿತು.

ಡಿ ಗ್ರೂಪ್‌ ನೌಕರನ ಮಗಳಿಗೆ ಹದಿನಾಲ್ಕು ಚಿನ್ನದ ಪದಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಲಬರ್ಗಾ ವಿವಿಯ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ರುಕ್ಮಿಣಿ ಹಣಮಂತರಾಯ್ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದು, ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೇ ಹದಿನಾಲ್ಕು ಚಿನ್ನದ ಪದಕ ಪಡೆದ ರುಕ್ಮಿಣಿ ತಂದೆ ಹಣಮಂತರಾಯ್, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜವಾನರಾಗಿ ಕೆಲಸ ಮಾಡುತ್ತಿದ್ದಾರೆ.

ಕಲಬುರಗಿ ತಾಲೂಕಿನ ಆಲಗೋಡ ಗ್ರಾಮದ ನಿವಾಸಿ ಹಣಮಂತರಾಯ್ ಓದಿದ್ದು ಕೇವಲ ಮೂರನೇ ತರಗತಿ ಮಾತ್ರ. ಆದರೆ ಆಸ್ಪತ್ರೆಯಲ್ಲಿ ಮೊದಲು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಹಣಮಂತರಾಯ್, ಕೆಲ ವರ್ಷಗಳ ಹಿಂದಷ್ಟೇ ಖಾಯಂ ನೌಕರರಾಗಿದ್ದಾರೆ. ಇನ್ನು ಹಣಮಂತರಾಯ್ ಅವರಿಗೆ ನಾಲ್ಕು ಮಂದಿ ಮಕ್ಕಳಿದ್ದು, ರುಕ್ಮಿಣಿ ಕಿರಿಯ ಮಗಳಾಗಿದ್ದಾರೆ. ತಾನು ಹೆಚ್ಚು ಓದಲಿಲ್ಲಾ, ಮಗಳು ಚೆನ್ನಾಗಿ ಓದಲಿ ಅಂತ, ಬಡತನವಿದ್ದರೂ ಕೂಡಾ ಮಗಳನ್ನು ಚನ್ನಾಗಿ ಓದಿಸಿದ್ದಾರೆ.

ಗುಲಬರ್ಗಾ ವಿವಿಯ ಘಟಿಕೋತ್ಸವದಲ್ಲಿ 14 ಚಿನ್ನದ ಪದಕ ಪಡೆದ ರುಕ್ಮಿಣಿ ಹಣಮಂತರಾಯ್‌ ಅವರು ಕಾಲೇಜು ಉಪನ್ಯಾಸಕಿಯಾಗುವ ಕನಸು ಹೊಂದಿದ್ದಾರೆ. ಮುಂದೆ ಚನ್ನಾಗಿ ಓದಿ ಪಿಹೆಚ್​ಡಿ ಮಾಡಬೇಕು, ಕಾಲೇಜು ಉಪನ್ಯಾಸಕಿಯಾಗಬೇಕೆನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

“ಗುಲಬರ್ಗಾ ಸ್ನಾತಕೋತ್ತರ ಕೇಂದ್ರದಲ್ಲಿ ಅಧ್ಯಯನ ಮಾಡುವಾಗ ಹೆಚ್ಚಿನ ಸಮಯ ಗ್ರಂಥಾಲಯ ಮತ್ತು ವಿಭಾಗದಲ್ಲಿ ಕಳೆದಿದ್ದೇನೆ. ಬಿಡುವು ಇದ್ದಾಗಲೆಲ್ಲಾ ಓದುತ್ತಿದ್ದೆ ಇದರಿಂದ ಹೆಚ್ಚಿನ ಚಿನ್ನದ ಪದಕ ಪಡೆಯಲು ಸಾಧ್ಯವಾಗಿದೆ. ಇದರಿಂದ ನನಗೂ ಸಂತಸ ತಂದಿದೆ” ಎಂದು ರುಕ್ಮಿಣಿ ಸಂತಸ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರ್‌ ಆಯ್ಕೆ

“ನನ್ನ ಸಾಧನೆಗೆ ಹೆತ್ತವರ ಸಹಕಾರ, ವಿಭಾಗದ ಉಪನ್ಯಾಸಕರ ಸಹಕಾರವಿದೆ. ಅವರೆಲ್ಲರ ಪ್ರೇರಣೆ, ಮಾರ್ಗದರ್ಶನವೇ ಈ ಸಾಧನೆಗೆ ಕಾರಣವಾಗಿದೆ” ಎಂದರು.

“ನಾನು ಓದಿದ್ದು ಮೂರನೇ ತರಗತಿ. ಸರ್ಕಾರಿ ಆಸ್ಪತ್ರೆಯಲ್ಲಿ ಜವಾನನಾಗಿದ್ದೇನೆ. ಮಗಳ ಸಾಧನೆ ಖುಷಿ ತಂದಿದೆ” ಎಂದು ರುಕ್ಮಿಣಿ ತಂದೆ ಹಣಮಂತರಾಯ್ ಸಂತಸ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...