ಕಲಬುರಗಿ | 371ನೇ (ಜೆ) ಕಲಂ ಜಾರಿ ದಿನ; ಕಲ್ಯಾಣ ಕರ್ನಾಟಕ ಐತಿಹಾಸಿಕ ದಿನ

Date:

ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ 371ನೇ (ಜೆ) ಕಲಂ ಜಾರಿಯಾಗಿರುವ ದಿನವು ಐತಿಹಾಸಿಕ ದಿನವಾಗಿದೆ. ವರ್ಷಾಚರಣೆ ಮೂಲಕ ಪ್ರಗತಿಯ ಅವಲೋಕನ ಮಾಡುವ ಅಗತ್ಯವಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವ ಅಧ್ಯಕ್ಷ ಬಸವರಾಜ ದೇಶಮುಖ ಹಾಗೂ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದರು.

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯು 371ನೇ(ಜೆ) ಕಲಂ ದಶಮಾನೋತ್ಸವ ಆಚರಣೆಗೆ ಸಂಬಂಧಿಸಿ ಗುರುವಾರ ಆಯೋಜಿಸಿದ್ದ 7 ಜಿಲ್ಲೆಗಳ ಮುಖಂಡರ ಸಭೆಯಲ್ಲಿ ಅವರು ಹೇಳಿದರು.

ಬಸವರಾಜ ದೇಶಮುಖ ಮಾತನಾಡಿ, ‘371(ಜೆ) ಕಲಂ ಜಾರಿಗಾಗಿ ಸುದೀರ್ಘ ಚಳವಳಿ ನಡೆದಿದ್ದು, ಎಲ್ಲರೂ ಸ್ಮರಿಸುವ ಅಗತ್ಯವಿದೆ. ಕೇಂದ್ರ ಸರ್ಕಾರ ಮತ್ತು ನಮ್ಮ ನಾಯಕರ ರಾಜಕೀಯ ಇಚ್ಛಾಶಕ್ತಿಯಿಂದ ಸಂವಿಧಾನಬದ್ಧ ಸ್ಥಾನಮಾನ ದೊರಕಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಮಾತನಾಡಿ, ‘ಸಮಿತಿ ಈಗಾಗಲೇ ಹಮ್ಮಿಕೊಂಡಿರುವ ರೂಪುರೇಷೆಗಳಂತೆ ಬರುವ ದಿನಗಳಲ್ಲಿ ಕಲಬುರಗಿಯ ಖವಾಜಾ ಬಂದೇನವಾಜ್‌ ಸಜ್ಜಾದೆ ನೇತೃತ್ವದಲ್ಲಿ ಸಭೆ ನಡೆಸಿ, ಕಲ್ಯಾಣದ ಜಿಲ್ಲೆಗಳಲ್ಲಿ ಸಭೆ ಆಯೋಜಿಸಿ, ಶೀಘ್ರ ವಿಚಾರ ಸಂಕಿರಣ ಏರ್ಪಡಿಸುವ ಕುರಿತು ಜಿಲ್ಲೆಗಳ ಮುಖಂಡರೊಂದಿಗೆ ಚರ್ಚಿಸಲಾಗುವುದು’ ಎಂದು ಹೇಳಿದರು.

1003863047
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಮುಖಂಡರು ಮಾತನಾಡಿದರು.

ಸಮಿತಿಯ ಬಳ್ಳಾರಿ ಜಿಲ್ಲೆ ಅಧ್ಯಕ್ಷ ಪನ್ನಾ ರಾಜು ಮಾತನಾಡಿ, ‘371ನೇ(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಸರ್ಕಾರದಿಂದ ಇನ್ನೂ ಬಹಳಷ್ಟು ಕೆಲಸಗಳು ಆಗಬೇಕು. ಹೋರಾಟ ಸಮಿತಿ ಸರ್ಕಾರದ ಮೇಲೆ ಬಲವಾದ ಒತ್ತಡ ತರಬೇಕು’ ಎಂದು ಆಗ್ರಹಿಸಿದರು.

ಚಿಂತಕ ಪ್ರೊ.ಆರ್.ಕೆ.ಹುಡಗಿ, ನಿವೃತ್ತ ಕುಲಪತಿ ಪ್ರೊ. ಪ್ರತಾಪಸಿಂಗ್ ತಿವಾರಿ, ಯಾದಗಿರಿ ಜಿಲ್ಲೆಯ ಮುಖಂಡ ಭೀಮಾ ನಾಯಕ, ಕೊಪ್ಪಳ ಜಿಲ್ಲೆಯ ಪ್ರೊ.ಎಸ್.ಎಸ್. ಪಾಟೀಲ, ಬೀದರ್‌ ಜಿಲ್ಲೆಯ ಮುಖಂಡರಾದ ಪಂಡಿತರಾವ ಚಿದ್ರಿ, ವಿನಯ ಮಾಳಗೆ ಸೇರಿದಂತೆ ಮತ್ತಿತರರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಕ್ರಿಯಾ ಸಮಿತಿ ರಚಿಸಲು ಸಮಿತಿ ಗೌರವ ಅಧ್ಯಕ್ಷರು ಮತ್ತು ಸಂಸ್ಥಾಪಕ ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಬೀದರ್‌ ಜಿಲ್ಲೆ ಮುಖಂಡ ಅಬ್ದುಲ್‌ ಮನ್ನನ್ ಸೇಠ ಮಂಡಿಸಿದರು. ಇದನ್ನು ಸರ್ವಾನುಮತದಿಂದ ಅನುಮೋದಿಸಲಾಯಿತು. ಎಲ್ಲರ ಸಹಮತಿಯಂತೆ ಖವಾಜಾ ಬಂದೇನವಾಜ ವಿಶ್ವವಿದ್ಯಾಲಯದಲ್ಲಿ ಜರುಗುವ ಸಭೆಯಲ್ಲಿ ವಿಚಾರ ಸಂಕಿರಣಗಳ ದಿನಾಂಕ ನಿಗದಿಗೆ ನಿರ್ಧರಿಸಲಾಯಿತು.

ಇದನ್ನೂ ಓದಿ : ಕಲಬುರಗಿ | ಕುರಿ ಮೇಯಿಸಲು ಹೋದ ಬಾಲಕರಿಬ್ಬರು ಬಾವಿಯಲ್ಲಿ ಬಿದ್ದು ಸಾವು

ಮುಖಂಡ ಬಸವರಾಜ ಕುಮನೂರ, ಲಿಂಗರಾಜ ಸಿರಗಾಪೂರ, ಸೈಯದ ಸನಾವುಲ್ಲ, ಬಿ.ಎಸ್. ಗುಲಶೆಟ್ಟಿ, ವೀರಶೆಟ್ಟಿ, ಕೈಲಾಸನಾಥ ದೀಕ್ಷಿತ, ಎಂ.ಬಿ. ನಿಂಗಪ್ಪ, ಕಲ್ಯಾಣರಾವ, ಅಸ್ಲಂ ಚೌಂಗೆ, ಭೀಮಶೆಟ್ಟಿ ಮುಕ್ಕಾ, ಸಂಧ್ಯಾರಾಜ, ವಿಷ್ಣು ಜೈನ್, ಮೋಹನ ಎಂ., ರಾಜಪ್ಪ ಬೀದರ್‌, ಮಾದಪ್ಪ ಬೀದರ, ಚಂದ್ರಶೇಖರ ಪಾಟೀಲ ಬೀದರ್‌, ಹಾಜಿ ರಿಜ್ವಾನ ಸಿದ್ದೀಖಿ, ನಾಗೇಂದ್ರ ಗೌಡ, ರೋಹನಕುಮಾರ ಬೀದರ್‌, ಮಹೇಶ, ರಾಜು ಜೈನ್, ಮುತ್ತಣ್ಣ ಎಸ್. ನಾಡಗೇರಿ, ಶರಣಪ್ಪ ಕುರಿಕೋಟಿ, ಬಾಬಾ ಫಕ್ರುದ್ದೀನ್‌, ಮಹೇಶ ದೇಶಪಾಂಡೆ, ರಾಘವೇಂದ್ರ ಜೆ. ಕುಲಕರ್ಣಿ, ಧರ್ಮರಾಜ ಪಾಟೀಲ, ಗೋವಿಂದ ಚೌವ್ಹಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...