ಕಲಬುರಗಿ | ರಾಜ್ಯದಿಂದ 4 ಲಕ್ಷ ಕೋಟಿ ಐಟಿ‌ ಸೇವೆ ರಫ್ತು: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ರಾಜೀವಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ಅವರೊಂದಿಗೆ ಉದ್ಘಾಟಿಸಿ, ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಮಟ್ಟಿಗೆ ಇಂದು ಐತಿಹಾಸಿಕ ದಿನವಾಗಿದೆ. ದೇಶ ಕಂಡ ಮಹಾನ್ ನಾಯಕರಾದ ರಾಜೀವ್ ಗಾಂಧಿ ಹಾಗೂ‌ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಗುತ್ತಿದೆ. ಅರಸು ಅವರು ಹಲವಾರು ಧೀಮಂತ ನಾಯಕರನ್ನು ಬೆಳೆಸಿ ಈ ನಾಡಿಗೆ ಕೊಡುಗೆಯಾಗಿ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ರವರು ಇಂದು ರಾಷ್ಟ್ರಮಟ್ಟದಲ್ಲಿ ಬೆಳೆಯುವುದಕ್ಕೆ ಅರಸು ಅವರ ಆಶೀರ್ವಾದವೂ ಕಾರಣವಾಗಿದೆ ಎಂದು ತಿಳಿಸಿದರು.

1992 ರಲ್ಲಿ ಪಂಚಾಯತ್ ರಾಜ್ ಕಾಯಿದೆಗೆ 73 ನೇ ತಿದ್ದುಪಡಿ ತರುವ ಮೂಲಕ ಮೀಸಲಾತಿ ಜಾರಿಗೊಳಿಸಿ ಹಿಂದುಳಿದವರು ಹಾಗೂ ಸಮಾಜದಲ್ಲಿ ತಳ ಸಮುದಾಯದ ಜನರು ಕೂಡಾ ಪಂಚಾಯತ್ ಅಧ್ಯಕ್ಷರಾಗಲು ಅನುಕೂಲವಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಕನಸನ್ನು ಈ ತಿದ್ದುಪಡಿಯ ಮೂಲಕ ರಾಜೀವ್ ಗಾಂಧಿ ಅವರು ನನಸು ಮಾಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಿಂದ ಬಹಳಷ್ಟು‌ ಜನರು ನಾಯಕರಾಗಿ ಬೆಳೆದಿದ್ದಾರೆ. ಹಾಗಾಗಿ‌, ಪಂಚಾಯತ್ ರಾಜ್‌ ನಾಯಕರನ್ನು ಬೆಳೆಸುವ ಕಾರ್ಖಾನೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಹತ್ವದ ದಿನದಂದು ಪಂಚಾಯತ್ ರಾಜ್ ರಾಜೀವ್ ಗಾಂಧಿ ಫೆಲೋಶಿಪ್ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಇಬ್ಬರು ಮಹನೀಯರ ಆಶಯದಂತೆ ಸಮಾಜದ ಕಟ್ಟಕಡೆಯ ಸಾಮಾನ್ಯ ನಾಗರಿಕರಿಗೆ ಸೌಲಭ್ಯ ಒಗದಗಿಸುತ್ತಿದ್ದೇವೆ. ಇದು ಹೆಮ್ಮೆಯ ಸಂಗತಿಯಾಗಿದೆ. ರಾಜೀವ್ ಗಾಂಧಿ ಅವರ ದೂರದೃಷ್ಟಿಯಿಂದಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಇಂದು ಮಾಹಿತಿ ತಂತ್ರಜ್ಞಾನ ಕ್ರಾಂತಿ‌ಯಾಗಿದೆ. ಇದರ ಪರಿಣಾಮವಾಗಿ 4 ಲಕ್ಷ ಕೋಟಿ ಐಟಿ‌ ಸೇವೆ ರಫ್ತಾಗಿದ್ದು ರಾಜ್ಯವು ವಿಶ್ವದ ನಾಲ್ಕನೆಯ ಅತಿದೊಡ್ಡ ಕ್ಲಸ್ಟರ್ ಆಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಸಮೃದ್ದ, ಸಶಕ್ತ ಹಾಗೂ ಪ್ರಬುದ್ಧ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡಲು ನೀವೆಲ್ಲ ನಮ್ಮೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...