ಕಲಬುರಗಿ | ಕಬ್ಬಿಗೆ 5000 ರೂ. ಬೆಲೆ ನಿಗದಿಗೆ ಆಗ್ರಹ

Date:

ಮಳೆ ಕೊರತೆ, ಬಿತ್ತನೆ ಬೀಜ, ಗೊಬ್ಬರದ ಬೆಲೆ ಏರಿಕೆಯಿಂದಾಗಿ ಕಬ್ಬ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆಯುವ ಟನ್‌ ಕಬ್ಬಿಗೆ 5,000 ರೂ. ಬೆಲೆ ನಿಗದಿ ಮಾಡಬೇಕು. ಕಳೆದ ವರ್ಷ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಸರ್ಕಾರ ಪ್ರಾಂತ ರೈತ ಸಂಘ ಒತ್ತಾಯಿಸಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೇಟ್ಟಿ, “ಕಲಬುರಗಿ ಜಿಲ್ಲೆಯ ರೈತರು ಹೆಚ್ಚಾಗಿ ಕಬ್ಬು ಬೆಳೆಯುತ್ತಿದ್ದಾರೆ. ಆದರೆ, ಬೆಳೆದ ಬೆಳೆಗೆ ಸರಿಯಾದ ಬೆಲೆ, ಲಾಭ ದೊರೆಯದೆ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಮಾಡುವ ಯುವ ರೈತರಿಗೆ ಉತ್ತಮ ಜೀವನ ನಡೆಸುವ ಭರವಸೆ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಕ್ಕರೆ ಉತ್ಪಾದನೆಯಲ್ಲಿ ಬ್ರೆಜಿಲ್ ನಂತರ ಎರಡನೇ ಸ್ಥಾನದಲ್ಲಿ ಭಾರತವಿದೆ. ಅದೇ ರೀತಿ ದೇಶದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಸುಮಾರು 5 ಕೋಟಿ ಕಬ್ಬು ಬೆಳೆಗಾರರು ದೇಶದಲ್ಲಿದ್ದಾರೆ. ರೈತರು ಒಂದು ಟನ್ ಕಬ್ಬು ಬೆಳೆಯಲು ಸುಮಾರು 3,500 ರೂಪಾಯಿ ಖರ್ಚು ಬರುತ್ತಿದೆ. ಆದರೆ, ಕಬ್ಬಿಗೆ ನಿಗದಿಯಾಗಿರುವ ಬೆಲೆ ಇದಕ್ಕಿಂತಲು ಕಡಿಮೆ ಇದೆ. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಲೆ ನಿಗಧಿಪಡಿಸಿ, ಪ್ರತಿ ಟನ್‌ ಕಬ್ಬಿಗೆ 5,000 ರೂ. ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ಕರ್ನಾಟಕ ಕಬ್ಬು ಖರೀದಿ ಮತ್ತು ಸರಬರಾಜು ನಿಯಂತ್ರಣ ಅಧಿನಿಯಮ-2013 ಹಾಗೂ ತಿದ್ದುಪಡಿ ಅಧಿನಿಯಮ -2014ರ ಕಲಂ 4 (ಎ) ಅಡಿ ಅಧಿಕಾರವನ್ನು ಚಲಾಯಿಸಿ ರಾಜ್ಯದ ಎಥೆನಾಲ್ ಉತ್ಪಾದಿಸುವ ಮತ್ತು ಉತ್ಪಾದಿಸದೆ ಇರುವ ಎಲ್ಲ ಸಕ್ಕರೆ ಕಾರ್ಖಾನೆಗಳು 2022-23ರ ಎಫ್‌ಆರ್‌ಪಿ ಜೊತೆಗೆ ಪ್ರತಿ ಟನ್‌ಗೆ 10 ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಆದೇಶಿಸಿದೆ. ಅದರಂತೆ, ಚಾಮುಂಡೇಶ್ವರಿ ಸಕ್ಕರೆ ಕಂಪನಿಯು ರೈತರಿಗೆ ಸುಮಾರು ಹತ್ತೂವರೆ ಕೋಟಿ ರೂಪಾಯಿ ಹಣವನ್ನು ನೀಡಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಪ್ರತಿಭಟನಾಕಾರರ ಬೇಡಿಕೆಗಳು

  1. ಒಂದು ಟನ್ ಕಬ್ಬಿಗೆ 5,000 ರೂ. ಬೆಲೆ ನಿಗಧಿಪಡಿಸಬೇಕು.
  2. ಡಾ. ಸ್ವಾಮಿನಾಥ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗಧಿಪಡಿಸಬೇಕು.
  3. ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣ ಪಾವತಿ ಮಾಡಬೇಕು.
  4. 12 ತಿಂಗಳ ಒಳಗೆ ಕಬ್ಬು ಕಟಾವು ಮಾಡಬೇಕು.
  5. ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಸ್, ಕಾಕಂಬಿ, ಎಥೆನಾಲ್, ಡಿಸ್ಟಿಲರಿಸ್, ಸಹವಿದ್ಯುತ್, ಬಯೋ ಕಾಂಪೋಸ್ಟ್, ಪಶು ಆಹಾರ – ಇತರೆ ಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಪಾಲು ನೀಡಬೇಕು.
  6. ಕಟಾವು ಮತ್ತು ಸಾಗಾಣಿಕ ವೆಚ್ಚಕ್ಕೆ ಸಂಬಂಧಪಟ್ಟಂತೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ನಡುವೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲು ಸಮಿತಿ ರಚಿಸಬೇಕು.
  7. ಕೇಂದ್ರ ಸರ್ಕಾರ ಕಬ್ಬಿಗೆ 2023-24ನೇ ಸಾಲಿಗೆ ಎಫ್‌ಆರ್‌ಪಿ ದರವನ್ನು ಟನ್‌ಗೆ 100 ರೂ.ಗಳು ಮಾತ್ರ ಹೆಚ್ಚಳ ಮಾಡಿರುವುದು ರೈತ ವಿರೋಧಿಯಾಗಿದ್ದು, ಇದನ್ನು 500 ರೂ.ಗೆ ನಿಗಧಿಪಡಿಸಬೇಕು.

ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಸಾಯಿಬಣ್ಣ ಗುಡುಬಾ, ದಿಲೀಪ್ ಕುಮಾರ್, ಸುಭಾಷ್ ಹೋಸಮನಿ, ರಾಯಪ್ಪ ಹುರಮುಂಜಿ, ಜಾವೇದ್ ಹುಸೈನ್, ಎಂ.ಬಿ ಸಜ್ಜನ್ ಸೇರಿದಂತೆ ಹಲವಾರು ಕಬ್ಬು ಬೆಳೆಗಾರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...