ಕಲಬುರಗಿ | ಸಮ್ಯಕ್ ಬುದ್ಧ ವಿಹಾರದ 5ನೇ ವಾರ್ಷಿಕೋತ್ಸವ : ರಮಾಬಾಯಿ ಅಂಬೇಡ್ಕರ್ ಜೀವನಚರಿತ್ರೆ ನಾಟಕ ಪ್ರದರ್ಶನ

Date:

ಕಮಲಾಪುರ ತಾಲ್ಲೂಕಿನ ಬಾಚನಾಳ ಗ್ರಾಮದ ಸಮ್ಯಕ್ ಬುದ್ಧ ವಿಹಾರದಲ್ಲಿ ಶನಿವಾರ 5ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ ಕಾರ್ಯಕ್ರಮ ಭಾವಪೂರ್ಣವಾಗಿ ಜರುಗಿತು.

ಕಾರ್ಯಕ್ರಮದ ಸಾನಿಧ್ಯವನ್ನು ಸಮ್ಯಕ್ ಬುದ್ಧ ವಿಹಾರ ಬಾಚನಾಳದ ಪೂಜ್ಯ ಭಂತೆ ಶಾಸನ ಸೂರಿ ಹಾಗೂ ಹಾಲಳ್ಳಿಯ ಬುದ್ಧ ವಿಹಾರದ ಪೂಜ್ಯ ಭಂತೆ ಧಮ್ಮದೀಪ ವಹಿಸಿದ್ದರು. ಅವರ ಆಶೀರ್ವಚನದಲ್ಲಿ ಬೌದ್ಧ ಧರ್ಮದ ತಾತ್ವಿಕತೆ, ನೈತಿಕ ಜೀವನ ಮತ್ತು ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗಮಯ ಬದುಕಿನ ಮಹತ್ವವನ್ನು ಅವರು ಸ್ಮರಿಸಿದರು.

ಕಾರ್ಯಕ್ರಮವನ್ನು ಕಮಲಾಪುರ ಪೊಲೀಸ್ ಠಾಣೆಯ ಪಿಎಸ್ಐ ಸುಖಾನಂದ ಸಿಂಗೆ ಉದ್ಘಾಟಿಸಿ ಮಾತನಾಡಿದ ಅವರು, ‘ಸಮಾಜದಲ್ಲಿ ಸಮಾನತೆ, ಶಾಂತಿ ಮತ್ತು ಬಾಂಧವ್ಯ ಬೆಳೆಸಲು ಬೌದ್ಧ ಧರ್ಮದ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಯುವಕರು ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ರಮಾಬಾಯಿ ಅವರ ಜೀವನದಿಂದ ಪ್ರೇರಣೆ ಪಡೆಯಬೇಕು,’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
515744

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಂತೆ ಶಾಸನ ಸೂರಿ ಮಾತನಾಡಿ, ‘ರಮಾಬಾಯಿ ಅಂಬೇಡ್ಕರ್ ಅವರಂತಹ ತ್ಯಾಗಿಗಳ ಧೈರ್ಯ, ಸಹನೆ ಮತ್ತು ಸಹಜ ಮಾನವೀಯತೆ ಇಂದು ಪ್ರತಿಯೊಬ್ಬ ಮಹಿಳೆಗೆ ಪ್ರೇರಣೆಯಾಗಬೇಕು. ಅವರ ಜೀವನ ಕಥೆ ಕೇವಲ ಅಂಬೇಡ್ಕರ್ ಕುಟುಂಬದ ಇತಿಹಾಸವಲ್ಲ, ಅದು ಸಮಾಜ ಪರಿವರ್ತನೆಯ ಬೆಳಕು,’ ಎಂದು ಹೇಳಿದರು.

515723

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬಾಚನಾಳ ಯುವಕ-ಯುವತಿಯರಿಂದ ರಮಾಬಾಯಿ ಅಂಬೇಡ್ಕರ್ ಅವರ ಜೀವನಕಥೆ ಆಧಾರಿತ ನಾಟಕ ಪ್ರದರ್ಶನ ನಡೆಯಿತು. ನಾಟಕದಲ್ಲಿ ಅವರ ದುರ್ಗತಿ, ಅಂಬೇಡ್ಕರ್‌ರಿಗೆ ನೀಡಿದ ಬೆಂಬಲ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಭಾವನಾತ್ಮಕವಾಗಿ ಚಿತ್ರಿಸಲಾಯಿತು. ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು ; ಬಾಸುಮಿಯ ನಾಯ್ಕೋಡಿ

ಕಾರ್ಯಕ್ರಮದಲ್ಲಿ ಪ್ರಕಾಶ ಮೂಲಭಾರತಿ, ನಿಂಗಪ್ಪ ಪ್ರಬುದ್ಧಕರ್, ಪಿಡಿಒ ಸೂರ್ಯಕಾಂತ ಕೆರಳ್ಳಿ, ಸಿದ್ದಮಲ್ಲಪ್ಪ ಮುಗಳಿ, ಲಕ್ಷ್ಮೀಬಾಯಿ ಗೊರಂಪಲ್ಲಿ, ಶೃತಿ ಗೊರಂಪಲ್ಲಿ, ವಿಠ್ಠಲ್ ಪ್ರಬುದ್ಧಕರ್, ನರೇಂದ್ರ ಬಿರಾದರ, ಮಂಜು ಸಿಕೆ, ಸಂತೋಷ ರಾಠೋಡ್, ಪ್ರಕಾಶ ಪವಾರ, ಸುರೇಶ ಜಾಬ, ದಿಲೀಪ ಭೂತಿ, ಮಲ್ಲೇಶಪ್ಪ ಮುತ್ತಂಗಿ, ರಮೇಶ ಬೆಳಕೋಟಾ, ಗುಂಡಪ್ಪ ಚಿಕೆ, ಗಿರೆಪ್ಪ ಶಾಖಾ, ಶಿವಕುಮಾರ ಧನ್ನೂರ, ಬಸವರಾಜ ಸಂತಾ, ರೇವಣಸಿದಪ್ಪ ಸುತಾರ, ರಾಜಕುಮಾರ ಪ್ರಬುದ್ಧಕರ್, ವಿದ್ಯಾಧರ್ ಮಾಳಗೆ, ಸತೀಶ ಜಾದವ, ಪುಂಡಲೀಕ ಹೇರೂರ, ಮಹಾದೇವ ಮುಡಬಿ, ನಾಗೇಶ ಭೂಪತಿ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...