ಕಲಬುರಗಿ | ಭಗತ್ ಸಿಂಗ್‌ 94ನೇ ಹುತಾತ್ಮ ದಿನ ಆಚರಣೆ

Date:

ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ ಹೇಳಿದರು.

ಕಲಬುರಗಿಯಲ್ಲಿ ಧೀರ ಹುತಾತ್ಮ ಭಗತ್ ಸಿಂಗ್‌ರವರ 94ನೇ ಹುತಾತ್ಮ ದಿನದ ಅಂಗವಾಗಿ ಎಐಡಿಎಸ್‌ಒ, ಎಐಡಿವಾಯ್‌ಒ, ಎಐಎಂಎಸ್‌ಎಸ್‌ ಸಂಘಟನೆಗಳು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿಯ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಡಾ. ಶಿವಗಂಗಾರುಮ್ಮ ರವರು ಮಾತನಾಡುತ್ತ, ಭಗತ್ ಸಿಂಗ್‌ರವರು ತಮ್ಮ ಚಿಕ್ಕವಯಸ್ಸಿನಿಂದಲೇ ವೈಚಾರಿಕ ಸ್ಪಷ್ಟತೆಯೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಅವರು ಎತ್ತಿ ಹಿಡಿದ ಸಮಾಜವಾದಿ ಭಾರತದ ಕನಸನ್ನು ಜನಮಾನಸದಲ್ಲಿ ಮೂಡಿಸಲು ಪ್ರಯತ್ನಿಸಿದರು. ಅವರು ಜೈಲಿನಲ್ಲಿ ಬರೆದಂತಹ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥದಲ್ಲಿ ತೀಕ್ಷ್ಣವಾದ ವೈಚಾರಿಕ ತಳಹದಿಯನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಗೆ ಮಾನವನಿಂದ ಮಾನವನ ಶೋಷಣೆಯನ್ನು ತಡೆಗಟ್ಟಲು ನಾವು ಶ್ರಮಿಸಬೇಕು, ಹಳೆ ವಿಚಾರ ಸಂಪ್ರದಾಯಗಳನ್ನು ಮುರಿದು ವೈಜ್ಞಾನಿಕ ಆಲೋಚನಾ ತಳಹದಿಯನ್ನು ಪಡೆದುಕೊಳ್ಳಬೇಕು ಎಂಬ ತಮ್ಮ ಹರಿತವಾದ ಬರಹದಿಂದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮೇಲೆ ತುಂಬಾ ಗಾಢವಾದ ಪರಿಣಾಮವನ್ನು ಬೀರಿದ್ದಾರೆ. ಇಂದಿನ ಯುವಜನರು ಅವರ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥವನ್ನು ತಪ್ಪದೆ ಓದಿ ಯುವಜನರು ವೈಚಾರಿಕವಾಗಿ ರಾಜಕೀಯವಾಗಿ ಪ್ರಭುದ್ಧರಾಗಬೇಕೆಂದು ಅವರು ಕರೆ ನೀಡಿದರು.

ಈ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಎಐಡಿವೈಒನ ಜಿಲ್ಲಾಧ್ಯಕ್ಷರಾದ ಜಗನ್ನಾಥ್ ಎಸ್.ಎಚ್‌ರವರು ಆಗಮಿಸಿ ಮಾತನಾಡಿದರು ಹಾಗೂ ಪ್ರಾಸ್ತವಿಕವಾಗಿ ಎಐಡಿ ಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ, ತುಳಜಾರಾಮ್ ಏನ್.ಕೆ ರವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಎಂಎಸ್‌ಎಸ್ ಕಲಬುರಗಿ ಜಿಲ್ಲಾಧ್ಯಕ್ಷ ಗುಂಡಮ್ಮ ಮಡಿವಾಳರವರು ವಹಿಸಿದ್ದರು.

ಕಲಬುರಗಿ ಜಿಲ್ಲೆಯ ಹಲವು ಭಾಗಗಳಿಂದ ವಿದ್ಯಾರ್ಥಿಗಳು ಯುವಜನತೆ ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದಾದ ನಂತರ ಜಿಲ್ಲೆಯ ಬೇರೆ ಬೇರೆ ಕಡೆಗಳಿಂದ ಬಂದಿರುವ ಕಲಾವಿದರಿಂದ ನಾಟಕ, ಡೊಳ್ಳಿನ ಕುಣಿತ, ಲಾವಣಿ, ಗುಂಪು ಗಾಯನ ಇಂತಹ ಸಂಸ್ಕೃತಿಕ ಚಟುವಟಿಕೆಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಸೇರಿರುವ ಸಭಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...