ಕಲಬುರಗಿ | ನಾಗಾವಿ ಐತಿಹಾಸಿಕ ಸ್ಥಳದ ಅಭಿವೃದ್ದಿಗೆ ಕಾರ್ಯ ಯೋಜನೆ: ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲನೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ನಾಗಾವಿಯಲ್ಲಿ 10-13 ಶತಮಾನಗಳ ನಡುವೆ ಘಟಿಕಾಸ್ಥಾನವಿದ್ದು, 400ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಠ-ಪ್ರವಚನಗಳಲ್ಲಿ ನಿರತರಾಗಿದ್ದರು. ಅವರಿಗೆ ಉಳಿದುಕೊಳ್ಳಲು ವಸತಿ ನಿಲಯಗಳ ವ್ಯವಸ್ಥೆಯಿದ್ದು, ಅತ್ಯುತ್ತಮ ಗ್ರಂಥಾಲಯವನ್ನೂ ಹೊಂದಿತ್ತು ಎಂಬ ಐತಿಹ್ಯಗಳಿವೆ. ಇಂತಹ ಇತಿಹಾಸವನ್ನು ಹೊಂದಿರುವ ಈ ಸ್ಥಳವನ್ನು ಉಳಿಸಿಕೊಂಡು, ಸ್ಮಾರಕಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿರುವುದರಿಂದ ನಾಗಾವಿ ದೇಗುಲಗಳು, ಶಾಸನ ಹಾಗೂ ಸ್ಮಾರಕಗಳನ್ನು ಒಳಗೊಂಡ ಸಂಕೀರ್ಣವನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

WhatsApp Image 2024 09 10 at 5.59.56 PM

ಪ್ರವಾಸಿಗರಿಗೆ ವಾಹನ ತಂಗುದಾಣ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದೂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಲ್ಲಮ್ಮ ದೇಗುಲ, ನಂದೀಶ್ವರ ದೇಗುಲ, ರಾಮೇಶ್ವರ ಹಾಗೂ ರಾವಣೇಶ್ವರ ದೇಗುಲಗಳು, ಕಡ್ಲೆ ಬಸವಣ್ಣ, ಹನುಮಾನ್‌ ಹಾಗೂ ವೀರಪ್ಪಯ್ಯ ದೇಗುಲಗಳು, ಮಧುಸೂಧನಾಲಯ, ಮಲ್ಲಯ್ಯನ ಹಾಗೂ ಈಶ್ವರನ ದೇಗುಲಗಳು, ಎರಡು ಮಸೀದಿಗಳು, ಒಂದು ಜೈನ ಬಸದಿಯನ್ನು ಒಳಗೊಂಡಂತೆ ನಾಗಾವಿ ಸಂಕೀರ್ಣವನ್ನು ರೂಪಿಸಲಾಗುವುದೆಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಪುರಾತತ್ವ ಇಲಾಖೆಯ ನಿರ್ದೇಶಕರಾದ ಸ್ಮಿತಾ ರೆಡ್ಡಿ ಸಭೆಯಲ್ಲಿ ಹಾಜರಿದ್ದರು.

WhatsApp Image 2024 09 10 at 5.59.19 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...